ಅದಕ್ಕೆ ಯೇಸು ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ; ಯಾವನಾದರೂ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಮನೆಯನ್ನಾಗಲೀ ಸಹೋದರರನ್ನಾಗಲೀ ಸಹೋದರಿಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯ ನ್ನಾಗಲೀ ಬಿಟು
Cross references
ಆಗ ಕರ್ತನು ಅಬ್ರಾಮನಿಗೆ--ನೀನು ನಿನ್ನ ದೇಶದೊಳಗಿಂದಲೂ ಬಂಧು ಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರ ಬಂದು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು.
ನಿಮ್ಮ ಸಾಮಾನುಗಳಿಗಾಗಿ ಚಿಂತಿಸಬೇಡಿರಿ; ಐಗುಪ್ತದೇಶದಲ್ಲಿರುವ ಉತ್ತಮ ವಾದದ್ದೆಲ್ಲಾ ನಿಮ್ಮದೇ ಎಂದು ಹೇಳು ಅಂದನು.
ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.
ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.
ಇದಲ್ಲದೆ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿ ಕಾರಿಗಳ ಮತ್ತು ಅರಸುಗಳ ಮುಂದಕ್ಕೆ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.
ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳ ಬೇಕೆಂದಿರುವ ಯಾವನಾದರೂ ಅದನ್ನು ಕಳಕೊಳ್ಳು ವನು; ಆದರೆ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಯಾವನು ತನ್ನ ಪ್ರಾಣವನ್ನು ಕಳ ಕೊಳ್ಳುವನೋ ಅವನು ಅದನ್ನು ಉಳಿಸಿಕೊಳ್ಳುವನು.
ಇದಲ್ಲದೆ ನನ್ನ ಸಂಗಡ ನನ್ನ ಕಷ್ಟಗಳಲ್ಲಿ ಎಡೆಬಿಡದೆ ಇದ್ದವರು ನೀವೇ.
ನಾನು ನಿಮ್ಮೊಂದಿಗೆ ಸುವಾರ್ತೆಯ ಫಲದಲ್ಲಿ ಪಾಲುಗಾರನಾಗಬೇಕೆಂದು ಸುವಾರ್ತೆ ಗೋಸ್ಕರವೇ ಇದನ್ನು ಮಾಡುತ್ತೇನೆ.
ಮೋಶೆಯು ದೊಡ್ಡವ ನಾದ ಮೇಲೆ ಫರೋಹನ ಕುಮಾರ್ತೆಯ ಮಗನೆನಿಸಿ ಕೊಳ್ಳುವದು ಬೇಡವೆಂದದ್ದು ನಂಬಿಕೆಯಿಂದಲೇ.
ನೀನು ಸಹಿಸಿ ಕೊಂಡು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿಮಿತ್ತ ಪ್ರಯಾಸಪಟ್ಟು ಬೇಸರಗೊಳ್ಳಲಿಲ್ಲ.