Home Bibles ಮಾರ್ಕ 10:33 · ಕನ್ನಡ ಬೈಬಲ್
ಮಾರ್ಕ 10:33 · ಕನ್ನಡ ಬೈಬಲ್

ಇಗೋ, ನಾವು ಯೆರೂಸಲೇ ಮಿಗೆ ಹೋಗುತ್ತೇವೆ; ಮತ್ತು ಮನುಷ್ಯಕುಮಾರನು ಪ್ರಧಾನಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡು ವನು; ಅವರು ಆತನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳಿಗೆ ಒಪ್ಪಿಸುವರು.

Cross references

ಮತ್ತಾಯ 16:21

ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.

ಮತ್ತಾಯ 17:22

ಅವರು ಗಲಿಲಾಯಲ್ಲಿ ಇನ್ನೂ ವಾಸವಾಗಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು.

ಮತ್ತಾಯ 20:17

ತರುವಾಯ ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ಹನ್ನೆರಡು ಮಂದಿ ಶಿಷ್ಯರನ್ನು ದಾರಿಯಲ್ಲಿ ವಿಂಗಡವಾಗಿ ಕರೆದು ಅವರಿಗೆ--

ಮತ್ತಾಯ 26:66

ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವನು ಮರಣಕ್ಕೆ ಪಾತ್ರನು ಅಂದರು.

ಮತ್ತಾಯ 27:2

ಮತ್ತು ಅವರು ಆತನನ್ನು ಕಟ್ಟಿ ತೆಗೆದುಕೊಂಡು ಹೋಗಿ ಅಧಿಪತಿಯಾದ ಪೊಂತ್ಯ ಪಿಲಾತನಿಗೆ ಒಪ್ಪಿಸಿದರು.

ಮಾರ್ಕ 8:31

ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.

ಮಾರ್ಕ 9:31

ಯಾಕಂದರೆ ಆತನು ತನ್ನ ಶಿಷ್ಯರಿಗೆ ಬೋಧಿಸುತ್ತಾ-- ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಆತನು ಕೊಲ್ಲಲ್ಪಟ್ಟ ತರುವಾಯ ಮೂರನೆಯ ದಿನದಲ್ಲಿ ಏಳುವನು ಅಂದನು.

ಮಾರ್ಕ 14:64

ನೀವು ಈ ದೇವದೂಷಣೆಯನ್ನು ಕೇಳಿದ್ದೀರಲ್ಲಾ; ನಿಮಗೆ ಹೇಗೆ ತೋರುತ್ತದೆ ಎಂದು ಕೇಳಲು ಅವರೆಲ್ಲರೂ ಅವನು ಮರಣದಂಡನೆ ಹೊಂದತಕ್ಕವನು ಎಂದು ತೀರ್ಪುಮಾಡಿದರು

ಮಾರ್ಕ 15:1

ಬೆಳಗಾದ ಕೂಡಲೆ ಪ್ರಧಾನ ಯಾಜಕರು ಹಿರಿಯರ ಶಾಸ್ತ್ರಿಗಳ ಮತ್ತು ಸಭೆಯವ ರೆಲ್ಲರೊಂದಿಗೆ ಆಲೋಚನೆ ಮಾಡಿಕೊಂಡು ಯೇಸು ವನ್ನು ಕಟ್ಟಿತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿ ದರು.

ಲೂಕ 9:22

ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.

ಲೂಕ 18:31

ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.

ಲೂಕ 23:1

ಆಗ ಜನಸಮೂಹವೆಲ್ಲವೂ ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದು ಕೊಂಡು ಹೋದರು.

ಲೂಕ 23:21

ಆದರೆ ಅವರು--ಅವನನ್ನು ಶಿಲುಬೆಗೆ ಹಾಕಿಸು, ಅವನನ್ನು ಶಿಲುಬೆಗೆ ಹಾಕಿಸು ಎಂದು ಕೂಗುತ್ತಾ ಹೇಳಿದರು.

ಲೂಕ 24:6

ಆತನು ಇಲ್ಲಿಲ್ಲ, ಎದ್ದಿದ್ದಾನೆ; ಆತನು ಇನ್ನೂ ಗಲಿಲಾಯ ದಲ್ಲಿದ್ದಾಗಲೇ--

ಯೋಹಾನ 18:28

ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ.

ಯೋಹಾನ 19:11

ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.

ಅಪೋಸ್ತಲರ ಕೃತ್ಯಗಳು 3:13

ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.

ಅಪೋಸ್ತಲರ ಕೃತ್ಯಗಳು 13:27

ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್‌ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.

ಅಪೋಸ್ತಲರ ಕೃತ್ಯಗಳು 20:22

ಇಗೋ, ನಾನು ಈಗ ಆತ್ಮನಿರ್ಬಂಧವುಳ್ಳವನಾಗಿ ಯೆರೂಸಲೇ ಮಿಗೆ ಹೋಗುತ್ತೇನೆ. ಅಲ್ಲಿ ನನಗೆ ಏನು ಸಂಭವಿಸು ವವೋ ನಾನರಿಯೆ.

ಯಾಕೋಬ 5:6

ನೀತಿವಂತನಿಗೆ ದಂಡನೆಯನ್ನು ವಿಧಿಸಿ ಕೊಂದು ಹಾಕಿ ದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ.

Interlinear

Choose Theme