ಯಾಕಂದರೆ ಮನುಷ್ಯಕು ಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಆದರೆ ಸೇವೆ ಮಾಡುವದಕ್ಕೂ ತನ್ನ ಪ್ರಾಣವನ್ನು ಅನೇಕರಿಗೋಸ್ಕರ ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.
Cross references
ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
ಆದರೆ ನೀವು ಹಾಗಿರಬಾರದು. ನಿಮ್ಮೊಳಗೆ ಅತಿದೊಡ್ಡವನಾಗಿರು ವವನು ಚಿಕ್ಕವನಂತೆ ಇರಲಿ; ಮುಖ್ಯಸ್ಥನಾಗಿರುವವನು ಸೇವೆ ಮಾಡುವವನಂತೆ ಇರಲಿ.
ತಂದೆಯು ನನ್ನನ್ನು ತಿಳಿದಿರುವಂತೆ ನಾನು ತಂದೆಯನ್ನು ತಿಳಿದಿರುತ್ತೇನೆ; ಕುರಿಗಳಿಗೋಸ್ಕರ ನನ್ನ ಪ್ರಾಣವನ್ನು ಕೊಡುತ್ತೇನೆ.
ಹಾಗಾದರೆ ನಿಮ್ಮ ಕರ್ತನೂ ಬೋಧಕನೂ ಆಗಿರುವ ನಾನು ನಿಮ್ಮ ಕಾಲುಗಳನ್ನು ತೊಳೆದರೆ ನೀವು ಸಹ ಒಬ್ಬರ ಕಾಲುಗಳನ್ನೊಬ್ಬರು ತೊಳೆಯತಕ್ಕದ್ದು.
ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿ ಇರಲಿ.
ಪೂರ್ಣ ಗೌರವದಿಂದ ತನ್ನ ಮಕ್ಕಳನ್ನೂ ಅಧೀನದಲ್ಲಿ ಟ್ಟುಕೊಂಡು ಸ್ವಂತ ಮನೆಯವರನ್ನು ಚೆನ್ನಾಗಿ ಆಳುವವ ನಾಗಿರಬೇಕು.
ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
ಹೀಗೆ ಆತನು ಮಗನಾಗಿದ್ದರೂ ತಾನು ಅನುಭ ವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತು ಕೊಂಡನು.
ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.