ತರುವಾಯ ಅವರು ಯೆರಿಕೋವಿಗೆ ಬಂದರು; ಆತನು ತನ್ನ ಶಿಷ್ಯರೊಡನೆಯೂ ಬಹುಸಂಖ್ಯೆಯ ಜನರೊಡನೆಯೂ ಯೆರಿಕೋವಿನಿಂದ ಹೊರಟಾಗ ತಿಮಾಯನ ಮಗನಾದ ಕುರುಡ ಬಾರ್ತಿಮಾಯನು ಹೆದ್ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆಬೇಡು ತ್ತಿದ್ದನು.
Cross references
ಅವರು ಯೆರಿಕೋವಿನಿಂದ ಹೊರಟು ಹೋಗುತ್ತಿರುವಾಗ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು.
ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು.
ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.
ಇದಾದ ಮೇಲೆ ಆತನು ಯೆರಿಕೋವಿನ ಸವಿಾಪಕ್ಕೆ ಬಂದಾಗ ಒಬ್ಬಾನೊಬ್ಬ ಕುರುಡನು ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆ ಬೇಡು ತ್ತಿದ್ದನು;
ಹೀಗಿರುವದರಿಂದ ನೆರೆಯವರೂ ಅವನು ಮೊದಲು ಕುರುಡನಾಗಿದ್ದಾಗ ಅವನನ್ನು ನೋಡಿದವರೂ-- ಕೂತುಕೊಂಡು ಭಿಕ್ಷೆ ಬೇಡುತ್ತಿದ್ದವನು ಇವನೇ ಅಲ್ಲವೋ ಅಂದರು.
ಹುಟ್ಟು ಕುಂಟನಾಗಿದ್ದ ಒಬ್ಬಾನೊಬ್ಬ ಮನುಷ್ಯನು ದೇವಾಲಯಕ್ಕೆ ಹೋಗುತ್ತಿದ್ದವರಿಂದ ಭಿಕ್ಷೆ ಬೇಡುವದಕ್ಕಾಗಿ ಅವನನ್ನು ಕೆಲವರು ಹೊತ್ತು ಕೊಂಡು ಹೋಗಿ ದೇವಾಲಯದ ಸುಂದರವೆಂಬ ಬಾಗಲಿನಲ್ಲಿ ಪ್ರತಿ ದಿನ ಕೂಡ್ರಿಸುತ್ತಿದ್ದರು.