ಆತನು ನಜರೇತಿನ ಯೇಸು ಎಂದು ಅವನು ಕೇಳಿದಾಗ ಕೂಗಲಾರಂಭಿಸಿ--ಯೇಸುವೇ, ದಾವೀದನಕುಮಾರನೇ, ನನ್ನನ್ನು ಕರುಣಿಸು ಅಂದನು.
Cross references
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ಯೇಸು ಕ್ರಿಸ್ತನ ವಂಶಾವಳಿಯ ಪುಸ್ತಕವು; ಆತನು ದಾವೀದನ ಮಗನು, ಆತನು ಅಬ್ರ ಹಾಮನ ಮಗನು.
ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು; ಇದರಿಂದ--ಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು.
ಯೇಸು ಅಲ್ಲಿಂದ ಹೊರಟಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸುತ್ತಾ--ದಾವೀದ ಕುಮಾರನೇ, ನಮ್ಮ ಮೇಲೆ ಕರುಣೆ ಇಡು ಎಂದು ಕೂಗಿ ಹೇಳುತ್ತಿದ್ದರು.
ಆಗ ಜನರೆಲ್ಲರು ವಿಸ್ಮಯ ಗೊಂಡವರಾಗಿ--ಈತನು ದಾವೀದನ ಕುಮಾರ ನಲ್ಲವೇ ಅಂದರು.
ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು.
ಆಗ ಇಗೋ, ಯೇಸು ಹಾದುಹೋಗುತ್ತಿದ್ದಾನೆಂದು ದಾರಿಯ ಮಗ್ಗುಲಲ್ಲಿ ಕೂತಿದ್ದ ಇಬ್ಬರು ಕುರುಡರು ಕೇಳಿ--ಓ ಕರ್ತನೇ, ದಾವೀದನಕುಮಾರನೇ, ನಮ್ಮ ಮೇಲೆ ಕರುಣೆಯಿಡು ಎಂದು ಕೂಗಿ ಹೇಳಿದರು.
ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.
ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.
ಕ್ರಿಸ್ತನ ವಿಷಯ ವಾಗಿ ನೀವು ಏನು ನೆನಸುತ್ತೀರಿ? ಆತನು ಯಾರ ಮಗನು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ದಾವೀದನಕುಮಾರನು ಅಂದರು.
ಅವನು ದ್ವಾರಾಂಗಳ ದೊಳಗೆ ಹೋದಾಗ ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ--ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು ಅಂದಳು.
ಅವನು--ನಮ್ಮನ್ನು ಬಿಟ್ಟುಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನೇ ಎಂದು ಕೂಗಿ ಹೇಳಿದನು.
ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಕ್ಕೆ ಹೋಗಿ ಓದುವದಕ್ಕಾಗಿ ಎದ್ದುನಿಂತನು.
ಜನಸಮೂಹವು ಹಾದುಹೋಗುವದನ್ನು ಇವನು ಕೇಳಿಸಿಕೊಂಡು ಅದೇನೆಂದು ವಿಚಾರಿಸಿದನು.
ಅದಕ್ಕೆ ನತಾನಯೇಲನು ಅವನಿಗೆ--ನಜರೇತಿ ನಿಂದ ಒಳ್ಳೇದೇನಾದರೂ ಬರುವದೋ? ಅಂದಾಗ ಫಿಲಿಪ್ಪನು ಅವನಿಗೆ--ಬಂದು ನೋಡು ಅಂದನು.
ಬೇರೆಯವರು--ಈತನೇ ಆ ಕ್ರಿಸ್ತನು ಅಂದರು. ಆದರೆ ಕೆಲವರು--ಕ್ರಿಸ್ತನು ಗಲಿಲಾಯದಿಂದ ಬರುವನೋ?
ಅವರು ಪ್ರತ್ಯುತ್ತರವಾಗಿ ಅವನಿಗೆ--ನೀನು ಸಹ ಗಲಿಲಾಯದವನೋ? ಗಲಿ ಲಾಯದಲ್ಲಿ ಪ್ರವಾದಿಯು ಏಳುವದೇ ಇಲ್ಲ, ಪರಿ ಶೋಧಿಸಿ ನೋಡು ಅಂದರು.ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು.
ಇದಲ್ಲದೆ ಪಿಲಾತನು ಒಂದು ಶಿರೋನಾಮವನ್ನು ಬರೆಯಿಸಿ ಅದನ್ನು ಶಿಲುಬೆಯ ಮೇಲೆ ಇರಿಸಿದನು. ಆ ಬರಹವು ಏನಂದರೆ--ಯೆಹೂದ್ಯರ ಅರಸನಾದ ನಜರೇತಿನ ಯೇಸು ಎಂಬದೇ.
ನಜ ರೇತಿನ ಯೇಸು ಈ ಸ್ಥಳವನ್ನು (ದೇವಾಲಯವನ್ನು) ಕೆಡವಿ ಮೋಶೆಯು ನಮಗೆ ಒಪ್ಪಿಸಿಕೊಟ್ಟ ಆಚಾರಗಳನ್ನು ಮಾರ್ಪಡಿಸುವನು ಎಂದು ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.
ತರುವಾಯ ಆತನು ಅವನನ್ನು ತೆಗೆದು ಹಾಕಿ ದಾವೀದನು ಅವರ ಅರಸನಾಗಿರುವಂತೆ ಎಬ್ಬಿಸಿದನು; ಇದಲ್ಲದೆ ಆತನು ಅವನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನಾನು ಇಷಯನ ಮಗನಾದ ದಾವೀದನನ್ನು ಕಂಡುಕೊಂಡೆನು, ಅವನು ನನ್ನ ಹೃದಯವು ಒಪ್ಪುವ ಮನುಷ್ಯನು ಮತ್ತು ಅವನು ನನ್ನ ಚಿ
ಅದು ಯಾವದೆಂದರೆ, ಆತನು ಶಾರೀರಕವಾಗಿ ದಾವೀದನ ಸಂತಾನದಲ್ಲಿ ಹುಟ್ಟಿದಾತನೂ ನಮ್ಮ ಕರ್ತನೂ ಆಗಿರುವ ದೇವರಕುಮಾರನಾದ ಯೇಸು ಕ್ರಿಸ್ತನ ವಿಷಯವಾ ದದ್ದೇ;
ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.