ಅವನು ಸುಮ್ಮನಿರುವಂತೆ ಅನೇಕರು ಅವನಿಗೆ ಖಂಡಿತವಾಗಿ ಹೇಳಿದರು; ಆದರೆ ಅವನು ಇನ್ನೂ ಹೆಚ್ಚಾಗಿ--ದಾವೀದನಕುಮಾರನೇ, ನನ್ನನ್ನು ಕರುಣಿಸು ಎಂದು ಕೂಗಿದನು.
Cross references
ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು.
ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
ಅದನ್ನು ನಿನಗೆ ಕಟ್ಟುವ ಹಾಗೆ ನಿನಗೋ ಸ್ಕರ ವಾದಿಸುವವರು ಯಾರೂ ಇರುವದಿಲ್ಲ. ವಾಸಿ ಮಾಡುವ ಔಷಧಗಳು ನಿನಗೆ ಇಲ್ಲ.
ಆದರೆ ಆತನು ಆಕೆಗೆ ಒಂದು ಮಾತೂ ಉತ್ತರ ಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು--ಆಕೆಯನ್ನು ಕಳುಹಿಸಿಬಿಡು, ಯಾಕಂದರೆ ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ ಎಂದು ಆತನನ್ನು ಬೇಡಿಕೊಂಡರು.
ತರುವಾಯ ಆತನು ತನ್ನ ಕೈಗಳನ್ನಿಟ್ಟು ಪ್ರಾರ್ಥಿಸು ವಂತೆ ಕೆಲವರು ಚಿಕ್ಕಮಕ್ಕಳನ್ನು ಆತನ ಬಳಿಗೆ ತಂದರು. ಆಗ ಶಿಷ್ಯರು ಅವರನ್ನು ಗದರಿಸಿದರು.
ಆದರೆ ಅವರು ಸುಮ್ಮನಿ ರುವಂತೆ ಜನರ ಸಮೂಹವು ಅವರನ್ನು ಗದರಿಸಿದರು. ಆದಾಗ್ಯೂ ಅವರು--ಓ ಕರ್ತನೇ, ದಾವೀದನಕುಮಾ ರನೇ, ನಮ್ಮ ಮೇಲೆ ಕರುಣೆ ಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.
ಆತನು ಇನ್ನೂ ಮಾತನಾಡುತ್ತಿರುವಾಗ ಸಭಾ ಮಂದಿರದ ಅಧಿಕಾರಿಯ ಮನೆಯಿಂದ ಕೆಲವರು ಅಲ್ಲಿಗೆ ಬಂದು--ನಿನ್ನ ಮಗಳು ಸತ್ತಿದ್ದಾಳೆ; ಬೋಧಕ ನಿಗೆ ಇನ್ನು ನೀನು ತೊಂದರೆಪಡಿಸುವದು ಯಾಕೆ? ಅಂದರು.
ಆ ಸ್ತ್ರೀಯು ಸುರೋಪೊಯಿನಿಕ ಜನಾಂ ಗದವಳಾದ ಒಬ್ಬ ಗ್ರೀಕಳು. ಆಕೆಯು ತನ್ನ ಮಗಳನ್ನು ಹಿಡಿದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿ ಕೊಂಡಳು.
ಆತನು ಅವರಿಗೆ--ನಿಮ್ಮಲ್ಲಿ ಯಾವನಿಗಾದರೂ ಒಬ್ಬ ಸ್ನೇಹಿತನಿರಲಾಗಿ ಮಧ್ಯರಾತ್ರಿಯಲ್ಲಿ ಅವನ ಬಳಿಗೆ ಹೋಗಿ ಅವನಿಗೆ--ಸ್ನೇಹಿತನೇ, ಮೂರು ರೊಟ್ಟಿಗಳನ್ನು ನನಗೆ ಕಡವಾಗಿ ಕೊಡು;
ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು--
ಮುಂದೆ ಹೋಗುತ್ತಿದ್ದವರು ಅವನು ಸುಮ್ಮನಿರು ವಂತೆ ಅವನನ್ನು ಗದರಿಸಿದರು. ಆದರೂ ಅವನು--ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.
ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.