ಅದಕ್ಕೆ ಯೇಸು ಅವನಿಗೆ--ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ ಅಂದನು. ಕೂಡಲೆ ಅವನು ತನ್ನ ದೃಷ್ಟಿಯನ್ನು ಹೊಂದಿ ಆ ಮಾರ್ಗದಲ್ಲಿ ಯೇಸು ವನ್ನು ಹಿಂಬಾಲಿಸಿದನು.
Cross references
ಆತನು ಹೇಳಲು ಆಯಿತು; ಆಜ್ಞಾಪಿಸಲು ಅದು ಸ್ಥಿರವಾಯಿತು.
ಕರ್ತನು ಸೆರೆಯವರನ್ನು ಬಿಡಿಸುತ್ತಾನೆ. ಕರ್ತನು ಕುರುಡರ ಕಣ್ಣುಗಳನ್ನು ತೆರೆಯುತ್ತಾನೆ; ಕರ್ತನು ದೀನರನ್ನು ಎತ್ತು ತ್ತಾನೆ; ಕರ್ತನು ನೀತಿವಂತರನ್ನು ಪ್ರೀತಿಮಾಡುತ್ತಾನೆ;
ಆ ದಿನದಲ್ಲಿ ಕಿವುಡರು ಪುಸ್ತಕದ ಮಾತುಗಳನ್ನು ಕೇಳುವರು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ ಅಂಧಕಾರದೊಳಗಿಂದಲೂ ನೋಡುವವು.
ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು.
ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.
ಆದರೆ ಯೇಸು ಹಿಂತಿರುಗಿ ಆಕೆಯನ್ನು ನೋಡಿ--ಮಗಳೇ, ಸಮಾಧಾನದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ ಅಂದನು. ಅದೇ ಗಳಿಗೆಯಲ್ಲಿ ಆ ಸ್ತ್ರೀಯು ಸ್ವಸ್ಥಳಾದಳು.
ಆತನು ಮನೆಯೊಳಕ್ಕೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು; ಆಗ ಯೇಸು ಅವರಿಗೆ--ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ ಎಂದು ಕೇಳಿದಾಗ ಅವರು ಆತನಿಗೆ--ಕರ್ತನೇ, ಹೌದು ಎಂದು ಅಂದರು.
ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
ಆಗ ಜನರು ದೆವ್ವ ಹಿಡಿದಿದ್ದವನೂ ಕುರುಡನೂ ಮೂಕನೂ ಆಗಿದ್ದವನನ್ನು ಆತನ ಬಳಿಗೆ ತಂದರು; ಮತ್ತು ಆತನು ಅವನನ್ನು ಸ್ವಸ್ಥಮಾಡಿದ್ದರಿಂದ ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ನೋಡಿದನು.
ಆಗ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಓ ಸ್ತ್ರೀಯೇ, ನಿನ್ನ ನಂಬಿಕೆಯು ದೊಡ್ಡದು; ನೀನು ಇಷ್ಟಪಟ್ಟಂತೆಯೇ ನಿನಗಾಗಲಿ ಎಂದು ಹೇಳಿ ದನು. ಮತ್ತು ಆಕೆಯ ಮಗಳು ಅದೇ ಗಳಿಗೆಯಲ್ಲಿ ಸ್ವಸ್ಥಳಾದಳು.
ಆಗ ಕುರುಡರು ಮತ್ತು ಕುಂಟರು ದೇವಾಲಯ ದಲ್ಲಿ ಆತನ ಬಳಿಗೆ ಬಂದರು; ಆತನು ಅವರನ್ನು ಸ್ವಸ್ಥ ಮಾಡಿದನು.
ಆತನು ಬಂದು ಆಕೆಯ ಕೈಯನ್ನು ಹಿಡಿದು ಅವಳನ್ನು ಮೇಲಕ್ಕೆ ಎತ್ತಿದನು; ಕೂಡಲೆ ಜ್ವರವು ಆಕೆಯನ್ನು ಬಿಟ್ಟು ಹೋಯಿತು; ಆಕೆಯು ಅವರಿಗೆ ಉಪಚಾರ ಮಾಡಿದಳು.
ಆಗ ಆತನು ಆಕೆಗೆ--ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥ ಮಾಡಿತು; ಸಮಾಧಾನದಿಂದ ಹೋಗು; ನಿನ್ನ ಜಾಡ್ಯದಿಂದ ನೀನು ಸ್ವಸ್ಥಳಾಗು ಅಂದನು.
ತರುವಾಯ ಆತನು ತಿರಿಗಿ ಅವನ ಕಣ್ಣುಗಳ ಮೇಲೆ ತನ್ನ ಕೈಗಳನ್ನಿಟ್ಟು ಅವನು ಮೇಲಕ್ಕೆ ನೋಡುವಂತೆ ಮಾಡಿದನು; ಆಗ ಅವನು ಗುಣಹೊಂದಿದವನಾಗಿ ಪ್ರತಿ ಮನುಷ್ಯನನ್ನು ಸ್ಪಷ್ಟವಾಗಿ ನೋಡಿದನು.
ಆಗ ಆತನು ಆ ಸ್ತ್ರೀಗೆ--ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿಯದೆ, ಸಮಾಧಾನದಿಂದ ಹೋಗು ಅಂದನು.
ಇದಲ್ಲದೆ ದುರಾತ್ಮಗಳಿಂ ದಲೂ ರೋಗಗಳಿಂದಲೂ ಸ್ವಸ್ಥಮಾಡಲ್ಪಟ್ಟ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟು ಹೋಗಿದ್ದ ಮಗ್ದಲಿನ ಎಂದು ಕರೆಯಲ್ಪಟ್ಟ ಮರಿಯಳೂ
ಅವರಿಗೆ ಯಾವನಾದರೂ ಈ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಯಾವನಾದರೂ ನನ್ನನ್ನು ಅಂಗೀಕರಿಸಿಕೊಂಡರೆ ನನ್ನನ್ನು ಕಳುಹಿಸಿ ಕೊಟ್ಟಾತನನ್ನೇ ಅಂಗೀಕರಿಸಿಕೊಳ್ಳುತ್ತಾನೆ. ಯಾಕಂ ದರೆ ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡ
ನಾನು ಈ ಲೋಕದಲ್ಲಿರುವವರೆಗೆ ಲೋಕದ ಬೆಳಕಾಗಿದ್ದೇನೆ ಅಂದನು.
ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿ ದ್ದದ್ದನ್ನು ಲೋಕಾದಿಯಿಂದ ಕೇಳಿರಲಿಲ್ಲ.
ಯೇಸು--ನೋಡದವರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನ್ಯಾಯತೀರ್ಪಿಗೋಸ್ಕರ ನಾನು ಈ ಲೋಕಕ್ಕೆ ಬಂದಿದ್ದೇನೆ ಅಂದನು.
ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು