ಆಗ ಶಾಸ್ತ್ರಿಗಳೂ ಪ್ರಧಾನಯಾಜಕರೂ ಅದನ್ನು ಕೇಳಿ ಆತನನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸಿದರು. ಆದರೆ ಜನರೆಲ್ಲರೂ ಆತನ ಬೋಧನೆಗೆ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಆತನಿಗೆ ಭಯಪಟ್ಟರು.
Cross references
ಅಹಾಬನು ಎಲೀಯನನ್ನು ನೋಡಿದಾಗ ಅವನಿಗೆ--ಇಸ್ರಾಯೇಲ್ಯರನ್ನು ಕಳವಳ ಗೊಳಿಸುವವನು ನೀನಲ್ಲವೋ ಅಂದನು.
ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು;
ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.
ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ--ಇವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು.
ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ತರುವಾಯ ಜನರು ಆತನ ಬೋಧನೆಗೆ ಆಶ್ಚರ್ಯ ಪಟ್ಟರು.ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿ--ದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ--
ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.
ಪ್ರಧಾನ ಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮ ವಿಷಯದಲ್ಲಿಯೇ ಆತನು ಅದನ್ನು ಹೇಳಿದನೆಂದು ಅವರು ತಿಳುಕೊಂಡರು.ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.
ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು
ಅವರು ಆತನ ಬೋಧನೆಗೆ ಆಶ್ಚರ್ಯಪಟ್ಟರು; ಯಾಕಂದರೆ ಆತನು ಶಾಸ್ತ್ರಿಗಳಂತೆ ಅಲ್ಲ, ಅಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
ಫರಿಸಾ ಯರು ಹೊರಟುಹೋಗಿ ಕೂಡಲೆ ತಾವು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧ ವಾಗಿ ಹೆರೋದ್ಯರೊಂದಿಗೆ ಆಲೋಚನೆ ಮಾಡಿಕೊಂಡರು.
ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು.
ಆದರೆ ನಾವು--ಮನುಷ್ಯರಿಂದ ಎಂದು ಹೇಳುವದಾದರೆ ನಮಗೆ ಜನರ ಭಯವಿದೆ; ಯಾಕಂದರೆ ಯೋಹಾನನು ನಿಜವಾಗಿಯೂ ಪ್ರವಾದಿಯೆಂದು ಎಲ್ಲರೂ ಎಣಿಸಿಕೊಂಡಿರುವರು ಎಂದು ಅವರು ತಮ್ಮಲ್ಲಿ ತರ್ಕಿಸಿಕೊಂಡರು.ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು.
ಆಗ ಆತನು ತಮಗೆ ವಿರೋಧವಾಗಿ ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದು ಆತನನ್ನು ಹಿಡಿಯುವದಕ್ಕೆ ಸಂದರ್ಭ ನೋಡಿದರು. ಆದರೆ ಅವರು ಜನರಿಗೆ ಹೆದರಿದರು. ಅವರು ಆತನನ್ನು ಬಿಟ್ಟು ಹೊರಟು ಹೋದರು.
ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವದಕ್ಕೆ ಇನ್ನೂ ಎರಡು ದಿವಸ ಗಳಿದ್ದಾಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ಉಪಾಯ ದಿಂದ ಆತನನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಹವಣಿಸುತ್ತಿದ್ದರು.
ಎಲ್ಲರೂ ಆತನಿಗೆ ಸಾಕ್ಷಿಕೊಟ್ಟು ಆತನ ಬಾಯಿಂದ ಹೊರಟ ಕೃಪಾವಾಕ್ಯಗಳಿಗಾಗಿ ಆಶ್ಚರ್ಯಪಟ್ಟು-- ಈತನು ಯೋಸೇಫನ ಮಗನಲ್ಲವೇ ಅಂದರು.
ಇದಲ್ಲದೆ ಆತನು ಪ್ರತಿದಿನವೂ ದೇವಾಲಯ ದಲ್ಲಿ ಬೋಧಿಸುತ್ತಿದ್ದನು. ಆದರೆ ಪ್ರಧಾನಯಾಜಕರೂ ಶಾಸ್ತ್ರಿಗಳೂ ಜನರ ಪ್ರಮುಖರೂ ಆತನನ್ನು ಕೊಲ್ಲು ವದಕ್ಕೆ ಹವಣಿಸುತ್ತಿದ್ದರು.ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.
ಅದೇ ಗಳಿಗೆಯಲ್ಲಿ ಪ್ರಧಾನಯಾಜಕರೂ ಶಾಸ್ತ್ರಿಗಳೂ ಆತನ ಮೇಲೆ ಕೈ ಹಾಕುವದಕ್ಕೆ ಹವಣಿ ಸಿದರು; ಯಾಕಂದರೆ ಅತನು ತಮಗೆ ವಿರೋಧ ವಾಗಿಯೇ ಈ ಸಾಮ್ಯವನ್ನು ಹೇಳಿದ್ದನೆಂದು ಅವರು ತಿಳಿದುಕೊಂಡಿದ್ದರು; ಆದರೆ ಅವರು ಜನರಿಗೆ ಭಯಪಟ್ಟರು.
ಅದಕ್ಕೆ ಅಧಿಕಾರಿಗಳು ಪ್ರತ್ಯುತ್ತರವಾಗಿ--ಈ ಮನುಷ್ಯನಂತೆ ಯಾವನೂ ಎಂದೂ ಮಾತನಾಡಲಿಲ್ಲ ಅಂದರು.
ಅವರು ಕೂಡಿ ಕೊಂಡು ಆ ದಿನದಿಂದ ಆತನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.
ಇವರಿಗೆ ಯಾವ ನಾದರೂ ಕೇಡನ್ನು ಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ನುಂಗಿ ಬಿಡುವದು; ಇವರಿಗೆ ಯಾವನಾದರೂ ಕೇಡನ್ನು ಉಂಟು ಮಾಡಬೇಕೆಂದಿದ್ದರೆ ಅವನು ಈ ರೀತಿಯಾಗಿ ಕೊಲೆಯಾಗಬೇಕು.