Home Bibles ಮಾರ್ಕ 11:18 · ಕನ್ನಡ ಬೈಬಲ್
ಮಾರ್ಕ 11:18 · ಕನ್ನಡ ಬೈಬಲ್

ಆಗ ಶಾಸ್ತ್ರಿಗಳೂ ಪ್ರಧಾನಯಾಜಕರೂ ಅದನ್ನು ಕೇಳಿ ಆತನನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸಿದರು. ಆದರೆ ಜನರೆಲ್ಲರೂ ಆತನ ಬೋಧನೆಗೆ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಆತನಿಗೆ ಭಯಪಟ್ಟರು.

Cross references

1 ಅರಸುಗಳು 18:17

ಅಹಾಬನು ಎಲೀಯನನ್ನು ನೋಡಿದಾಗ ಅವನಿಗೆ--ಇಸ್ರಾಯೇಲ್ಯರನ್ನು ಕಳವಳ ಗೊಳಿಸುವವನು ನೀನಲ್ಲವೋ ಅಂದನು.

1 ಅರಸುಗಳು 21:20

ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು;

1 ಅರಸುಗಳು 22:8

ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.

1 ಅರಸುಗಳು 22:18

ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ--ಇವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು.

ಯೆಶಾಯ 49:7

ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು.

ಮತ್ತಾಯ 7:28

ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ತರುವಾಯ ಜನರು ಆತನ ಬೋಧನೆಗೆ ಆಶ್ಚರ್ಯ ಪಟ್ಟರು.ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.

ಮತ್ತಾಯ 21:15

ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿ--ದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ--

ಮತ್ತಾಯ 21:38

ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.

ಮತ್ತಾಯ 21:45

ಪ್ರಧಾನ ಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮ ವಿಷಯದಲ್ಲಿಯೇ ಆತನು ಅದನ್ನು ಹೇಳಿದನೆಂದು ಅವರು ತಿಳುಕೊಂಡರು.ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.

ಮತ್ತಾಯ 26:3

ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು

ಮಾರ್ಕ 1:22

ಅವರು ಆತನ ಬೋಧನೆಗೆ ಆಶ್ಚರ್ಯಪಟ್ಟರು; ಯಾಕಂದರೆ ಆತನು ಶಾಸ್ತ್ರಿಗಳಂತೆ ಅಲ್ಲ, ಅಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.

ಮಾರ್ಕ 3:6

ಫರಿಸಾ ಯರು ಹೊರಟುಹೋಗಿ ಕೂಡಲೆ ತಾವು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧ ವಾಗಿ ಹೆರೋದ್ಯರೊಂದಿಗೆ ಆಲೋಚನೆ ಮಾಡಿಕೊಂಡರು.

ಮಾರ್ಕ 6:20

ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು.

ಮಾರ್ಕ 11:32

ಆದರೆ ನಾವು--ಮನುಷ್ಯರಿಂದ ಎಂದು ಹೇಳುವದಾದರೆ ನಮಗೆ ಜನರ ಭಯವಿದೆ; ಯಾಕಂದರೆ ಯೋಹಾನನು ನಿಜವಾಗಿಯೂ ಪ್ರವಾದಿಯೆಂದು ಎಲ್ಲರೂ ಎಣಿಸಿಕೊಂಡಿರುವರು ಎಂದು ಅವರು ತಮ್ಮಲ್ಲಿ ತರ್ಕಿಸಿಕೊಂಡರು.ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು.

ಮಾರ್ಕ 12:12

ಆಗ ಆತನು ತಮಗೆ ವಿರೋಧವಾಗಿ ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದು ಆತನನ್ನು ಹಿಡಿಯುವದಕ್ಕೆ ಸಂದರ್ಭ ನೋಡಿದರು. ಆದರೆ ಅವರು ಜನರಿಗೆ ಹೆದರಿದರು. ಅವರು ಆತನನ್ನು ಬಿಟ್ಟು ಹೊರಟು ಹೋದರು.

ಮಾರ್ಕ 14:1

ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವದಕ್ಕೆ ಇನ್ನೂ ಎರಡು ದಿವಸ ಗಳಿದ್ದಾಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ಉಪಾಯ ದಿಂದ ಆತನನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಹವಣಿಸುತ್ತಿದ್ದರು.

ಲೂಕ 4:22

ಎಲ್ಲರೂ ಆತನಿಗೆ ಸಾಕ್ಷಿಕೊಟ್ಟು ಆತನ ಬಾಯಿಂದ ಹೊರಟ ಕೃಪಾವಾಕ್ಯಗಳಿಗಾಗಿ ಆಶ್ಚರ್ಯಪಟ್ಟು-- ಈತನು ಯೋಸೇಫನ ಮಗನಲ್ಲವೇ ಅಂದರು.

ಲೂಕ 19:47

ಇದಲ್ಲದೆ ಆತನು ಪ್ರತಿದಿನವೂ ದೇವಾಲಯ ದಲ್ಲಿ ಬೋಧಿಸುತ್ತಿದ್ದನು. ಆದರೆ ಪ್ರಧಾನಯಾಜಕರೂ ಶಾಸ್ತ್ರಿಗಳೂ ಜನರ ಪ್ರಮುಖರೂ ಆತನನ್ನು ಕೊಲ್ಲು ವದಕ್ಕೆ ಹವಣಿಸುತ್ತಿದ್ದರು.ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.

ಲೂಕ 20:19

ಅದೇ ಗಳಿಗೆಯಲ್ಲಿ ಪ್ರಧಾನಯಾಜಕರೂ ಶಾಸ್ತ್ರಿಗಳೂ ಆತನ ಮೇಲೆ ಕೈ ಹಾಕುವದಕ್ಕೆ ಹವಣಿ ಸಿದರು; ಯಾಕಂದರೆ ಅತನು ತಮಗೆ ವಿರೋಧ ವಾಗಿಯೇ ಈ ಸಾಮ್ಯವನ್ನು ಹೇಳಿದ್ದನೆಂದು ಅವರು ತಿಳಿದುಕೊಂಡಿದ್ದರು; ಆದರೆ ಅವರು ಜನರಿಗೆ ಭಯಪಟ್ಟರು.

ಯೋಹಾನ 7:46

ಅದಕ್ಕೆ ಅಧಿಕಾರಿಗಳು ಪ್ರತ್ಯುತ್ತರವಾಗಿ--ಈ ಮನುಷ್ಯನಂತೆ ಯಾವನೂ ಎಂದೂ ಮಾತನಾಡಲಿಲ್ಲ ಅಂದರು.

ಯೋಹಾನ 11:53

ಅವರು ಕೂಡಿ ಕೊಂಡು ಆ ದಿನದಿಂದ ಆತನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.

ಅಪೋಸ್ತಲರ ಕೃತ್ಯಗಳು 24:25

ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.

ಪ್ರಕಟನೆ 11:5

ಇವರಿಗೆ ಯಾವ ನಾದರೂ ಕೇಡನ್ನು ಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ನುಂಗಿ ಬಿಡುವದು; ಇವರಿಗೆ ಯಾವನಾದರೂ ಕೇಡನ್ನು ಉಂಟು ಮಾಡಬೇಕೆಂದಿದ್ದರೆ ಅವನು ಈ ರೀತಿಯಾಗಿ ಕೊಲೆಯಾಗಬೇಕು.

Interlinear

Choose Theme