ಅವರು ತಿರಿಗಿ ಯೆರೂಸಲೇಮಿಗೆ ಬಂದರು; ಮತ್ತು ಆತನು ದೇವಾಲಯದಲ್ಲಿ ತಿರುಗಾಡುತ್ತಿರುವಾಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನ ಬಳಿಗೆ ಬಂದು
Cross references
ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ?
ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.
ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವದಕ್ಕೆ ಇನ್ನೂ ಎರಡು ದಿವಸ ಗಳಿದ್ದಾಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ಉಪಾಯ ದಿಂದ ಆತನನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಹವಣಿಸುತ್ತಿದ್ದರು.
ಇದಾದ ಮೇಲೆ ಆ ದಿವಸಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಬೋಧಿಸುತ್ತಾ ಸುವಾರ್ತೆಯನ್ನು ಸಾರುತ್ತಿದ್ದಾಗ ಪ್ರಧಾನ ಯಾಜಕರು ಶಾಸ್ತ್ರಿಗಳು ಹಿರಿಯರ ಕೂಡ ಆತನ ಬಳಿಗೆ ಬಂದು
ಯೇಸು ದೇವಾಲಯದಲ್ಲಿ ಸೊಲೊಮೋನನ ದ್ವಾರಾಂಗಳ ದೊಳಗೆ ತಿರುಗಾಡುತ್ತಿದ್ದನು;
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ; ಯೆಹೂದ್ಯರು ಯಾವಾಗಲೂ ಕೂಡುವಂಥ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಉಪದೇಶಿಸಿದ್ದೆನು; ಗುಪ್ತವಾಗಿ ಯಾವದನ್ನೂ ನಾನು ಹೇಳಲಿಲ್ಲ.
ಮರುದಿನ ಅವರ ಅಧಿಕಾರಿಗಳೂ ಹಿರಿಯರೂ ಶಾಸ್ತ್ರಿಗಳೂ
ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು