ಆಗ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ ಎಂದು ಹೇಳಿದನು. ಇದಕ್ಕೆ ಅವರು ಆತನ ವಿಷಯದಲ್ಲಿ ಆಶ್ಚರ್ಯಪಟ್ಟರು.
Cross references
ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ.
ನನ್ನ ಮಗನೇ, ನಿನ್ನ ಹೃದಯ ವನ್ನು ನನಗೆ ಕೊಡು; ನನ್ನ ಮಾರ್ಗಗಳನ್ನು ನಿನ್ನ ಕಣ್ಣುಗಳು ದೃಷ್ಟಿಯಿಟ್ಟು ನೋಡಲಿ.
ನನ್ನ ಮಗನೇ, ಕರ್ತನಿಗೂ ಅರಸನಿಗೂ ಭಯಪಡು; ಭಯಪಡದವರ ಗೊಡವೆಗೆ ಹೋಗ ಬೇಡ.
ದೇವರಿಗೆ ನೀನು ಪ್ರಮಾಣವನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ; ಮೂಢರಲ್ಲಿ ಆತನಿಗೆ ಸಂತೋಷವಿಲ್ಲ; ನೀನು ಪ್ರಮಾಣಮಾಡಿದ್ದನು ತೀರಿಸು.
ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.
ಅವನು ಮನೆ ಯೊಳಕ್ಕೆ ಬಂದಾಗ ಯೇಸು ಮುಂದಾಗಿ ಅವನಿಗೆ--ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋ ಕದ ರಾಜರು ಯಾರಿಂದ ಕಪ್ಪವನ್ನು ಇಲ್ಲವೆ ತೆರಿಗೆ ಯನ್ನು ತಕ್ಕೊಳ್ಳುತ್ತಾರೆ? ತಮ್ಮ ಮಕ್ಕಳಿಂದಲೋ ಇಲ್ಲವೆ ಅನ್ಯರಿಂದಲೋ ಎಂದು ಕೇಳಿದನು.
ಇವುಗಳನ್ನು ಅವರು ಕೇಳಿದಾಗ ಆಶ್ಚರ್ಯಪಟ್ಟರು; ಮತ್ತು ಆತನನ್ನು ಬಿಟ್ಟು ಹೊರಟುಹೋದರು.
ಜನ ಸಮೂಹದವರು ಇದನ್ನು ಕೇಳಿ ಆತನ ಬೋಧನೆಗೆ ವಿಸ್ಮಯಗೊಂಡರು.
ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.
ನೀನು ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು; ಇದು ಮೊದ ಲನೆಯ ದೈವಾಜ್ಞೆಯಾಗಿದೆ.
ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ.
ಇಲ್ಲವೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಳಪಡಿಸುವವರಾಗಿದ್ದು ಅನೀತಿಯನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿಸುವವರೋ ಎಂಬಂತೆ ನೀತಿಕಾರ್ಯಗಳನ್ನು ನಡಿಸುವ ಸಾಧನಗಳನ್ನಾಗಿ ನಿಮ್ಮ ಅಂಗಗಳನ್ನು ದೇವರಿಗೆ ಒಳಪಡಿಸಿರಿ.
ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.
ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
ಆದರೆ ಎಲ್ಲರೂ ಪ್ರವಾದಿಸುವಾಗ ಒಬ್ಬ ಅವಿಶ್ವಾಸಿ ಯಾಗಲಿ ಇಲ್ಲವೆ ತಿಳುವಳಿಕೆಯಿಲ್ಲದವನಾಗಲಿ ಒಳಗೆ ಬಂದರೆ ಅವನು ಎಲ್ಲರಿಂದ ಅರುಹು ಹೊಂದುತ್ತಾನೆ, ಎಲ್ಲರಿಂದ ಪರಿಶೋಧಿತನಾಗುತ್ತಾನೆ.
ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ.
ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.