ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾದರೂ ದೇವರಶಕ್ತಿಯನ್ನಾದರೂ ತಿಳಿಯದೆ ಇರುವದರಿಂದ ತಪ್ಪು ಮಾಡುತ್ತೀರಲ್ಲವೋ?
Cross references
ಕರ್ತನಿಗೆ ಅಸಾಧ್ಯವಾದದ್ದು ಯಾವದಾದರೂ ಇದೆಯೋ? ಬರುವ ವರುಷ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ತಿರಿಗಿ ಬರುವೆನು; ಆಗ ಸಾರಳಿಗೆ ಮಗನು ಇರುವನು ಅಂದನು.
ನನ್ನ ವಿಮೋಚಕನು ಜೀವಿಸುತ್ತಾನೆಂದೂ ಆತನು ಕಡೆಯ ದಿನದಲ್ಲಿ ಭೂಮಿಯ ಮೇಲೆ ನಿಲ್ಲುವನೆಂದೂ ತಿಳಿದಿದ್ದೇನೆ;
ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.
ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ.
ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.
ಆದದರಿಂದ ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ಅವರನ್ನು ಕರಗಿಸಿ ಶೋಧಿ ಸುತ್ತೇನೆ; ನನ್ನ ಜನರ ಮಗಳಿಗೋಸ್ಕರ ನಾನು ಹೇಗೆ ಮಾಡಲಿ?
ಕರ್ತನು ಹೀಗೆ ಹೇಳು ತ್ತಾನೆ--ದಾವೀದನಿಗೆ ಇಸ್ರಾಯೇಲಿನ ಮನೆಯ ಸಿಂಹಾಸನದಲ್ಲಿ ಕೂತುಕೊಳ್ಳುವ ಮನುಷ್ಯನು ಇಲ್ಲದೆ ಹೋಗುವದಿಲ್ಲ.
ಕರ್ತನ ಕೈ ನನ್ನ ಮೇಲೆ ಇತ್ತು; ಅದು ಕರ್ತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಗಳ ಮಧ್ಯ ತಳದಲ್ಲಿ ನನ್ನನ್ನು ಬಿಟ್ಟಿತು.
ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.
ಆತನು ಎರಡು ದಿನಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು; ಮೂರನೆಯ ದಿನದಲ್ಲಿ ಆತನೇ ನಮ್ಮನ್ನು ಎಬ್ಬಿಸುವನು; ನಾವು ಆತನ ದೃಷ್ಟಿಯಲ್ಲಿ ಜೀವಿಸುವೆವು.
ನಾನು ಬಲಿಯನ್ನಲ್ಲ ಕರುಣೆಯನ್ನೇ ಮತ್ತು ದಹನ ಬಲಿಗಳಿಗಿಂತ ದೇವರ ತಿಳುವಳಿಕೆಯನ್ನೇ ಹೆಚ್ಚಾಗಿ ಅಪೇಕ್ಷಿಸಿದ್ದೇನೆ.
ನಾನು ನನ್ನ ನ್ಯಾಯಪ್ರಮಾಣದ ದೊಡ್ಡ ಸಂಗತಿ ಗಳನ್ನು ಅವನಿಗೆ ಬರೆದಿದ್ದೇನೆ; ಆದರೆ ಅವುಗಳು ಅನ್ಯವಾದವುಗಳೆಂದು ಎಣಿಸಲ್ಪಟ್ಟಿವೆ.
ನಾನು ಸಮಾಧಿಯ ಶಕ್ತಿಯಿಂದ ಅವರನ್ನು ಈಡು ಕೊಟ್ಟು ವಿಮೋಚಿಸುವೆನು; ಮರಣದಿಂದ ಅವರನ್ನು ಬಿಡಿಸುವೆನು. ಓ ಮರಣವೇ, ನಾನು ನಿನ್ನ ಬಾಧೆಗ ಳಾಗಿರುವೆನು; ಓ ಸಮಾಧಿಯೇ, ನಾನು ನಿನ್ನ ನಾಶನ ವಾಗಿದ್ದೇನೆ; ಪಶ್ಚಾತ್ತಾಪವು ನನ್ನ ಕಣ್ಣುಗಳಿಂದ ಮರೆ ಯಾಗಿದೆ.
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ.
ಆಗ ಯೇಸು ಅವರನ್ನು ದೃಷ್ಟಿಸುತ್ತಾ--ಮನುಷ್ಯರಿಗೆ ಇದು ಅಸಾಧ್ಯವಾಗಿದೆ; ಆದರೆ ದೇವರಿಗೆ ಅಲ್ಲ; ಯಾಕಂದರೆ ದೇವರಿಗೆ ಎಲ್ಲವೂ ಸಾಧ್ಯವಾಗಿವೆ ಅಂದನು.
ಯಾಕಂದರೆ ದೇವರಿಗೆ ಅಸಾಧ್ಯವಾದದ್ದು ಯಾವದೂ ಇಲ್ಲ ಎಂದು ಹೇಳಿ ದನು.
ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.
ಯಾಕಂದರೆ ಆತನು ಸತ್ತವರೊಳಗಿಂದ ತಿರಿಗಿ ಎದ್ದೇಳುವದು ಅಗತ್ಯವೆಂಬ ಬರಹವು ಅವರಿಗೆ ಇನ್ನೂ ತಿಳಿದಿರಲಿಲ್ಲ.
ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.
ನಾವು ತಾಳ್ಮೆಯ ಮತ್ತು ಬರಹಗಳ ಆದರಣೆಯ ಮೂಲಕ ನಿರೀಕ್ಷೆ ಹೊಂದುವಂತೆ ಪೂರ್ವಕಾಲದಲ್ಲಿ ಬರೆಯಲ್ಪಟ್ಟವುಗಳೆಲ್ಲಾ ನಮಗೆ ಉಪದೇಶಿಸುವ ದಕ್ಕಾಗಿಯೇ ಬರೆಯಲ್ಪಟ್ಟವು.
ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದ ದ್ದೆಂಬದನ್ನೂ ಆತನ ಬಲಾತಿಶಯವು ಎಷ್ಟು ಮಹತ್ತಾದ ದ್ದೆಂಬದನ್ನೂ ನೀವು ತಿಳುಕೊಳ್ಳು ವಂತೆ ಅನುಗ್ರಹಿಸಲಿ.
ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.