ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ-- ಕ್ರಿಸ್ತನು ದಾವೀದನಕುಮಾರನು ಎಂದು ಶಾಸ್ತ್ರಿಗಳು ಹೇಳುವದು ಹೇಗೆ?
Cross references
ಯೇಸು ಅಲ್ಲಿಂದ ಹೊರಟಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸುತ್ತಾ--ದಾವೀದ ಕುಮಾರನೇ, ನಮ್ಮ ಮೇಲೆ ಕರುಣೆ ಇಡು ಎಂದು ಕೂಗಿ ಹೇಳುತ್ತಿದ್ದರು.
ಫರಿಸಾಯರು ಕೂಡಿ ಬಂದಿರುವಾಗ ಯೇಸು ಅವರಿಗೆ--
ಅದೇ ಗಳಿಗೆಯಲ್ಲಿ ಯೇಸು ಜನಸಮೂಹಗಳಿಗೆ--ಒಬ್ಬ ಕಳ್ಳನಿಗೆ ವಿರೋಧವಾಗಿ ಬರುವಂತೆ ಕತ್ತಿಗಳೊಂದಿಗೂ ದೊಣ್ಣೆಗಳೊಂದಿಗೂ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ? ನಾನು ದಿನಾ ಲು ನಿಮ್ಮ ಸಂಗಡ ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ;
ಅವರು ತಿರಿಗಿ ಯೆರೂಸಲೇಮಿಗೆ ಬಂದರು; ಮತ್ತು ಆತನು ದೇವಾಲಯದಲ್ಲಿ ತಿರುಗಾಡುತ್ತಿರುವಾಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನ ಬಳಿಗೆ ಬಂದು
ಇದಲ್ಲದೆ ಆತನು ಪ್ರತಿದಿನವೂ ದೇವಾಲಯ ದಲ್ಲಿ ಬೋಧಿಸುತ್ತಿದ್ದನು. ಆದರೆ ಪ್ರಧಾನಯಾಜಕರೂ ಶಾಸ್ತ್ರಿಗಳೂ ಜನರ ಪ್ರಮುಖರೂ ಆತನನ್ನು ಕೊಲ್ಲು ವದಕ್ಕೆ ಹವಣಿಸುತ್ತಿದ್ದರು.ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.
ಇದಾದ ಮೇಲೆ ಆ ದಿವಸಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಬೋಧಿಸುತ್ತಾ ಸುವಾರ್ತೆಯನ್ನು ಸಾರುತ್ತಿದ್ದಾಗ ಪ್ರಧಾನ ಯಾಜಕರು ಶಾಸ್ತ್ರಿಗಳು ಹಿರಿಯರ ಕೂಡ ಆತನ ಬಳಿಗೆ ಬಂದು
ಆತನು ಅವ ರಿಗೆ--ಕ್ರಿಸ್ತನು ದಾವೀದನ ಮಗನೆಂದು ಅವರು ಹೇಳುವದು ಹೇಗೆ?
ಆತನು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು ರಾತ್ರಿಯಲ್ಲಿ ಹೊರಗೆ ಹೋಗಿ ಎಣ್ಣೇ ಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡ ದಲ್ಲಿ ವಾಸಿಸುತ್ತಿದ್ದನು.ಜನರೆಲ್ಲರೂ ಬೆಳಗಿನ ಜಾವದಲ್ಲಿ ಆತನ ಬಳಿಗೆ ದೇವಾಲಯದಲ್ಲಿ ಆತನ ಉಪದೇಶವನ್ನು ಕೇಳುವದಕ್ಕಾಗಿ ಬರುತ್ತಿದ್ದರು.
ಆದರೆ ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತೆಹೇಮೆಂಬ ಊರಿನಿಂದಲೂ ಬರುವನೆಂದು ಬರಹವು ಹೇಳುತ್ತದಲ್ಲವೇ? ಅಂದರು.
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ; ಯೆಹೂದ್ಯರು ಯಾವಾಗಲೂ ಕೂಡುವಂಥ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಉಪದೇಶಿಸಿದ್ದೆನು; ಗುಪ್ತವಾಗಿ ಯಾವದನ್ನೂ ನಾನು ಹೇಳಲಿಲ್ಲ.