ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
Cross references
ವೈರಿಯು ಆಕೆಯ ಎಲ್ಲಾ ರಮ್ಯವಾದ ವಸ್ತುಗಳ ಮೇಲೆ ತನ್ನ ಕೈ ಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರ ಬಾರದೆಂದು ನೀನು ಆಜ್ಞಾಪಿಸಿದ ಅನ್ಯ ಜನಾಂಗಗಳು ತನ್ನ ಪರಿಶುದ್ಧ ಸ್ಥಳದಲ್ಲಿ ಸೇರಿರುವದನ್ನು ನೋಡಿದ್ದಾಳೆ.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಹೃದಯದಲ್ಲಿಯೂ ಶರೀರದ ಲ್ಲಿಯೂ ಸುನ್ನತಿಯಿಲ್ಲದ ಯಾವೊಬ್ಬ ಪರಕೀಯನೂ ಇಸ್ರಾಯೇಲಿನ ಮಕ್ಕಳೊಳಗಿರುವ ಯಾವೊಬ್ಬ ಅಪರಿಚಿತನೂ ನನ್ನ ಪರಿಶುದ್ಧಸ್ಥಳದೊಳಗೆ ಪ್ರವೇಶಿಸ ಬಾರದು.
ಆ ಮೇಲೆ ಒಬ್ಬ ಪರಿಶುದ್ಧನು ಮಾತನಾಡುವದನ್ನು ಕೇಳಿದೆನು; ಮಾತನಾಡಿದಾತನಿಗೆ ಮತ್ತೊಬ್ಬ ಪರಿ ಶುದ್ಧನು ಹೇಳಿದ್ದೇನಂದರೆ--ನಿತ್ಯ ಯಜ್ಞವನ್ನು ನಿಲ್ಲಿಸು ವದೂ ಹಾಳು ಮಾಡುವ ಅಪರಾಧವನ್ನು ತಡೆಯು ವದೂ ಪರಿಶುದ್ಧ ಸ್ಥಳವನ್ನೂ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವದೂ ಆಗುವಂತೆ ಕನಸು ಎಷ್ಟು ಕಾಲ ನಿಲ್ಲುವದು ಅಂದಾಗ
ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯ ಯಜ್ಞವನ್ನು ನೀಗಿಸಿ, ಹಾಳು ಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವದು.
ಪ್ರತಿದಿನದ ಯಜ್ಞವು ಸಕಾಲಕ್ಕೆ ತೆಗೆದುಹಾಕಲ್ಪಟ್ಟು ಹಾಳುಮಾಡುವಂಥ ಅಸಹ್ಯವು ಇರಿಸಲ್ಪಡುವ ವರೆಗೂ ಸಾವಿರದ ಇನ್ನೂರ ತೊಂಭತ್ತೊಂಭತ್ತು ದಿನಗಳು ಇರುವವು.
ಇದಲ್ಲದೆ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ ಎಂದು ಕೇಳಿದ್ದಕ್ಕೆ ಅವರು ಆತ ನಿಗೆ--ಕರ್ತನೇ, ಹೌದು ಎಂದು ಹೇಳಿದರು.
ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)
ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.
ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿರುವದನ್ನು ಕೇಳಿ--ನೀನು ಓದುವದು ನಿನಗೆ ತಿಳಿಯುತ್ತದೋ ಅನ್ನಲು
ಕೊಳಲು ವೀಣೆ ಮೊದಲಾದ ಅಚೇತನವಾದ್ಯಗಳು ಸ್ವರಗಳಲಿ ಯಾವ ಭೇದವನ್ನೂ ತೋರಿಸದಿದ್ದರೆ ಊದಿದ್ದು ಅಥವಾ ಬಾರಿಸಿದ್ದು ತಿಳಿಯುವದು ಹೇಗೆ?
ಸಹೋದರರೇ, ಬುದ್ಧಿಯ ವಿಷಯ ದಲ್ಲಿ ಬಾಲಕರಾಗಿರಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಾಗಿಯೇ ಇದ್ದು ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಬೇಕು.
ಇದನ್ನು ಓದುವಂಥ ವನೂ ಈ ಪ್ರವಾದನಾ ವಾಕ್ಯಗಳನ್ನು ಕೇಳುವಂಥವರೂ ಅದರಲ್ಲಿ ಬರೆದಿರುವಂಥವುಗಳನ್ನು ಕಾಪಾಡುವಂಥ ವರೂ ಧನ್ಯರು. ಯಾಕಂದರೆ ಕಾಲವು ಸವಿಾಪವಾಗಿದೆ.
ಇದರಲ್ಲಿ ಜ್ಞಾನವಿದೆ. ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ; ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ; ಅವನ ಅಂಕೆಯು ಆರುನೂರ ಅರವತ್ತಾರು.