ಯಾಕಂದರೆ ಆ ದಿವಸಗಳಲ್ಲಿ ಸಂಕಟವಿರುವದು; ಅಂಥದ್ದು ದೇವರು ಸೃಷ್ಟಿಸಿದ ಸೃಷ್ಟಿ ಮೊದಲುಗೊಂಡು ಈ ಸಮಯದವರೆಗೂ ಆಗಲಿಲ್ಲ ಇಲ್ಲವೆ ಆಗುವದೂ ಇಲ್ಲ.
Cross references
ನಿನ್ನ ಮುಂದೆ ಇದ್ದ ಪೂರ್ವದ ದಿವಸಗಳನ್ನು ದೇವರು ಭೂಮಿಯ ಮೇಲೆ ಮನುಷ್ಯನನ್ನು ಸೃಷ್ಟಿಸಿ ದಂದಿನಿಂದ ವಿಚಾರಿಸು; ಆಕಾಶದ ಈ ಕಡೆಯಿಂದ ಆ ಕಡೆಯವರೆಗೂ ವಿಚಾರಿಸು; ಇದರಂತೆ ದೊಡ್ಡ ಕಾರ್ಯ ಉಂಟಾಯಿತೇ? ಇಲ್ಲವೆ ಇದರಂತೆ ಕೇಳ ಲ್ಪಟ್ಟಿತೇ?
ಕರ್ತನು ನಿನ್ನ ಬಾಧೆಗಳನ್ನೂ ನಿನ್ನ ಸಂತತಿಯ ಬಾಧೆಗಳನ್ನೂ ಆಶ್ಚರ್ಯವಾಗ ಮಾಡುವನು; ಅವು ದೊಡ್ಡದಾದ ಮತ್ತು ಸ್ಥಿರವಾದ ಬಾಧೆಗಳೂ ಘೋರ ವಾದ ಮತ್ತು ಸ್ಥಿರವಾದ ರೋಗಗಳೂ ಆಗುವವು.
ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ ದೂರ ದೇಶದಿಂದ ಬರುವ ಅನ್ಯನೂ ಆ ದೇಶದ ಬಾಧೆಗಳನ್ನೂ ಕರ್ತನು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡಿ
ಆದದರಿಂದ ನಿಮ್ಮನ್ನು ಕತ್ತಿಗೆ ನೇಮಿಸು ವೆನು ನೀವೆಲ್ಲರೂ ಕೊಲೆಗೆ ಬೊಗ್ಗಿಕೊಳ್ಳುವಿರಿ. ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ; ನಾನು ಮಾತನಾಡಲು ನೀವು ಕೇಳಿಸಿಕೊಳ್ಳಲಿಲ್ಲ; ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ, ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.
ಹಾದು ಹೋಗುವ ವರೆಲ್ಲರೇ, ಇದು ನಿಮಗೆ ಏನೂ ಅಲ್ಲವೋ? ಇಗೋ, ಕರ್ತನ ಕೋಪ ಉರಿಯುವ ದಿನದಲ್ಲಿ ನನ್ನನ್ನು ಸಂಕಟಪಡಿಸಿದ ನನ್ನ ದುಃಖದ ಹಾಗೆ ಬೇರೆ ಯಾವ ದುಃಖವಾದರೂ ಇದ್ದರೆ ನೋಡಿರಿ.
ಯೆರೂಸಲೇಮಿನ ಕುಮಾರ್ತೆಯೇ, ನಾನು ಯಾವದನ್ನು ನಿನಗೆ ಸಾಕ್ಷಿಯ ನ್ನಾಗಿಡಲಿ? ಯಾವದನ್ನು ನಿನಗೆ ಸಮಾನ ಮಾಡಲಿ? ಚೀಯೋನಿನ ಮಗಳಾದ ಕನ್ಯೆಯೇ, ನಿನ್ನನ್ನು ಆದರಿಸುವ ಹಾಗೆ ನಾನು ಯಾವದನ್ನು ನಿನಗೆ ಸಮಾನಮಾಡಲಿ? ನಿನ್ನ ಮುರಿಯುವಿಕೆಯು ಸಮುದ್ರದ ಹಾಗೆ ದೊಡ್ಡ ದಾಗಿದೆ, ನಿನ್ನನ್ನು ಗುಣಪಡಿಸುವವರು ಯಾರು?
ನನ್ನ ಜನರ ಮಗಳ ಅಕ್ರಮದ ದಂಡನೆಯು ಸೊದೋಮಿನ ಪಾಪದ ದಂಡನೆಗಿಂತ ದೊಡ್ಡದು; ಅದು ಕ್ಷಣಮಾತ್ರದಲ್ಲಿ ಕೆಡವಿ ಹಾಕಲ್ಪಟ್ಟಿತು! ಅವಳನ್ನು ಯಾವ ಕೈಗಳೂ ತಡೆಯಲಿಲ್ಲ.
ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ.
ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
ಆ ಕಾಲದಲ್ಲಿ ನಿನ್ನ ಜನರ ಮಕ್ಕಳಿಗೋಸ್ಕರ ನಿಲ್ಲುವ ಮಹಾಪ್ರಧಾನನಾದ ವಿಾಕಾ ಯೇಲನು ಏಳುವನು; ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನ ವರೆಗೂ ಸಂಭವಿಸದಂತ ಸಂಕಟವು ಸಂಭವಿಸುವದು. ಆಗ ನಿನ್ನ ಜನರೊಳಗೆ ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಹೆಸರು ಬರೆಯಲ್ಪಟ್ಟಿದೆಯೋ ಅವರೆಲ್ಲರೂ ಬಿಡುಗಡೆಯಾಗು ವರು.
ಕತ್ತಲೆಯೂ ಮೊಬ್ಬೂ ಉಳ್ಳ ದಿವಸವೂ; ಮೇಘವೂ ಕಾರ್ಗತ್ತಲೂ ಉಳ್ಳ ದಿವಸ ವೂ; ಬೆಟ್ಟಗಳ ಮೇಲೆ ಹಾಸಿರುವ ಉದಯದ ಹಾಗಿದೆ. ದೊಡ್ಡ ಬಲವಾದ ಜನವು; ಅದರ ಹಾಗೆ ಎಂದೂ ಇದ್ದದ್ದಿಲ್ಲ; ಅದರ ತರುವಾಯ ತಲತಲಾಂತರಗಳ ವರುಷಗಳ ವರೆಗೆ ಇನ್ನು ಇರುವದೇ ಇಲ್ಲ.
ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ, ಆಮೇಲೆ ಎಂದಿಗೂ ಆಗುವದಿಲ್ಲ.
ಆದರೆ ಸೃಷ್ಟಿಯ ಪ್ರಾರಂಭದಿಂದಲೇ ದೇವರು ಅವರನ್ನು ಗಂಡು ಹೆಣ್ಣಾಗಿ ಮಾಡಿದನು.
ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ.