ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾವನೂ ರಕ್ಷಣೆ ಹೊಂದುವ ದಿಲ್ಲ. ಆದರೆ ಆಯಲ್ಪಟ್ಟವರಿಗಾಗಿ ಅಂದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿ ದ್ದಾನೆ.
Cross references
ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.
ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.
ಕರ್ತನು ಹೇಳುವದೇನಂದರೆ--ದ್ರಾಕ್ಷೇಗೊನೆ ಯಲ್ಲಿ ಹೊಸದ್ರಾಕ್ಷಾರಸ ಕಂಡುಕೊಳ್ಳುವದನ್ನು ಒಬ್ಬನು ನೋಡಿ--ಕೆಡಿಸಬೇಡ, ಅದರಲ್ಲಿ ಆಶೀರ್ವಾದ ಉಂಟೆಂದು ಹೇಳುವದು ಹೇಗೋ ಹಾಗೆಯೇ ನನ್ನ ಸೇವಕರಿಗೋಸ್ಕರ ಅವರನ್ನೆಲ್ಲಾ ನಾನು ಕೆಡಿಸಿ ಬಿಡದ ಹಾಗೆ ಮಾಡುವೆನು.
ಕರ್ತನು--ಇದಲ್ಲದೆ ಸಮಸ್ತ ದೇಶದಲ್ಲಿ ಆಗುವದೇನಂದರೆ-- ಅದರಲ್ಲಿ ಎರಡು ಪಾಲು ಕಡಿಯಲ್ಪಟ್ಟು ಸಾಯುವದು; ಆದರೆ ಮೂರನೇ ಪಾಲು ಅದರಲ್ಲಿ ಬಿಡಲ್ಪಡುವದು.ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
ಆ ದಿವಸಗಳು ಕಡಿಮೆ ಮಾಡಲ್ಪಡದಿದ್ದರೆ ಯಾವನೂ ಉಳಿಯು ವದಿಲ್ಲ; ಆದರೆ ಆಯಲ್ಪಟ್ಟವರಿಗಾಗಿ ಆ ದಿವಸಗಳು ಕಡಿಮೆ ಮಾಡಲ್ಪಡುವವು.
ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ.
ಅವರು ಕೂಡ ಇನ್ನು ಅಪ ನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಕಸಿಕಟ್ಟಲ್ಪಡುವರು; ಯಾಕಂದರೆ ದೇವರು ಅವರನ್ನು ತಿರಿಗಿ ದೇವರು ಕಸಿಕಟ್ಟುವದಕ್ಕೆ ಸಮರ್ಥನಾಗಿದ್ದಾನೆ.
ಸುವಾರ್ತೆಯ ವಿಷಯದಲ್ಲಿ ಅವರು ನಿಮ್ಮ ನಿಮಿತ್ತವಾಗಿ ವೈರಿಗಳಾ ಗಿದ್ದಾರೆ; ಆದರೆ ಆಯ್ಕೆಯ ವಿಷಯದಲ್ಲಿ ಅವರು ಪಿತೃಗಳ ನಿಮಿತ್ತವಾಗಿ ಪ್ರಿಯರಾಗಿದ್ದಾರೆ.