ಮನುಷ್ಯಕುಮಾರನು ದೂರದ ಪ್ರಯಾಣವನ್ನು ಕೈಕೊಂಡು ತನ್ನ ಮನೆಯನ್ನು ಬಿಟ್ಟು ತನ್ನ ಸೇವಕರಿಗೆ ಅಧಿಕಾರವನ್ನು ಮತ್ತು ಪ್ರತಿಯೊ ಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಲು ಕಾಯು ವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇದ್ದಾನೆ.
Cross references
ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು.
ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳೊಂದಿಗೆ ಮಾತನಾಡು ಮತ್ತು ಅವ ರಿಗೆ--ನಾನು ಒಂದು ದೇಶದ ಮೇಲೆ ಯಾವಾಗ ಕತ್ತಿಯನ್ನು ತರುವೆನೋ ಆಗ ಆ ದೇಶದ ಜನರು ತಮ್ಮ ಪ್ರಾಂತ್ಯದ ಒಬ್ಬ ಮನುಷ್ಯನನ್ನು ಆರಿಸಿ ತಮಗೆ ಕಾವಲುಗಾರನನ್ನಾಗಿ ಇಟ್ಟರೆ,
ನಾನು ನಿನಗೆ ಪರಲೋಕ ರಾಜ್ಯದ ಬೀಗದ ಕೈಗಳನ್ನು ಕೊಡುತ್ತೇನೆ; ನೀನು ಯಾವದನ್ನು ಭೂಮಿಯ ಮೇಲೆ ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವದು; ನೀನು ಯಾವ ದನ್ನು ಭೂಮಿಯ ಮೇಲೆ ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವದು ಅಂದನು.
ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು?
ಯಾಕಂದರೆ ಪರಲೋಕರಾಜ್ಯವು ದೂರ ದೇಶಕ್ಕೆ ಪ್ರಯಾಣಮಾಡುವ ಒಬ್ಬ ಮನುಷ್ಯನು ತನ್ನ ಸ್ವಂತ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ.
ನೀವಂತೂ ತಮ್ಮ ಒಡೆಯನು ಮದುವೆಯಿಂದ ಯಾವಾಗ ಹಿಂದಿರುಗುವನೋ ಎಂದು ಕಾಯುವ ಮತ್ತು ಅವನು ಬಂದು ತಟ್ಟಿದಾಗ ತಕ್ಷಣವೇ ಅವನಿಗೆ ತೆರೆಯುವ ಮನುಷ್ಯರಂತೆ ಇರ್ರಿ.
ಅದೇ ನಂದರೆ--ಕೀರ್ತಿವಂತನಾದ ಒಬ್ಬಾನೊಬ್ಬ ಮನುಷ್ಯನು ತನಗೋಸ್ಕರ ರಾಜ್ಯವನ್ನು ಪಡೆದುಕೊಂಡು ತಿರಿಗಿ ಬರುವದಕ್ಕಾಗಿ ದೂರ ದೇಶಕ್ಕೆ ಹೊರಟುಹೋದನು.
ಬಾಗಲು ಕಾಯುವವನು ಅವನಿಗೆ ತೆರೆಯು ತ್ತಾನೆ; ಕುರಿಗಳು ಅವನ ಸ್ವರವನ್ನು ಕೇಳುತ್ತವೆ, ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವು ಗಳನ್ನು ಹೊರಗೆ ನಡಿಸುತ್ತಾನೆ.
ಯಾಕಂದರೆ ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವ ವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸು ವದಿಲ್ಲ.
ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸವಿರುವದಿಲ್ಲವೋ
ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕಂದರೆ ಅವರು ದೇವರ ಉದ್ಯೋಗಿಗಳಾಗಿದ್ದು ಆ ಕೆಲಸ ದಲ್ಲಿಯೇ ನಿರತರಾಗಿರುತ್ತಾರೆ.
ಹಾಗಾದರೆ ಪೌಲನು ಯಾರು? ಅಪೊಲ್ಲೋಸನು ಯಾರು? ಅವರು ಸೇವಕರು, ಅವರ ಮುಖಾಂತರ ನೀವು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆ ಮಾಡುವವ ರಾಗಿದ್ದಾರೆ.
ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ಆತ್ಮನು ಒಬ್ಬನೇ;
ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವರೆಂದು ತಿಳಿದಿದ್ದೀರಲ್ಲಾ. ಯಾಕಂದರೆ ನೀವು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿದ್ದೀರಿ.ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ಅದರಲ್ಲಿ ಪಕ್ಷಪಾತವಿಲ್ಲ.
ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ಸೇವಕರಿಗೆ ನ್ಯಾಯವಾದದ್ದನ್ನೂ ಸಮ ವಾದದ್ದನ್ನೂ ಕೊಡಿರಿ.
ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,