ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು. ಇದಲ್ಲದೆ ಬರ ಗಾಲಗಳು ಕಳವಳಗಳು ಉಂಟಾಗುವವು; ಇವು ಸಂಕಟಗಳ ಪ್ರಾರಂಭವಾಗಿವೆ.
Cross references
ಜನಾಂಗವು ಜನಾಂಗದಿಂದಲೂ ಪಟ್ಟಣವು ಪಟ್ಟಣದಿಂದಲೂ ನಾಶವಾಯಿತು. ಯಾಕಂದರೆ ದೇವರು ಸಕಲ ಇಕ್ಕಟ್ಟುಗಳಿಂದ ಅವ ರನ್ನು ತೊಂದರೆಪಡಿಸಿದನು.
ಭೀತಿಯೂ ಹೆರುವವಳ ಹಾಗೆ ನೋವೂ ಅಲ್ಲಿ ಅವರನ್ನು ಹಿಡಿಯಿತು.
ಇದಲ್ಲದೆ ನಾನು ಐಗುಪ್ತಕ್ಕೆ ವಿರೋಧವಾಗಿ ಐಗುಪ್ತ ವನ್ನು ಎಬ್ಬಿಸುವೆನು; ಸಹೋದರನಿಗೆ ವಿರೋದವಾಗಿ ಸಹೋದರನೂ ನೆರೆಯವನಿಗೆ ವಿರೋದವಾಗಿ ನೆರೆ ಯವನೂ ಪಟ್ಟಣಕ್ಕೆ ವಿರೋಧವಾಗಿ ಪಟ್ಟಣವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಹೋರಾಡುವವು.
ಆಗ ಅವರು ಅವನಿಗೆ--ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ದೂಷಣೆಯಾಗಿಯೂ ಇದೆ. ಪ್ರಸವವೇದನೆಯ ಕಾಲವು ಬಂದದೆ, ಆದರೆ ಹೆರುವದಕ್ಕೆ ಬಲ ಸಾಲದು.
ಪ್ರಸವವೇದನೆ ಪಡುವವಳ ಸ್ವರಕ್ಕೂ ಚೊಚ್ಚಲನ್ನು ಹೆರುವವಳ ಸಂಕಟಕ್ಕೂ ಸಮಾನವಾಗಿ ರುವ ಚೀಯೋನಿನ ಮಗಳ ಸ್ವರವನ್ನು ಕೇಳಿದ್ದೇನೆ; ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ--ನನಗೀಗ ಅಯ್ಯೋ, ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ ಎಂದನ್ನುತ್ತಾಳೆ.
ಆದರೆ ಅವರು ಕೇಳಲಿಲ್ಲ, ಇಲ್ಲವೆ ಕಿವಿಗೊಡಲಿಲ್ಲ; ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ ಕಲ್ಪನೆಯ ಪ್ರಕಾರವೂ ನಡಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.
ನಿನ್ನ ಹೆಸರಿಗೋಸ್ಕರ ನಮ್ಮನ್ನು ಅಸಹ್ಯಿಸಿ ಬಿಡಬೇಡ; ನಿನ್ನ ಮಹಿಮೆಯ ಸಿಂಹಾಸನವನ್ನು ಅವಮಾನ ಮಾಡ ಬೇಡ; ಜ್ಞಾಪಕಮಾಡು; ನಮ್ಮ ಸಂಗಡ ನೀನು ಮಾಡಿದ ಒಡಂಬಡಿಕೆಯನ್ನು ಮುರಿಯಬೇಡ.ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
ಕರ್ತನು ಅನ್ನುತ್ತಾನೆ--ನಾನು ಸವಿಾಪದಲ್ಲಿ ದೇವರಾಗಿದ್ದು ದೂರದಲ್ಲಿ ದೇವರ ಲ್ಲವೋ?
ನಾನು ಬೋನನ್ನು ಇಟ್ಟೆನು; ಹೌದು, ಬಾಬೆಲೇ ನೀನು ಹಿಡಿಯಲ್ಪಟ್ಟಿದ್ದೀ; ಆದರೆ ನಿನಗೆ ತಿಳಿಯದಿತ್ತು; ನೀನು ಕರ್ತನಿಗೆ ವಿರೋಧವಾಗಿ ಜಗಳವಾಡಿದ್ದ ರಿಂದಲೇ ಸಿಕ್ಕಿದ್ದೀ; ವಶಮಾಡಲ್ಪಟ್ಟಿದ್ದೀ;
ಅದರ ಪಟ್ಟಣಗಳು ಹಾಳಾದವು; ಅವು ಒಣನೆಲವೂ ಅಡವಿಯೂ ಯಾರೂ ವಾಸಮಾಡದೆ, ಮನುಷ್ಯನ ಮಗನು ಹಾದುಹೋಗದೆ ಇರುವ ದೇಶವೂ ಆಗಿವೆ.
ಈಗ ಯಾಕೆ ಗಟ್ಟಿಯಾಗಿ ಕೂಗುತ್ತೀ? ನಿನ್ನಲ್ಲಿ ಅರಸನಿಲ್ಲವೋ? ನಿನ್ನ ಆಲೋಚನಾಕರ್ತನು ನಾಶ ವಾದನೋ? ಹೆರುವವಳಂತೆ ನಿನಗೆ ವೇದನೆ ಬಂತು.
ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು; ಅನ್ಯ ಜನಾಂಗಗಳ ರಾಜ್ಯಗಳ ಬಲವನ್ನು ನಾಶಮಾಡುವೆನು, ರಥಗಳನ್ನೂ ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು; ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಕತ್ತಿಯಿಂದ ಬೀಳು ವನು.ಸೈನ್ಯಗಳ ಕರ್ತನು ಅನ್ನುತ್ತಾನೆ--ಆ ದಿನದಲ್ಲಿ ಶೆಯಲ್ತೀಯೇಲನ ಮಗನಾದ ನನ್ನ ಸೇವಕನಾದ ಜೆರು ಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದು ಕೊಂಡು ಮುದ್ರೆಯ ಹಾಗೆ ಇಡುವೆನು; ನಿನ್ನನ್ನು ನಾನೇ ಆದುಕೊಂಡಿದ್ದೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
ಆ ದಿನದಲ್ಲಿ ಆಗುವದೇನಂದರೆ --ಕರ್ತನಿಂದಾದ ದೊಡ್ಡ ಕೋಲಾಹಲ ಅವರಲ್ಲಿ ಇರುವದು; ಆಗ ಒಬ್ಬೊಬ್ಬನು ತನ್ನ ತನ್ನ ನೆರೆಯವನ ಕೈಯನ್ನು ಹಿಡಿಯುವನು ಮತ್ತು ಅವನ ಕೈ ತನ್ನ ನೆರೆಯವನ ಮೇಲೆ ಎತ್ತಲ್ಪಡುವದು.
ಇವೆಲ್ಲವುಗಳು ಸಂಕಟಗಳ ಆರಂಭವು.
ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಆತ್ಮನಿಂದ ಸೂಚಿಸಿದನು. ಅದು ಕ್ಲೌದ್ಯ ಕೈಸರನ ದಿವಸಗಳಲ್ಲಿ ಉಂಟಾಯಿತು.
ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
ಆಗ ಮತ್ತೊಂದು ಕೆಂಪು ಕುದುರೆಯು ಹೊರಗೆ ಹೋಯಿತು; ಅದರ ಮೇಲೆ ಕೂತಿದ್ದವನಿಗೆ ಭೂಮಿಯಿಂದ ಸಮಾಧಾನವನ್ನು ತೆಗೆದುಬಿಡುವ ದಕ್ಕೂ ಮನುಷ್ಯರು ಒಬ್ಬರನ್ನೊಬ್ಬರು ಕೊಲ್ಲುವವರಾಗು ವಂತೆ ಮಾಡುವದಕ್ಕೂ ಅಧಿಕಾರವು ಕೊಡಲ್ಪಟ್ಟಿತು; ಇದಲ್ಲದೆ ಅವನಿಗೆ ದೊಡ್ಡ ಕತ್ತಿಯು ಕೊ