ತನ್ನ ವಿಷಯವಾಗಿ ಬರೆದಿರುವ ಪ್ರಕಾರ ಮನುಷ್ಯ ಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಯಾವನಿಂದ ಮನುಷ್ಯಕುಮಾರನು ಹಿಡುಕೊಡಲ್ಪಡು ತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಎಂದು ಹೇಳಿದನು.
Cross references
ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ.
ಮರಣವು ಅವರನ್ನು ಹಿಡಿ ಯಲಿ; ತ್ವರಿತವಾಗಿ ನರಕಕ್ಕೆ ಅವರು ಇಳಿದುಹೋಗಲಿ; ಅವರ ವಾಸಸ್ಥಳದಲ್ಲಿಯೂ ಮಧ್ಯದಲ್ಲಿಯೂ ದುಷ್ಟತನ ಇದೆ.
ಓ ದೇವರೇ ನನ್ನನ್ನು ರಕ್ಷಿಸು; ನೀರು ನನ್ನ ಪ್ರಾಣದ ವರೆಗೂ ಬಂದಿದೆ.
ದುಷ್ಟನನ್ನು ಅವನ ಮೇಲೆ ನೇಮಿಸು; ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ.
ಅವನ ಮುಖವು ಮನುಷ್ಯರಿಗಿಂತಲೂ ಅವನ ಆಕಾರವು ನರಪುತ್ರರಿ ಗಿಂತಲೂ ಕುರೂಪವಾಗಿರುವದನ್ನು ನೋಡಿ ಹೇಗೆ ಆಶ್ಚರ್ಯಪಟ್ಟರೋಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.
ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು?
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
ಆದರೆ ನನ್ನಲ್ಲಿ ವಿಶ್ವಾಸವಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವ ನಾದರೂ ಅಭ್ಯಂತರವಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತು ಹಾಕಿ ಅವನನ್ನು ಸಮುದ್ರದ ಆಳದಲ್ಲಿ ಮುಳುಗಿಸಿಬಿಡುವದು ಅವನಿಗೆ ಒಳ್ಳೇದು.
ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು.
ಹಾಗಾದರೆ ಇವುಗಳು ಹೀಗೆ ಆಗಬೇಕೆಂಬ ಬರಹಗಳು ನೆರವೇರು ವದು ಹೇಗೆ ಅಂದನು.
ಆದರೆ ಪ್ರವಾದಿಗಳ ಬರಹಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು
ನಾನು ಪ್ರತಿ ದಿನವೂ ದೇವಾಲಯದಲ್ಲಿ ಬೋಧಿ ಸುತ್ತಾ ನಿಮ್ಮ ಸಂಗಡ ಇದ್ದೆನು; ಆಗ ನೀವು ನನ್ನನು ಹಿಡಿಯಲಿಲ್ಲ; ಆದರೆ ಬರಹಗಳು ನೆರವೇರಲೇಬೇಕು ಅಂದನು.
ನಿರ್ಧರಿಸ ಲ್ಪಟ್ಟಂತೆಯೇ ಮನುಷ್ಯಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಆತನನ್ನು ಹಿಡುಕೊಡುವ ಆ ಮನುಷ್ಯನಿಗೆ ಅಯ್ಯೋ! ಎಂದು ಹೇಳಿದನು.
ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ
ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
ಇದಾದ ಮೇಲೆ ಯೇಸು ಆಗ ಎಲ್ಲವೂ ಪೂರೈಸಲ್ಪಟ್ಟಿತೆಂದು ತಿಳಿದು ಬರಹವು ನೆರವೇರು ವಂತೆ--ನನಗೆ ನೀರಡಿಕೆಯಾಗಿದೆ ಅಂದನು.
ಯಾಕಂದರೆ--ಆತನ ಒಂದು ಎಲುಬಾದರೂ ಮುರಿಯಲ್ಪಡಬಾರದು ಎಂಬ ಬರಹವು ನೆರವೇರುವಂತೆ ಇವುಗಳು ಸಂಭವಿಸಿದವು.
ಜನರೇ, ಸಹೋದ ರರೇ, ಯೇಸುವನ್ನು ಹಿಡಿದವರಿಗೆ ದಾರಿ ತೋರಿಸಿದ ಯೂದನ ವಿಷಯವಾಗಿ ಮೊದಲು ದಾವೀದನ ಬಾಯಿಂದ ಪವಿತ್ರಾತ್ಮನು ಹೇಳಿದ್ದ ಬರಹವು ನೆರ ವೇರುವದು ಅವಶ್ಯವಾಗಿತ್ತು.
ಯೂದನು ತನ್ನ ಸ್ವಸ್ಥಳಕ್ಕೆ ಹೋಗುವ ದಕ್ಕಾಗಿ ಅಪರಾಧದ ನಿಮಿತ್ತ ಈ ಸೇವೆಯಿಂದಲೂ ಅಪೊಸ್ತಲತನದಿಂದಲೂ ಬಿದ್ದು ಹೋದನು. ಈಗ ಈ ಸೇವೆಯಲ್ಲಿಯೂ ಅಪೊಸ್ತಲತನದಿಂದಲೂ ಒಬ್ಬನು ಪಾಲುಹೊಂದುವಂತೆ ಈ ಇಬ್ಬರಲ್ಲಿ ಯಾರನ್ನು ನೀನು ಆರಿಸಿಕೊಳ್ಳುತ್ತೀಯೋ ತೋರಿಸು ಎಂದು ಹೇಳಿದರು.ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.
ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು
ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.