ಆತನು --ಅಪ್ಪಾ, ತಂದೆಯೇ, ಎಲ್ಲವುಗಳು ನಿನಗೆ ಸಾಧ್ಯವಾಗಿವೆ; ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು; ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ ಎಂದು ಹೇಳಿದನು.
Cross references
ಕರ್ತನಿಗೆ ಅಸಾಧ್ಯವಾದದ್ದು ಯಾವದಾದರೂ ಇದೆಯೋ? ಬರುವ ವರುಷ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ತಿರಿಗಿ ಬರುವೆನು; ಆಗ ಸಾರಳಿಗೆ ಮಗನು ಇರುವನು ಅಂದನು.
ಓ ನನ್ನ ದೇವರೇ ನಿನಗೆ ಮೆಚ್ಚಿಕೆಯಾದದ್ದನ್ನು ಮಾಡಲು ಸಂತೋಷಿಸುತ್ತೇನೆ; ನಿನ್ನ ನ್ಯಾಯ ಪ್ರಮಾಣವು ನನ್ನ ಅಂತರಂಗದಲ್ಲಿ ಅದೆ.
ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.
ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.
ಆಗ ಯೇಸು ಅವರನ್ನು ದೃಷ್ಟಿಸುತ್ತಾ--ಮನುಷ್ಯರಿಗೆ ಇದು ಅಸಾಧ್ಯವಾಗಿದೆ; ಆದರೆ ದೇವರಿಗೆ ಅಲ್ಲ; ಯಾಕಂದರೆ ದೇವರಿಗೆ ಎಲ್ಲವೂ ಸಾಧ್ಯವಾಗಿವೆ ಅಂದನು.
ಅದಕ್ಕೆ ಅವರು ಆತನಿಗೆ--ನಮ್ಮಿಂದಾಗುವದು ಅಂದರು. ಆದರೆ ಯೇಸು ಅವರಿಗೆ--ನಾನು ಕುಡಿ ಯುವ ಪಾತ್ರೆಯಲ್ಲಿ ನೀವು ನಿಜವಾಗಿಯೂ ಕುಡಿಯು ವಿರಿ; ಮತ್ತು ನಾನು ಹೊಂದುವ ಬಾಪ್ತಿಸ್ಮದಿಂದ ನೀವು ಬಾಪ್ತಿಸ್ಮ ಹೊಂದುವಿರಿ.
ಆತನು ಅವ ರಿಂದ ಒಂದು ಕಲ್ಲೆಸೆಯುವಷ್ಟು ದೂರಹೋಗಿ ಮೊಣ ಕಾಲೂರಿ--
ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.
ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ನಾನು ಕೇಳುವಂತೆಯೇ ತೀರ್ಪು ಮಾಡುತ್ತೇನೆ ಮತ್ತು ನನ್ನ ತೀರ್ಪು ನ್ಯಾಯ ವಾದದ್ದು; ಯಾಕಂದರೆ ನಾನು ನನ್ನ ಸ್ವಂತಚಿತ್ತವನ್ನಲ್ಲ, ಆದರೆ ನನ್ನನ್ನು ಕಳುಹಿಸಿದ ತಂದೆಯ ಚಿತ್ತವು ನೆರವೇರ ಬೇಕೆಂದು ಅಪೆಕ್ಷಿಸುತ್ತೇನೆ.
ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು.
ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಈ ಗಳಿಗೆಗೆ ಬಂದೆನು.
ಆಗ ಯೇಸು ಪೇತ್ರನಿಗೆ--ನಿನ್ನ ಕತ್ತಿಯನ್ನು ಒರೆಗೆಹಾಕು. ನನ್ನ ತಂದೆಯೂ ನನಗೆ ಕೊಟ್ಟ ಪಾತ್ರೆಯನ್ನು ನಾನು ಕುಡಿಯಬಾರದೋ ಎಂದು ಹೇಳಿದನು.
ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.
ನೀವು ಪುತ್ರ ರಾಗಿರುವದರಿಂದ--ಅಪ್ಪಾ, ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ದೇವರು ನಿಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.
ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು.
ನಾವು ಅಪನಂಬಿಕೆ ಯುಳ್ಳವರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ಆತನು ತನ್ನನ್ನು ತಾನು ಅಲ್ಲಗಳೆಯಲಾರನು.
ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು
ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.