ಆದರೆ ಆತನು ಏನೂ ಉತ್ತರ ಕೊಡದೆ ಮೌನವಾಗಿದ್ದನು; ತಿರಿಗಿ ಮಹಾಯಾಜಕನು--ನೀನು ಆ ಕ್ರಿಸ್ತನೋ? ಸ್ತುತಿಹೊಂದುವಾತನ ಕುಮಾರನೋ ಎಂದು ಆತನನ್ನು ಕೇಳಿದನು.
Cross references
ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
ನನ್ನ ನಾಲಿಗೆಯಿಂದ ಪಾಪಮಾಡದ ಹಾಗೆ ನನ್ನ ಮಾರ್ಗಗಳನ್ನು ಕಾಪಾಡಿ ಕೊಳ್ಳುವೆನೆಂದೂ ದುಷ್ಟನು ನನ್ನ ಮುಂದೆ ಇರುವಾಗ ನನ್ನ ಬಾಯಿಗೆ ಕಡಿವಾಣ ಇಟ್ಟುಕೊಳ್ಳುವೆನೆಂದೂ ಹೇಳಿದೆನು.
ನಾನು ಮೌನವಾದೆನು, ನನ್ನ ಬಾಯಿ ತೆರೆಯಲಿಲ್ಲ; ನೀನು ಅದನ್ನು ಮಾಡಿದಿ.
ಓ ಕರ್ತನೇ, ನೀನು ಸ್ತುತಿಸಲ್ಪಡು ವಾತನು; ನಿನ್ನ ನಿಯಮಗಳನ್ನು ನನಗೆ ಕಲಿಸು.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.
ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
ಆಗ ಇಗೋ, ಅವರು--ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.
ಬರಬೇಕಾದಾತನು ನೀನೋ ಇಲ್ಲವೆ ನಾವು ಬೇರೊಬ್ಬನಿಗಾಗಿ ನೋಡಬೇಕೋ ಅಂದನು.
ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು.
ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು.
ಆಗ ಪ್ರಧಾನ ಯಾಜಕರೂ ಹಿರಿಯರೂ ಆತನ ಮೇಲೆ ದೂರು ಹೇಳುತ್ತಿರುವಾಗ ಆತನು ಏನು ಉತ್ತರ ಕೊಡಲಿಲ್ಲ.
ಆದರೆ ಆತನು ಏನೂ ಉತ್ತರ ಕೊಡದೆ ಮೌನವಾಗಿದ್ದನು; ತಿರಿಗಿ ಮಹಾಯಾಜಕನು--ನೀನು ಆ ಕ್ರಿಸ್ತನೋ? ಸ್ತುತಿಹೊಂದುವಾತನ ಕುಮಾರನೋ ಎಂದು ಆತನನ್ನು ಕೇಳಿದನು.
ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಲು ಆತನು ಪ್ರತ್ಯುತ್ತರ ವಾಗಿ--ನೀನೇ ಅದನ್ನು ಹೇಳಿದ್ದೀ ಅಂದನು.
ಆಗ ಪಿಲಾತನು ತಿರಿಗಿ ಆತ ನಿಗೆ--ನೀನು ಏನೂ ಉತ್ತರಕೊಡುವದಿಲ್ಲವೋ? ಇವರು ನಿನಗೆ ವಿರೋಧವಾಗಿ ಎಷ್ಟು ದೂರುಗಳನ್ನು ಹೇಳುತ್ತಾರೆ ನೋಡು ಎಂದು ಕೇಳಿದನು.
ನೀನು ಆ ಕ್ರಿಸ್ತನೋ? ನಮಗೆ ಹೇಳು ಅಂದರು. ಆತನು ಅವರಿಗೆ--ನಾನು ನಿಮಗೆ ಹೇಳಿ ದರೆ ನೀವು ನಂಬುವದಿಲ್ಲ;
ನಾನು ನೋಡಿ ಈತನೇ ದೇವರಮಗನೆಂದು ಸಾಕ್ಷಿ ಕೊಟ್ಟಿದ್ದೇನೆ ಅಂದನು.
ನತಾನ ಯೇಲನು ಪ್ರತ್ಯುತ್ತರವಾಗಿ ಆತನಿಗೆ--ರಬ್ಬಿಯೇ, ನೀನು ದೇವರಕುಮಾರನು; ನೀನು ಇಸ್ರಾಯೇಲಿನ ಅರಸನು ಅಂದನು.
ಆದದರಿಂದ ಆತನು ಸಬ್ಬತ್ತನ್ನು ವಿಾರಿದ್ದು ಮಾತ್ರವಲ್ಲದೆ ದೇವರನ್ನು ತನ್ನ ಸ್ವಂತ ತಂದೆ ಎಂದು ಕರೆದು ತನ್ನನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಇನ್ನಷ್ಟು ಪ್ರಯತ್ನ ಮಾಡಿದರು.
ಆಗ ಯೆಹೂದ್ಯರು ಆತನ ಸುತ್ತಲು ಬಂದು ಆತನಿಗೆ--ಇನ್ನು ಎಷ್ಟರ ವರೆಗೆ ನಮ್ಮನ್ನು ಸಂದೇಹಪಡಿಸುತ್ತೀ? ನೀನು ಕ್ರಿಸ್ತ ನಾಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು ಅಂದರು.
ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ--ನೀನು ದೇವ ದೂಷಣೆ ಮಾಡುತ್ತೀ ಎಂದು ನೀವು ಅನ್ನುತ್ತೀರೋ?
ಆದದರಿಂದ ಪಿಲಾತನು ಆತನಿಗೆ--ಹಾಗಾದರೆ ನೀನು ಅರಸನೋ ಅನ್ನಲು ಯೇಸು ಪ್ರತ್ಯುತ್ತರವಾಗಿ--ನಾನು ಅರಸ ನಾಗಿದ್ದೇನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿಕೊಡುವದಕ್ಕೋಸ್ಕರ ಹುಟ್ಟಿ ಅದಕ್ಕೋಸ್ಕರವೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸಂಬಂಧಿಸಿದ ಪ್ರತಿಯೊ ಬ್ಬನು ನನ್ನ ಸ್ವರವನು
ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು.
ತಿರಿಗಿ ನ್ಯಾಯಾಲಯ ದೊಳಗೆ ಹೋಗಿ ಯೇಸುವಿಗೆ--ನೀನು ಎಲ್ಲಿಂದ ಬಂದವನು ಎಂದು ಆತನನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರಕೊಡಲಿಲ್ಲ.
ಅವನು ಓದುತ್ತಿದ್ದ ಬರಹದ ಭಾಗವು ಯಾವ ದಂದರೆ--ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸು ವವನ ಮುಂದೆ ಮೌನವಾಗಿರುವಂತೆ ಆತನು ತನ್ನ ಬಾಯಿತೆರೆಯಲೇ ಇಲ್ಲ.
ಈ ಬೋಧನೆಯು ಸ್ತುತ್ಯನಾದ ದೇವರ ಮಹಿಮೆಯ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯು ನನ್ನ ವಶಕ್ಕೆ ಕೊಡಲ್ಪಟ್ಟಿತು.
ಸ್ತುತಿ ಹೊಂದತಕ್ಕ ಒಬ್ಬನೇ ಸರ್ವ ಶಕ್ತನು. ತನ್ನ ಸಮಯಗಳಲ್ಲೇ ಆತನನ್ನು ಪ್ರತ್ಯಕ್ಷ ಪಡಿಸುವನು; ಆ ಸರ್ವಶಕ್ತನು ರಾಜಾಧಿರಾಜನೂ ಕರ್ತರ ಕರ್ತನೂ ಆಗಿದ್ದಾನೆ;
ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.