ಆಗ ಎರಡನೇ ಸಾರಿ ಹುಂಜ ಕೂಗಿತು. ಹೀಗೆ--ಎರಡು ಸಾರಿ ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ಅದನ್ನು ಯೋಚಿಸಿ ಅತ್ತನು.
Cross references
ಆದರೆ ದಾವೀದನು ಜನರನ್ನು ಲೆಕ್ಕಿಸಿದ ತರು ವಾಯ ಅವನು ತನ್ನ ಹೃದಯದಲ್ಲಿ ತಿವಿಯಲ್ಪಟ್ಟನು. ಆದದರಿಂದ ದಾವೀದನು ಕರ್ತನಿಗೆ--ನಾನು ಮಾಡಿ ದ್ದರಲ್ಲಿ ಮಹಾ ಪಾಪಮಾಡಿದೆನು. ಕರ್ತನೇ, ದಯ ಮಾಡಿ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಬಹಳ ಹುಚ್ಚುತನ ಮಾಡಿದೆನು ಅಂದನು.
ನನ್ನ ಮಾರ್ಗಗಳನ್ನು ಯೋಚಿಸಿಕೊಂಡು ನಿನ್ನ ಸಾಕ್ಷಿಗಳ ಕಡೆಗೆ ನನ್ನ ಪಾದ ಗಳನ್ನು ತಿರುಗಿಸಿದ್ದೇನೆ.
ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು.
ಆದರೆ ಅವರಲ್ಲಿ ತಪ್ಪಿಸಿಕೊಳ್ಳುವವರು ತಪ್ಪಿಸಿಕೊಳ್ಳುವರು; ಪ್ರತಿಯೊ ಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಗೋಳಾಡಿ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಪರ್ವತಗಳ ಮೇಲೆ ಇರುವರು.
ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
ಆಮೇಲೆ ನೀವು ನಿಮ್ಮ ದುರ್ಮಾರ್ಗ ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯ ಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.
ಯೇಸು ಅವ ನಿಗೆ--ಈ ರಾತ್ರಿಯಲ್ಲಿ ಹುಂಜ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
ಆದರೆ ಯೇಸು ಅವನಿಗೆ--ಈ ದಿವಸ ಈ ರಾತ್ರಿಯೇ ಎರಡು ಸಾರಿ ಹುಂಜ ಕೂಗುವದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
ಆದರೆ ಅವನು ಅಲ್ಲಗಳೆದು--ನನಗೆ ಗೊತ್ತಿಲ್ಲ, ನೀನು ಏನು ಹೇಳುತ್ತೀಯೋ ನನಗೆ ತಿಳಿಯುವದಿಲ್ಲ ಎಂದು ಹೇಳಿ ಅಲ್ಲಗಳೆದು ಹೊರಗೆ ದ್ವಾರಾಂಗಳದೊಳಗೆ ಹೋದನು; ಆಗ ಹುಂಜ ಕೂಗಿತು.
ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ.
ಆದರೆ ಪೇತ್ರನು--ಮನುಷ್ಯನೇ, ನೀನು ಏನು ಹೇಳುತ್ತೀಯೋ ನಾನರಿಯೆ ಅಂದನು. ಕೂಡಲೆ ಅವನು ಇನ್ನೂ ಮಾತನಾಡುತ್ತಿರುವಾಗಲೇ ಹುಂಜ ಕೂಗಿತು.
ಆಗ ಪೇತ್ರನು ಹೊರಗೆಹೋಗಿ ಬಹು ವ್ಯಥೆಪಟ್ಟು ಅತ್ತನು.
ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.