ಆ ಸಮಯದಲ್ಲಿ ಗೌರವವುಳ್ಳವನೂ ಆಲೋಚನಾ ಸಭೆಯವನೂ ದೇವರ ರಾಜ್ಯಕ್ಕಾಗಿ ಕಾಯುತ್ತಿದ್ದವನೂ ಆದ ಅರಿ ಮಥಾಯದ ಯೋಸೇಫನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿ ಕೊಂಡನು.
Cross references
ಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.
ಹೀಗೆ ಕಡೆಯವರು ಮೊದಲನೆಯವರಾಗುವರು; ಮೊದಲನೆಯವರು ಕಡೆಯವರಾಗುವರು. ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಎಂದು ಹೇಳಿದನು.
ಸಾಯಂಕಾಲವಾದಾಗ ಅರಿಮಥಾಯದ ವನಾದ ಯೋಸೇಫನೆಂಬ ಹೆಸರುಳ್ಳ ಐಶ್ವರ್ಯವಂತ ನಾದ ಒಬ್ಬ ಮನುಷ್ಯನು ಅಲ್ಲಿಗೆ ಬಂದನು. ಅವನು ಸಹ ಯೇಸುವಿನ ಶಿಷ್ಯನಾಗಿದ್ದನು.
ಆಗ ಯೇಸು ಸುತ್ತಲೂ ನೋಡಿ ತನ್ನ ಶಿಷರಿಗೆ --ಐಶ್ವರ್ಯವುಳ್ಳವರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ ಅಂದನು.
ಆದರೆ ಪೇತ್ರನು ಮಹಾಯಾಜಕನ ಭವನದವರೆಗೂ ದೂರ ದಿಂದ ಆತನನ್ನು ಹಿಂಬಾಲಿಸಿ ಆಳುಗಳ ಸಂಗಡ ಕೂತುಕೊಂಡು ಬೆಂಕಿಯ ಹತ್ತಿರ ಚಳಿ ಕಾಯಿಸಿಕೊಳ್ಳು ತ್ತಿದ್ದನು.
ಇದಲ್ಲದೆ ಪೇತ್ರನು ಭವನದ ಕೆಳಭಾಗದಲ್ಲಿದ್ದಾಗ ಮಹಾಯಾಜಕನ ದಾಸಿಯರಲ್ಲಿ ಒಬ್ಬಳು ಅಲ್ಲಿಗೆ ಬಂದಳು.
ಇಗೋ, ಸಿಮೆಯೋನನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಇವನು ನೀತಿವಂತನೂ ಭಕ್ತನೂ ಆಗಿದ್ದು ಇಸ್ರಾ ಯೇಲ್ಯರ ಆದರಣೆಗಾಗಿ ಕಾಯುತ್ತಿದ್ದನು. ಇವನ ಮೇಲೆ ಪವಿತ್ರಾತ್ಮನು ಇದ್ದನು.
ಆ ಕ್ಷಣದಲ್ಲಿ ಅವಳು ಬಂದು ಕರ್ತನನ್ನು ಅದೇ ರೀತಿಯಾಗಿ ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಆತನ ವಿಷಯ ವಾಗಿ ಮಾತನಾಡಿದಳು.
ಇವನು ಯೆಹೂದ್ಯರ ಪಟ್ಟಣವಾದ ಅರಿಮ ಥಾಯದವನೂ ದೇವರ ರಾಜ್ಯಕ್ಕಾಗಿ ಎದುರು ನೋಡು ವವನೂ ಆಗಿದ್ದನು. (ಅವನು ಅವರ ಆಲೋಚನೆಗೂ ಕೃತ್ಯಕ್ಕೂ ಒಪ್ಪಿಕೊಂಡಿರಲಿಲ್ಲ.)
ತರುವಾಯ ಯೆಹೂದ್ಯರ ಭಯದ ನಿಮಿತ್ತ ದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾ ಯದ ಯೋಸೇಫನು ಯೇಸುವಿನ ದೇಹವನ್ನು ತಾನು ತೆಗೆದುಕೊಂಡು ಹೋಗುವಂತೆ ಪಿಲಾತನನ್ನು ಬೇಡಿ ಕೊಂಡನು. ಆಗ ಪಿಲಾತನು ಅಪ್ಪಣೆಕೊಡಲು ಅವನು ಬಂದು ಆತನ ದೇಹವನ್ನು ತೆಗೆದುಕೊಂಡು
ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ--ಜನರ ಅಧಿಕಾರಿಗಳೇ, ಇಸ್ರಾಯೇಲಿನ ಹಿರಿಯರೇ,
ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.
ಆದದರಿಂದ ಅವರಲ್ಲಿ ಬಹಳ ಮಂದಿ ನಂಬಿದರು; ಇದಲ್ಲದೆ ಕುಲೀನರಾದ ಗ್ರೀಕ್ ಹೆಂಗಸರ ಲ್ಲಿಯೂ ಗಂಡಸರಲ್ಲಿಯೂ ಅನೇಕರು ನಂಬಿದರು.
ಇದಲ್ಲದೆ ಕರ್ತನಲ್ಲಿ ಅನೇಕ ಸಹೋದರರು ನನ್ನ ಬೇಡಿಗ ಳಿಂದಲೇ ಭರವಸವುಳ್ಳವರಾಗಿ ವಾಕ್ಯವನ್ನು ನಿರ್ಭಯ ದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯವನ್ನು ಹೊಂದಿದ್ದಾರೆ.