ಆಗ ಅವನು ಶುಭ್ರವಾದ ನಾರು ಮಡಿಯನ್ನು ಕೊಂಡು ಕೊಂಡು ಆತನನ್ನು (ಶಿಲುಬೆಯಿಂದ) ಇಳಿಸಿ ಆ ನಾರುಮಡಿಯಲ್ಲಿ ಆತನನ್ನು ಸುತ್ತಿ ಬಂಡೆಯಲ್ಲಿ ತೋಡಿಸಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಲಿಗೆ ಒಂದು ಕಲ್ಲನ್ನು ಉರುಳಿಸಿದನು.ಮಗ್ದಲದ ಮರಿಯಳೂ ಯೋಸೆಯ ತಾಯಿಯಾದ ಮರಿಯಳೂ ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿದರು.
Cross references
ನಿನಗೆ ಇಲ್ಲಿ ಏನು ಕೆಲಸ? ಇಲ್ಲಿ ನಿನಗೆ ಯಾರಿದ್ದಾರೆ? ನೀನು ಉನ್ನತದಲ್ಲಿ ತನಗೆ ಸಮಾಧಿ ಯನ್ನು ತೋಡಿಸಿ, ಬಂಡೆಯಲ್ಲಿ ತನಗೆ ನಿವಾಸವನ್ನು ಕೆತ್ತಿಸುವವನ ಹಾಗೆ, ನಿನಗೆ ಇಲ್ಲಿ ಸಮಾಧಿಯನ್ನು ತೋಡಿಸಿದ್ದಿ ಅಲ್ಲವೆ?
ಆತನು ಮರಣವನ್ನು ಧನಿಕರೊಂದಿಗೂ ಆತನ ಸಮಾಧಿಯನ್ನು ದುಷ್ಟರೊಂದಿಗೂ ಮಾಡಿಕೊಂಡನು. ಆತನು ಯಾವ ಬಲಾತ್ಕಾರವನ್ನೂ ಮಾಡಲಿಲ್ಲ ಇಲ್ಲವೆ ಆತನ ಬಾಯಲ್ಲಿ ಯಾವ ವಂಚನೆಯೂ ಇರಲಿಲ್ಲ.
ಯೋಸೇಫನು ಆ ದೇಹವನ್ನು ತಕ್ಕೊಂಡ ಮೇಲೆ ಅದನ್ನು ಶುದ್ಧವಾದ ನಾರುಮಡಿ ಬಟ್ಟೆಯಲ್ಲಿ ಸುತಿ
ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು.
ಅವರು--ಸಮಾಧಿಯ ಬಾಗಲಿನಿಂದ ಆ ಕಲ್ಲನ್ನು ನಮಗೋಸ್ಕರ ಯಾರು ಉರುಳಿಸುವರು ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು.
ಇವನು ಅದನ್ನು ಕೆಳಗೆ ಇಳಿಸಿ ನಾರು ಬಟ್ಟೆಯಲ್ಲಿ ಸುತ್ತಿ ಬಂಡೆಯಲ್ಲಿ ತೋಡಿದ ಸಮಾಧಿಯಲ್ಲಿ ಇಟ್ಟನು. ಮೊದಲು ಯಾರನ್ನೂ ಅದರಲ್ಲಿ ಇಟ್ಟಿರಲಿಲ್ಲ.
ಆದದರಿಂದ ಯೇಸು ತಿರಿಗಿ ತನ್ನಲ್ಲಿ ಮೂಲ್ಗುತ್ತಾ ಸಮಾಧಿಗೆ ಬಂದನು. ಅದು ಗವಿಯಾಗಿತ್ತು; ಒಂದು ಕಲ್ಲು ಅದರ ಮೇಲೆ ಇಟ್ಟಿತ್ತು.
ತರುವಾಯ ಯೆಹೂದ್ಯರ ಭಯದ ನಿಮಿತ್ತ ದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾ ಯದ ಯೋಸೇಫನು ಯೇಸುವಿನ ದೇಹವನ್ನು ತಾನು ತೆಗೆದುಕೊಂಡು ಹೋಗುವಂತೆ ಪಿಲಾತನನ್ನು ಬೇಡಿ ಕೊಂಡನು. ಆಗ ಪಿಲಾತನು ಅಪ್ಪಣೆಕೊಡಲು ಅವನು ಬಂದು ಆತನ ದೇಹವನ್ನು ತೆಗೆದುಕೊಂಡು