ತರುವಾಯ ಊಟಕ್ಕೆ ಕೂತಿದ್ದ ಹನ್ನೊಂದು ಮಂದಿಗೆ ಆತನು ಕಾಣಿಸಿಕೊಂಡು ತಾನು ಎದ್ದು ಬಂದಮೇಲೆ ತನ್ನನ್ನು ನೋಡಿದವರನ್ನು ನಂಬಲಿಲ್ಲ ವಾದ ಕಾರಣ ಅವರ ಅಪನಂಬಿಕೆಗೂ ಹೃದಯದ ಕಾಠಿಣ್ಯಕ್ಕೂ ಆತನು ಅವರನ್ನು ಗದರಿಸಿದನು.
Cross references
ಆಗ ಕರ್ತನು ಮೋಶೆಗೆ--ಎಷ್ಟರ ವರೆಗೆ ಈ ಜನರು ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ನಡಿಸಿದ ಸಕಲ ಸೂಚಕಕಾರ್ಯಗಳ ದೆಸೆ ಯಿಂದ ನನ್ನನ್ನು ಎಷ್ಟು ಮಾತ್ರಕ್ಕೂ ನಂಬದೆ ಇರುವ ರಲ್ಲಾ?
ಅರಣ್ಯದಲ್ಲಿ ಆದ ಶೋಧನೆಯ ದಿವಸದಲ್ಲಿ ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದ ಯವನ್ನು ಕಠಿಣಮಾಡಿಕೊಳ್ಳಬೇಡಿರಿ.
ತರುವಾಯ ತಾನು ಹೆಚ್ಚಾದ ಮಹತ್ಕಾರ್ಯ ಗಳನ್ನು ನಡಿಸಿದ ಪಟ್ಟಣಗಳು ಮಾನಸಾಂತರಪಡದೆ ಇದ್ದದರಿಂದ ಆತನು ಅವುಗಳನ್ನು ಗದರಿಸತೊ ಡಗಿ --
ಅದಕ್ಕೆ ಯೇಸು--ನೀವು ಸಹ ಇನ್ನೂ ಗ್ರಹಿಸದೆ ಇದ್ದೀರಾ?
ಯೇಸು ಅದನ್ನು ತಿಳುಕೊಂಡವನಾಗಿ ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ರೊಟ್ಟಿಯನ್ನು ತಕ್ಕೊಂಡು ಬರಲಿಲ್ಲವೆಂದು ನಿಮ್ಮಲ್ಲಿ ಯಾಕೆ ಅಂದುಕೊಳ್ಳುತ್ತೀರಿ?
ಯೇಸು ಅವರಿಗೆ--ನಿಮ್ಮ ಅಪನಂಬಿಕೆಯ ದೆಸೆಯಿಂದಲೇ; ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಸಾಸಿವೆ ಕಾಳಷ್ಟು ನಂಬಿಕೆ ನಿಮಗಿರುವದಾದರೆ ನೀವು ಈ ಬೆಟ್ಟಕ್ಕೆ--ಇಲ್ಲಿಂದ ಆ ಸ್ಥಳಕ್ಕೆ ಹೋಗು ಎಂದು ಹೇಳಿದರೆ ಅದು ಹೋಗುವದು; ಮತ್ತು ಯಾವದೂ ನಿಮಗೆ ಅಸಾಧ್ಯವಾಗಿರುವದಿಲ್ಲ.
ಆಗ ಆತನು ಅವರಿಗೆ-- ನೀವು ಸಹ ಗ್ರಹಿಕೆ ಇಲ್ಲದವರಾಗಿದ್ದೀರಾ? ಹೊರಗಿ ನಿಂದ ಮನುಷ್ಯನೊಳಗೆ ಸೇರುವಂಥದ್ದು ಯಾವದೂ ಅವನನ್ನು ಹೊಲೆಮಾಡಲಾರದು ಎಂದು ನೀವು ತಿಳಿದುಕೊಳ್ಳುವದಿಲ್ಲವೋ?
ಯೇಸು ಅದನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನಂದರೆನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಯಾಕೆ ತರ್ಕಿಸಿಕೊಳ್ಳುತ್ತೀರಿ? ನೀವು ಇನ್ನೂ ಗ್ರಹಿಸದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣಮಾಡಿಕೊಂಡಿದ್ದಿರೋ?
ಆದರೆ ಆತನು ಬದುಕಿದ್ದಾನೆಂದೂ ಆಕೆಯು ಆತನನ್ನು ನೋಡಿದ್ದಾಳೆಂದೂ ಅವರು ಕೇಳಿದರು; ಆದರೂ ನಂಬಲಿಲ್ಲ.
ಆಗ ಆತನು ಅವರಿಗೆ--ಓ ಬುದ್ದಿಹೀನರೇ, ಪ್ರವಾದಿಗಳು ಹೇಳಿ ದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯದವರೇ,
ಅವರು ಹೀಗೆ ಮಾತನಾಡುತ್ತಿರುವಾಗ ಯೇಸು ತಾನೇ ಅವರ ಮಧ್ಯದಲ್ಲಿ ನಿಂತು ಅವರಿಗೆ--ನಿಮಗೆ ಸಮಾಧಾನವಾಗಲಿ ಅಂದನು.
ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು.
ಆಮೇಲೆ ಆತನು ತೋಮನಿಗೆ--ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ನೋಡು; ನಿನ್ನ ಕೈಯನ್ನು ಈ ಕಡೆ ಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬಿಕೆಯಿಲ್ಲದವನಾಗಿರದೆ ನಂಬುವವ ನಾಗಿರು ಅಂದನು.
ತರುವಾಯ ಆತನು ಕೇಫನಿಗೂ ಆಮೇಲೆ ಹನ್ನೆರಡು ಮಂದಿಗೂ ಕಾಣಿಸಿ ಕೊಂಡನು.
ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ
ಈ ಹೊತ್ತು ನೀವು ಆತನ ಧ್ವನಿಯನ್ನು ಕೇಳಿದರೆ ಎಂದು ಹೇಳುವಾಗ (ನಿಮ್ಮ ಹಿರಿಯರು) ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದಯ ಗಳನ್ನು ಕಠಿಣಮಾಡಿಕೊಳ್ಳಬೇಡಿರಿ.
ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.