ಯೇಸು ಅದನ್ನು ಕೇಳಿ--ಕ್ಷೇಮದಿಂದಿರುವವರಿಗೆ ಅಲ್ಲ, ಕ್ಷೇಮವಿಲ್ಲದವರಿಗೆ ವೈದ್ಯನುಬೇಕು; ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕಾಗಿ ಕರೆಯುವದಕ್ಕೆ ಬಂದೆನು ಎಂದು ಅವರಿಗೆ ಹೇಳಿದನು.
Cross references
ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.
ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
ಆದರೆ ಯೇಸು ಅದನ್ನು ಕೇಳಿ ಅವರಿಗೆ--ಕ್ಷೇಮದಿಂದಿರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವ ರಿಗೆ ವೈದ್ಯನು ಬೇಕು.
ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕ್ಷೇಮದಲ್ಲಿ ಇರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವರಿಗೆ ವೈದ್ಯನು ಬೇಕು.
ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಆದರೆ ಅವನು ಪ್ರತ್ಯುತ್ತರವಾಗಿ ತನ್ನ ತಂದೆಗೆ--ಇಗೋ, ಇಷ್ಟು ವರುಷಗಳ ವರೆಗೆ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ, ನಾನು ನಿನ್ನ ಅಪ್ಪಣೆ ಯನ್ನು ಎಂದಾದರೂ ವಿಾರಲಿಲ್ಲ; ಆದಾಗ್ಯೂ ನಾನು ನನ್ನ ಸ್ನೇಹಿತರೊಂದಿಗೆ ಸಂತೋಷಪಡುವದಕ್ಕಾಗಿ ನೀನ
ಆಗ ಆತನು ಅವರಿಗೆ--ಮನುಷ್ಯರ ಮುಂದೆ ನೀತಿವಂತರಾಗಿ ಮಾಡಿ ಕೊಳ್ಳುವವರು ನೀವೇ; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾನೆ; ಯಾಕಂದರೆ ಮನುಷ್ಯರಲ್ಲಿ ಯಾವದು ಶ್ರೇಷ್ಠವೆಂದು ಎಣಿಸಲ್ಪ ಡುತ್ತದೋ ಅದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
ಯಾಕಂದರೆ ಮನುಷ್ಯಕುಮಾರನು ತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.
ಅದಕ್ಕೆ ಅವರು ಅವನಿಗೆ--ನೀನು ಕೇವಲ ಪಾಪ ದಲ್ಲಿಯೇ ಹುಟ್ಟಿದವನು; ನೀನು ನಮಗೆ ಬೋಧಿಸು ತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
ಆತ ನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತು ಗಳನ್ನು ಕೇಳಿ--ನಾವು ಸಹ ಕುರುಡರೋ ಎಂದು ಆತನನ್ನು ಕೇಳಿದರು.ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು.
ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.
ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.
ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲ ದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.
ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.
ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.