Home Bibles ಮಾರ್ಕ 2:17 · ಕನ್ನಡ ಬೈಬಲ್
ಮಾರ್ಕ 2:17 · ಕನ್ನಡ ಬೈಬಲ್

ಯೇಸು ಅದನ್ನು ಕೇಳಿ--ಕ್ಷೇಮದಿಂದಿರುವವರಿಗೆ ಅಲ್ಲ, ಕ್ಷೇಮವಿಲ್ಲದವರಿಗೆ ವೈದ್ಯನುಬೇಕು; ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕಾಗಿ ಕರೆಯುವದಕ್ಕೆ ಬಂದೆನು ಎಂದು ಅವರಿಗೆ ಹೇಳಿದನು.

Cross references

ಯೆಶಾಯ 1:18

ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.

ಯೆಶಾಯ 55:7

ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.

ಮತ್ತಾಯ 9:12

ಆದರೆ ಯೇಸು ಅದನ್ನು ಕೇಳಿ ಅವರಿಗೆ--ಕ್ಷೇಮದಿಂದಿರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವ ರಿಗೆ ವೈದ್ಯನು ಬೇಕು.

ಮತ್ತಾಯ 18:10

ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.

ಲೂಕ 5:31

ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕ್ಷೇಮದಲ್ಲಿ ಇರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವರಿಗೆ ವೈದ್ಯನು ಬೇಕು.

ಲೂಕ 15:7

ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.

ಲೂಕ 15:10

ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.

ಲೂಕ 15:29

ಆದರೆ ಅವನು ಪ್ರತ್ಯುತ್ತರವಾಗಿ ತನ್ನ ತಂದೆಗೆ--ಇಗೋ, ಇಷ್ಟು ವರುಷಗಳ ವರೆಗೆ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ, ನಾನು ನಿನ್ನ ಅಪ್ಪಣೆ ಯನ್ನು ಎಂದಾದರೂ ವಿಾರಲಿಲ್ಲ; ಆದಾಗ್ಯೂ ನಾನು ನನ್ನ ಸ್ನೇಹಿತರೊಂದಿಗೆ ಸಂತೋಷಪಡುವದಕ್ಕಾಗಿ ನೀನ

ಲೂಕ 16:15

ಆಗ ಆತನು ಅವರಿಗೆ--ಮನುಷ್ಯರ ಮುಂದೆ ನೀತಿವಂತರಾಗಿ ಮಾಡಿ ಕೊಳ್ಳುವವರು ನೀವೇ; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾನೆ; ಯಾಕಂದರೆ ಮನುಷ್ಯರಲ್ಲಿ ಯಾವದು ಶ್ರೇಷ್ಠವೆಂದು ಎಣಿಸಲ್ಪ ಡುತ್ತದೋ ಅದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.

ಲೂಕ 19:10

ಯಾಕಂದರೆ ಮನುಷ್ಯಕುಮಾರನು ತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.

ಯೋಹಾನ 9:34

ಅದಕ್ಕೆ ಅವರು ಅವನಿಗೆ--ನೀನು ಕೇವಲ ಪಾಪ ದಲ್ಲಿಯೇ ಹುಟ್ಟಿದವನು; ನೀನು ನಮಗೆ ಬೋಧಿಸು ತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.

ಯೋಹಾನ 9:40

ಆತ ನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತು ಗಳನ್ನು ಕೇಳಿ--ನಾವು ಸಹ ಕುರುಡರೋ ಎಂದು ಆತನನ್ನು ಕೇಳಿದರು.ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು.

ಅಪೋಸ್ತಲರ ಕೃತ್ಯಗಳು 20:21

ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.

ಅಪೋಸ್ತಲರ ಕೃತ್ಯಗಳು 26:20

ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.

ರೋಮಾಪುರದವರಿಗೆ 5:6

ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲ ದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.

ರೋಮಾಪುರದವರಿಗೆ 5:20

ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.

1 ಕೊರಿಂಥದವರಿಗೆ 6:9

ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು

1 ತಿಮೋಥೆಯ 1:15

ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.

ತೀತ 2:14

ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.

ತೀತ 3:3

ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.

Interlinear

Choose Theme