ಅದಕ್ಕೆ ಫರಿಸಾಯರು ಆತನಿಗೆ--ಇಗೋ, ಅವರು ಸಬ್ಬತ್ ದಿನದಲ್ಲಿ ಮಾಡಬಾರದ್ದನ್ನು ಯಾಕೆ ಮಾಡು ತ್ತಾರೆ ಎಂದು ಕೇಳಿದರು.
Cross references
ಆದರೆ ಏಳನೆಯ ದಿನವು ನಿನ್ನ ದೇವರಾದ ಕರ್ತನ ಸಬ್ಬತ್ ಆಗಿದೆ. ಅದರಲ್ಲಿ ನೀನಾಗಲಿ ನಿನ್ನ ಮಗನಾಗಲಿ ಮಗಳಾ ಗಲಿ ದಾಸನಾಗಲಿ ದಾಸಿಯಾಗಲಿ ಪಶುಗಳಾಗಲಿ ಬಾಗಿಲ ಬಳಿಯಲ್ಲಿರುವ ಪ್ರವಾಸಿಯಾಗಲಿ ಯಾವ ಕೆಲಸವನ್ನೂ ಮಾಡಬಾರದು.
ಆರು ದಿವಸ ಕೆಲಸಮಾಡಬೇಕು; ಆದರೆ ಏಳನೆಯ ದಿನವು ಕರ್ತನಿಗೆ ಪರಿಶುದ್ಧವಾದ ವಿಶ್ರಾಂತಿಯ ಸಬ್ಬತ್ತು. ಸಬ್ಬತ್ ದಿನದಲ್ಲಿ ಕೆಲಸ ಮಾಡು ವವರೆಲ್ಲಾ ಖಂಡಿತವಾಗಿ ಸಾಯಬೇಕು.
ಆರು ದಿನಗಳು ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ನಿಮಗೆ ಪರಿಶುದ್ಧದಿನವಾಗಿಯೂ ಕರ್ತನಿಗೆ ವಿಶ್ರಾಂತಿಯ ಸಬ್ಬತ್ತಾಗಿಯೂ ಇರಬೇಕು. ಆ ದಿನದಲ್ಲಿ ಕೆಲಸ ಮಾಡುವವನು ಕೊಲ್ಲಲ್ಪಡಬೇಕು.
ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿದ್ದಾಗ ಸಬ್ಬತ್ ದಿನದಲ್ಲಿ ಕಟ್ಟಿಗೆಗಳನ್ನು ಕೂಡಿಸುವ ಮನುಷ್ಯನನ್ನು ಕಂಡರು.
ಆ ದಿವಸಗಳಲ್ಲಿ ನಾನು ಯೆಹೂದದೊಳಗೆ ಸಬ್ಬತ್ತುಗಳಲ್ಲಿ ಕೆಲವರು ದ್ರಾಕ್ಷೆ ತುಳಿಯುವದನ್ನೂ ಸಿವುಡುಗಳನ್ನು ತರುವದನ್ನೂ ಕತ್ತೆಗಳ ಮೇಲೆ ಹೇರಿ ಕೊಂಡು ಬರುವದನ್ನೂ ಮತ್ತು ಸಬ್ಬತ್ತುಗಳಲ್ಲಿ ಯೆರೂಸಲೇಮಿಗೆ ದ್ರಾಕ್ಷಾರಸವನ್ನೂ ದ್ರಾಕ್ಷೆ ಹಣ್ಣು ಗಳನ್ನೂ ಅಂಜೂರದ ಹಣ್ಣುಗಳನ್ನೂ ಎಲ್ಲಾ ಹೊರೆ ಗಳನ್ನೂ ತರುವದನ್ನು ನಾನು ನೋಡಿದ್ದರಿಂದ ಮಾರುವ ದಿವಸದಲ್ಲಿ ನಾನು ಸಾಕ್ಷಿಯಾಗಿ ಹೇಳಿದೆನು.
ಇದನ್ನು ಮಾಡುವ ಮನುಷ್ಯನೂ ಇದನ್ನು ಹಿಡಿದು ಕೊಳ್ಳುವವರ ಪುತ್ರನೂ ಅಂದರೆ ಸಬ್ಬತ್ ದಿನವನ್ನು ಅಪವಿತ್ರಮಾಡದೆ ಕೈಕೊಳ್ಳುವನೋ ಯಾವ ಕೇಡನ್ನು ಮಾಡದ ಹಾಗೆ ತನ್ನ ಕೈಯನ್ನು ಕಾಯುವನೋ ಅವನು ಧನ್ಯನು.
ಕರ್ತನು ತನ್ನ ಸಬ್ಬತ್ತನ್ನು ಕೈಕೊಂಡು ತನಗೆ ಮೆಚ್ಚಿಕೆಯಾದದ್ದನ್ನು ಆದುಕೊಂಡು ತನ್ನ ಒಡಂಬಡಿಕೆಯನ್ನು ಹಿಡಿದು ಕೊಂಡಿರುವ ನಪುಂಸಕರಿಗೆ--
ಕರ್ತನನ್ನು ಸೇವಿಸುವದಕ್ಕೂ ಆತನ ಹೆಸರನ್ನು ಪ್ರೀತಿಮಾಡುವದಕ್ಕೂ ಆತನ ಸೇವಕರಾಗಿ ರುವದಕ್ಕೂ ತಾವೇ ಕರ್ತನೊಂದಿಗೆ ಸೇರಿಕೊಂಡಿರುವ ಅನ್ಯರ ಮಕ್ಕಳನ್ನು ಸಬ್ಬತ್ ದಿನವನ್ನು ಅಪವಿತ್ರ ಮಾಡದೆ ಕೈಕೊಳ್ಳುವ ಪ್ರತಿಯೊಬ್ಬನನ್ನೂ ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವವರನೂ
ನೀನು ಸಬ್ಬತ್ತಿನಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟ ವನ್ನು ಮಾಡದೇ ಹೋದರೆ ಸಬ್ಬತ್ತನ್ನು ಆನಂದಕರ ವಾದದ್ದೆಂದೂ ಕರ್ತನ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ ಸ್ವಂತ ಇಷ್ಟವನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
ಒಳ್ಳೇದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? ಅವರು ನನ್ನ ಪ್ರಾಣಕ್ಕೆ ಕುಣಿಯನ್ನು ಅಗೆದಿದ್ದಾರೆ; ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವದಕ್ಕೂ ನಿನ್ನ ಉಗ್ರವನ್ನು ಅವರಿಂದ ತಿರುಗಿಸುವದಕ್ಕೂ ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ.
ಮತ್ತು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ನೀನು ಯಾಕೆ ನೋಡುತ್ತೀ?
ಆದರೆ ಫರಿಸಾಯರು ಅದನ್ನು ನೋಡಿ ಆತನಿಗೆ--ಇಗೋ, ನಿನ್ನ ಶಿಷ್ಯರು ಸಬ್ಬತ್ದಿನದಲ್ಲಿ ಮಾಡ ಬಾರದ್ದನ್ನು ಮಾಡುತ್ತಾರೆ ಅಂದರು.
ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯ ವನ್ನು ಯಾಕೆ ಮಾರುತ್ತಾರೆ? ಯಾಕಂದರೆ ಅವರು ರೊಟ್ಟಿ ತಿನ್ನುವಾಗ ತಮ್ಮ ಕೈಗಳನ್ನು ತೊಳಕೊಳ್ಳುವದಿಲ್ಲ ಅಂದರು.
ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ
ಈ ಮನುಷ್ಯನು ಯಾಕೆ ಹೀಗೆ ದೇವದೂಷಣೆಗಳನ್ನು ಮಾಡುತ್ತಾನೆ? ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು ಎಂದು ತಮ್ಮ ಹೃದಯ ಗಳಲ್ಲಿ ಅಂದುಕೊಂಡರು.
ಆತನು ಸುಂಕದವರ ಮತ್ತು ಪಾಪಿಗಳ ಜೊತೆಯಲ್ಲಿ ಊಟ ಮಾಡುತ್ತಿರು ವದನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ--ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ತಿನ್ನುವದು ಮತ್ತು ಕುಡಿಯುವದು ಹೇಗೆ ಅಂದರು.
ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ.