ಯಾಕಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರು ಆತನನ್ನು ಮುಟ್ಟಬೇ ಕೆಂದು ಆತನ ಮೇಲೆ ಬೀಳುತ್ತಿದ್ದರು.
Cross references
ಆದರೆ ಕರ್ತನು ಫರೋಹನನ್ನೂ ಅವನ ಮನೆ ಯನ್ನೂ ಅಬ್ರಾಮನ ಹೆಂಡತಿಯಾದ ಸಾರಯಳಿಗಾಗಿ ಮಹಾಬಾಧೆಗಳಿಂದ ಬಾಧಿಸಿದನು.
ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಅಗಿಯುವದಕ್ಕಿಂತ ಮುಂಚೆ ಕರ್ತನ ಕೋಪವು ಜನರಮೇಲೆ ಉರಿದದ್ದರಿಂದ ಆತನು ಜನರನ್ನು ಮಹಾ ದೊಡ್ಡ ವ್ಯಾಧಿಯಿಂದ ಹೊಡೆದನು.
ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.
ಆಗ ಇಗೋ, ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದ ಒಬ್ಬ ಸ್ತ್ರೀಯು ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು.
ಆದರೆ ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು; ಮತ್ತು ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿಸಿದರು. ಆಗ ಆತನು ಅವರೆಲ್ಲರನ್ನು ವಾಸಿ ಮಾಡಿದನು.
ಆಗ ಯೇಸು ಹೊರಟುಹೋಗಿ ಜನರ ಮಹಾಸಮೂಹವನ್ನು ಕಂಡು ಅವರ ಮೇಲೆ ಕನಿಕರ ಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.
ಅವರು ಆತನ ಉಡು ಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿ ಕೊಂಡರು; ಮತ್ತು ಯಾರಾರು ಮುಟ್ಟಿದರೋ ಅವರು ಸಂಪೂರ್ಣವಾಗಿ ಸ್ವಸ್ಥರಾದರು.
ಆಗ ಆಕೆಯು ಯೇಸುವಿನ ವಿಷಯ ಕೇಳಿ ಜನರ ಗುಂಪಿನ ಹಿಂದೆ ಬಂದು ಆತನ ಉಡುಪನ್ನು ಮುಟ್ಟಿ ದಳು.
ಆಗ ಆತನು ಆಕೆಗೆ--ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥ ಮಾಡಿತು; ಸಮಾಧಾನದಿಂದ ಹೋಗು; ನಿನ್ನ ಜಾಡ್ಯದಿಂದ ನೀನು ಸ್ವಸ್ಥಳಾಗು ಅಂದನು.
ತರುವಾಯ ಆತನು ಯಾವ ಯಾವ ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ, ಸೀಮೆಯಲ್ಲಿ ಪ್ರವೇಶಿಸಿದನೋ ಅಲ್ಲೆಲ್ಲಾ ಅವರು ಅಸ್ವಸ್ಥ ವಾದವರನ್ನು ಬೀದಿಗಳಲ್ಲಿ ಮಲಗಿಸಿ ಆತನ ಉಡುಪಿನ ಅಂಚನ್ನಾದರೂ ಅವರು ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಯಾರಾರು ಆತನನ್ನು ಮುಟ್ಟಿದರೋ ಅವರು ಸ್ವಸ
ಆಗ ಒಬ್ಬ ಶತಾಧಿಪತಿಗೆ ಪ್ರಿಯನಾಗಿದ್ದ ಆಳು ಅಸ್ವಸ್ಥನಾಗಿ ಸಾಯುವಹಾಗಿದ್ದನು.
ಹೀಗಿರುವದರಿಂದ ಪೇತ್ರನು ಹಾದು ಹೋಗುವಾಗ ಅವನ ನೆರಳಾದರೂ ಅವರಲ್ಲಿ ಕೆಲವರ ಮೇಲೆ ಬೀಳುವಂತೆ ಜನರು ರೋಗಿಗಳನ್ನು ಹಾಸಿಗೆಗಳ ಮೇಲೆಯೂ ದೋಲಿಗಳ ಮೇಲೆಯೂ ಇಟ್ಟು ಬೀದಿಗಳಿಗೆ ತೆಗೆದುಕೊಂಡು ಬಂದರು.
ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದದರಿಂದ
ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸು ತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು.