ಆತನು ಹೇಳಿದ್ದೇನಂದರೆ--ಒಬ್ಬ ಮನುಷ್ಯನು ಬೀಜವನ್ನು ಭೂಮಿಯಲ್ಲಿ ಹಾಕಿದಂತೆಯೇ ದೇವರ ರಾಜ್ಯವು ಇದೆ.
Cross references
ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು.
ಯಾವನು ಗಾಳಿಯನ್ನು ಲಕ್ಷಿಸುವನೋ ಅವನು ಬಿತ್ತುವದಿಲ್ಲ; ಮೋಡಗಳನ್ನು ಗಮನಿಸುವವನು ಕೊಯ್ಯುವದಿಲ್ಲ.
ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು, ಸಂಜೆ ತನಕ ನಿನ್ನ ಕೈಯನ್ನು ಹಿಂತೆಗೆಯಬೇಡ; ಇದೋ, ಅದೋ ಯಾವದೋ ಕೈಗೂಡಿ ಬರು ವದೋ ಇಲ್ಲವೆ ಎರಡೂ ಒಂದೇ ರೀತಿ ಒಳ್ಳೆಯದಾ ಗುವವೋ ಎಂದು ನಿನಗೆ ತಿಳಿಯದು.
ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ತನ್ನ ಭೂಮಿಯ ಮಣ್ಣು ಹೆಂಟೆಯನ್ನು ತೆಗೆದು (ದಿನವೆಲ್ಲಾ) ಹೊಡೆ ಯುವನೋ?
ಎಲ್ಲಾ ನೀರುಗಳ ಬಳಿಯಲ್ಲಿ ಬಿತ್ತುತ್ತಲೂ ಎತ್ತು ಕತ್ತೆಗಳನ್ನು (ಕಾವಲಿಗೆ) ಮೇಯ ಬಿಡುತ್ತಲೂ ಇರುವ ನೀವು ಧನ್ಯರೇ ಸರಿ.
ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.
ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.
ಆಗ ಆತನು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದೇನಂದರೆ--ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟನು.
ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
ಆತನು ಮತ್ತೊಂದು ಸಾಮ್ಯವನ್ನು ಹೇಳಿದ್ದೇ ನಂದರೆ--ಪರಲೋಕ ರಾಜ್ಯವು ಒಳ್ಳೇ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆ ಯಾಗಿದೆ.
ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಮನುಷ್ಯನು ತಕ್ಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದ ಸಾಸಿವೆ ಕಾಳಿಗೆ ಪರಲೋಕರಾಜ್ಯವು ಹೋಲಿಕೆಯಾಗಿದೆ.
ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲಾ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಪರಲೋಕ ರಾಜ್ಯವು ಹೋಲಿಕೆಯಾಗಿದೆ.
ಕೇಳಿರಿ, ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟುಹೋದನು.
ಬಿತ್ತುವವನು ವಾಕ್ಯವನ್ನು ಬಿತ್ತುತ್ತಾನೆ.
ಬಿತ್ತುವವನು ಬೀಜವನ್ನು ಬಿತ್ತುವದಕ್ಕಾಗಿ ಹೊರಟು ಹೋದನು. ಅವನು ಬಿತ್ತಿದಾಗ ಕೆಲವು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು; ಆಕಾಶದ ಪಕ್ಷಿಗಳು ಅವುಗಳನ್ನು ನುಂಗಿಬಿಟ್ಟವು.
ಆ ಸಾಮ್ಯವು ಇದೇ; ಬೀಜವು ದೇವರ ವಾಕ್ಯವೇ.
ಇದಲ್ಲದೆ ಆತನು--ದೇವರ ರಾಜ್ಯವು ಯಾವ ದಕ್ಕೆ ಹೋಲಿಕೆಯಾಗಿದೆ? ನಾನು ಯಾವದಕ್ಕೆ ಅದನ್ನು ಹೋಲಿಸಲಿ?
ಕೊಯ್ಯುವವನು ಕೂಲಿಯನ್ನು ಹೊಂದಿ ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳು ತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಾಗಿ ಸಂತೋಷಿಸುವರು.
ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯ ದಿದ್ದರೆ ಅದು ಒಂದೇ ಆಗಿ ಉಳಿಯುವದು; ಅದು ಸತ್ತಮೇಲೆ ಬಹಳ ಫಲಕೊಡುವದು.
ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು.
ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.