ಯಾಕಂದರೆ ಭೂಮಿಯು ಮೊದಲು ಮೊಳಕೆಯನ್ನು ಆಮೇಲೆ ತೆನೆಯನ್ನು ಇದಾದ ಮೇಲೆ ತೆನೆಯಲ್ಲಿ ಪೂರ್ಣಕಾಳನ್ನು ತನ್ನಷ್ಟಕ್ಕೆ ತಾನೇ ಫಲಿಸುತ್ತದೆ.
Cross references
ತರುವಾಯ ದೇವರು--ಭೂಮಿಯು ಹುಲ್ಲನ್ನೂ ಬೀಜಕೊಡುವ ಪಲ್ಯವನ್ನೂ ತನ್ನೊಳಗೆ ಬೀಜವಿದ್ದು ತನ್ನ ಜಾತಿಯ ಪ್ರಕಾರ ಫಲಫಲಿಸುವ ಹಣ್ಣಿನ ಮರವನ್ನೂ ಭೂಮಿಯ ಮೇಲೆ ಮೊಳೆಯಿಸಲಿ ಎಂದು ಹೇಳಿದನು; ಅದು ಹಾಗೆಯೇ ಆಯಿತು.
ಇದೇ ಭೂಮ್ಯಾಕಾಶಗಳ ನಿರ್ಮಾಣಚರಿತ್ರೆ.
ಕರ್ತನಾದ ದೇವರು ನೋಟಕ್ಕೆ ರಮ್ಯವಾದ ಮತ್ತು ಊಟಕ್ಕೆ ಒಳ್ಳೇದಾದ ಎಲ್ಲಾ ಮರಗಳನ್ನು, ತೋಟದ ಮಧ್ಯದಲ್ಲಿ ಜೀವದ ಮರವನ್ನು, ಒಳ್ಳೇದರ ಕೆಟ್ಟದರ ತಿಳುವಳಿಕೆಯ ಮರವನ್ನು ಭೂಮಿಯೊಳಗಿಂದ ಬೆಳೆಯಿಸಿದನು.
ಆದದರಿಂದ ಈಗ ನಿನ್ನ ಕೈಯಿಂದ ನಿನ್ನ ಸಹೋದರನ ರಕ್ತವನ್ನು ಕುಡಿಯುವದಕ್ಕೆ ತನ್ನ ಬಾಯನ್ನು ತೆರೆದ ಭೂಮಿಯ ದೆಸೆಯಿಂದ ನೀನು ಶಪಿಸಲ್ಪಟ್ಟವನಾದಿ.
ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.
ಅವರು ಕರ್ತನ ಆಲಯದಲ್ಲಿ ನೆಡಲ್ಪಟ್ಟು ನಮ್ಮ ದೇವರ ಅಂಗಳಗಳಲ್ಲಿ ವೃದ್ಧಿಯಾಗುವರು.
ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು.
ಆಕಾಶದ ಕೆಳಗೆ ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲವಿದೆ; ಪ್ರತಿಯೊಂದು ಉದ್ದೇಶಕ್ಕೂ ಒಂದು ಸಮಯವಿದೆ.
ತನ್ನ ಸಮಯದಲ್ಲಿ ಪ್ರತಿಯೊಂದನ್ನು ಆತನು ಸುಂದರವಾಗಿ ಮಾಡಿದ್ದಾನೆ. ಆದಿಯಿಂದ ಅಂತ್ಯದ ವರೆಗೂ ದೇವರು ನಡಿಸುವ ಕೆಲಸವನ್ನು ಯಾವ ಮನುಷ್ಯನೂ ಗ್ರಹಿಸಲಾರದಂತೆ ಅವರ ಹೃದಯದಲ್ಲಿ ಆತನು ಲೋಕವನ್ನು ಇಟ್ಟಿದ್ದಾನೆ.
ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು.
ಅದು ಮೊಳೆತು ಫಲಕೊಟ್ಟಾಗ ಹಣಜಿ ಸಹ ಕಾಣಿಸಿ ಕೊಂಡಿತು.
ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತ ಚಿಕ್ಕದಾಗಿರುವ ಸಾಸಿವೆ ಕಾಳು ಭೂಮಿಯಲ್ಲಿ ಬಿತ್ತಲ್ಪಟ್ಟದ್ದಕ್ಕೆ ಅದು ಹೋಲಿಕೆ ಯಾಗಿದೆ.
ಒಳ್ಳೇ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ಯೇಸು ಕ್ರಿಸ್ತನ ದಿನದವರೆಗೆ ಸಿದ್ದಿಗೆ ತರುವನೆಂದು ನನಗೆ ಭರವಸ ವುಂಟು.
ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ
ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ
ನಮ್ಮ ಪ್ರಿತಿಯು ನಿಮ್ಮ ಕಡೆಗೆ ಹೇಗೋ ಹಾಗೆಯೇ ನಿಮ್ಮ ಪ್ರೀತಿಯೂ ಒಬ್ಬರಿಂದೊಬ್ಬರಿಗೂ ಎಲ್ಲರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ನಿಮಗೆ ಅನುಗ್ರಹಿಸಲಿ.ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.