ಆದರೆ ಫಲವು ಫಲಿಸಿದಾಗ ಸುಗ್ಗಿಯು ಬಂದದರಿಂದ ಅವನು ಕೂಡಲೆ ಕುಡು ಗೋಲು ಹಾಕಿ ಕೊಯ್ಯುತ್ತಾನೆ.
Cross references
ಸಿವುಡು ತನ್ನ ಕಾಲದಲ್ಲಿ ಏಳುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿಗೆ ಸೇರುವಿ.ಇಗೋ, ಇದನ್ನೇ ನಾವು ವಿಚಾರಿಸಿದೆವು; ಅದು ಇದೇ; ಇದನ್ನು ಆಲಿಸು; ನಿನ್ನ ಹಿತಕ್ಕಾಗಿ ಇದನ್ನು ತಿಳುಕೋ.
ನೀತಿವಂತನು ನಾಶವಾಗುವನು, ಅದನ್ನು ಯಾವ ಮನುಷ್ಯನು ಮನಸ್ಸಿಗೆ ತಾರನು. ಕರುಣೆಯುಳ್ಳ ಮನುಷ್ಯರು ತೆಗೆದುಹಾಕಲ್ಪಡುವರು, ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾಗು ತ್ತಾನೆಂಬದನ್ನು ಯಾರೂ ಯೋಚಿಸರು.
ಕುಡುಗೋಲನ್ನು ಹಾಕಿರಿ, ಬೆಳೆ ಪಕ್ವವಾಯಿತು; ಬಂದು ಇಳಿಯಿರಿ; ದ್ರಾಕ್ಷೆಯ ಅಲೆ ತುಂಬಿ ಅದೆ; ತೊಟ್ಟಿಗಳು ತುಳುಕುತ್ತವೆ; ಅವರ ಕೆಟ್ಟತನವು ಬಹಳವಾಗಿದೆ.
ಸುಗ್ಗೀಕಾಲದ ವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ--ಮೊದಲು ಹಣಜಿಯನ್ನು ಕೂಡಿಸಿ ಅದನ್ನು ಸುಡುವದಕ್ಕೆ ಹೊರೆ ಕಟ್ಟಿರಿ; ಆದರೆ ಗೋದಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು ಅಂದನು.
ಹೇಗೆ ಹಣಜಿಯನ್ನು ಕೂಡಿಸಿ ಬೆಂಕಿಯಲ್ಲಿ ಸುಡು ವರೋ ಹಾಗೆಯೇ ಈ ಲೋಕಾಂತ್ಯದಲ್ಲಿ ಆಗುವದು.
ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ.
ಪರಲೋಕದಿಂದ ಬಂದ ಶಬ್ದವನ್ನು ನಾನು ಕೇಳಿ ದೆನು. ಅದು--ಇಂದಿನಿಂದ ಕರ್ತನಲ್ಲಿ ಯಾರಾರು ಸಾಯುವರೋ ಆ ಸತ್ತವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು; ಹೌದು, ಅವರು ತಮ್ಮ ಪ್ರಯಾಸಗಳಿಂದ ವಿಶ್ರಮಿಸಿಕೊಳ್ಳುವರು, ಅವರ ಕ್ರಿಯೆಗಳು ಅವರನ್ನು ಹಿಂಬಾಲಿಸುತ್ತವೆ ಎಂದು ಆತ