Cross references
ಹೀಗಿರುವದರಿಂದ ಈಗ ಇಸ್ರಾಯೇಲೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿ ಅವುಗಳನ್ನು ಮಾಡಿರಿ.
ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಕರ್ತನ ಭಯವನ್ನು ನಿಮಗೆ ಕಲಿಸುವೆನು.
ಓ ಮಗಳೇ, ಕಿವಿಗೊಟ್ಟು ಕೇಳಿ ಆಲೋಚಿಸು, ನಿನ್ನ ಸ್ವಂತ ಜನರನ್ನು ನಿನ್ನ ತಂದೆಯ ಮನೆಯನ್ನು ಮರೆತುಬಿಡು.
ಆದುದರಿಂದ ಓ ನನ್ನ ಮಕ್ಕಳಿರಾ, ನನ್ನ ಕಡೆಗೆ ಕಿವಿಗೊಡಿರಿ; ನನ್ನ ಬಾಯಿಯ ಮಾತುಗಳನ್ನು ಆಲಿಸಿರಿ.
ಆದದರಿಂದ ಓ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.
ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು, ಸಂಜೆ ತನಕ ನಿನ್ನ ಕೈಯನ್ನು ಹಿಂತೆಗೆಯಬೇಡ; ಇದೋ, ಅದೋ ಯಾವದೋ ಕೈಗೂಡಿ ಬರು ವದೋ ಇಲ್ಲವೆ ಎರಡೂ ಒಂದೇ ರೀತಿ ಒಳ್ಳೆಯದಾ ಗುವವೋ ಎಂದು ನಿನಗೆ ತಿಳಿಯದು.
ನನ್ನ ಧ್ವನಿಗೆ ಕಿವಿಗೊಟ್ಟು ಕೇಳಿರಿ; ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ.
ಓ ಯಾಕೋಬನ ಮನೆತನದವರೇ, ಇಸ್ರಾ ಯೇಲ್ ಮನೆತನದಲ್ಲಿ ಉಳಿದಿರುವವರೆಲ್ಲರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ವಹಿಸುತ್ತಿದ್ದಾತನ ಮಾತನ್ನು ಕೇಳಿರಿ--
ಕಠಿಣ ಹೃದಯವುಳ್ಳವರೇ, ನೀತಿಗೆ ದೂರವಾದವರೇ, ನನಗೆ ಕಿವಿಗೊಡಿರಿ;ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.
ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ.
ಆಗ ಆತನು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದೇನಂದರೆ--ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟನು.
ಆತನು ಮತ್ತೊಂದು ಸಾಮ್ಯವನ್ನು ಹೇಳಿದ್ದೇ ನಂದರೆ--ಪರಲೋಕ ರಾಜ್ಯವು ಒಳ್ಳೇ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆ ಯಾಗಿದೆ.
ಅದು ಮೊಳೆತು ಫಲಕೊಟ್ಟಾಗ ಹಣಜಿ ಸಹ ಕಾಣಿಸಿ ಕೊಂಡಿತು.
ಆತನು ಅವರಿಗೆ ಹೇಳಿದ್ದೇನಂದರೆ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
ಬಿತ್ತುವವನು ವಾಕ್ಯವನ್ನು ಬಿತ್ತುತ್ತಾನೆ.
ಯಾವನಿಗಾದರೂ ಕೇಳುವದಕ್ಕೆ ಕಿವಿಗಳಿದ್ದರೆ ಅವನು ಕೇಳಲಿ ಅಂದನು.
ಆತನು ಹೇಳಿದ್ದೇನಂದರೆ--ಒಬ್ಬ ಮನುಷ್ಯನು ಬೀಜವನ್ನು ಭೂಮಿಯಲ್ಲಿ ಹಾಕಿದಂತೆಯೇ ದೇವರ ರಾಜ್ಯವು ಇದೆ.
ಆಮೇಲೆ ಆತನು ಜನರನ್ನೆಲ್ಲಾ ತನ್ನ ಬಳಿಗೆ ಕರೆದು ಅವರಿಗೆ--ನಿಮ್ಮಲ್ಲಿ ಪ್ರತಿಯೊಬ್ಬನು ನಾನು ಹೇಳುವದನ್ನು ಕೇಳಿ ಗ್ರಹಿಸಿರಿ;
ಬಿತ್ತುವವನು ಬೀಜವನ್ನು ಬಿತ್ತುವದಕ್ಕಾಗಿ ಹೊರಟು ಹೋದನು. ಅವನು ಬಿತ್ತಿದಾಗ ಕೆಲವು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು; ಆಕಾಶದ ಪಕ್ಷಿಗಳು ಅವುಗಳನ್ನು ನುಂಗಿಬಿಟ್ಟವು.
ನೀವು--ಸುಗ್ಗಿಯು ಬರುವದಕ್ಕೆ ಇನ್ನೂ ನಾಲ್ಕು ತಿಂಗಳುಗಳು ಇವೆಯೆಂದು ಹೇಳುತ್ತೀರಲ್ಲವೋ? ಮತ್ತು--ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ, ಯಾಕಂದರೆ ಅವು ಈಗಾ ಗಲೇ ಬೆಳ್ಳಗಾಗಿ ಕೊಯ್ಲಿಗೆ ಬಂದವೆ ಎಂದು ನಾನು ನಿಮಗೆ ಹೇಳುತ್ತೇನೆ.
ಆದರೆ ಪೇತ್ರನು ಹನ್ನೊಂದು ಮಂದಿಯೊಂದಿಗೆ ಎದ್ದು ನಿಂತು ಗಟ್ಟಿಯಾದ ಸ್ವರದಿಂದ ಅವರಿಗೆ-- ಯೂದಾಯದವರೇ, ಯೆರೂಸಲೇಮಿನಲ್ಲಿ ವಾಸ ವಾಗಿರುವ ಎಲ್ಲಾ ಜನರೇ, ಈ ವಿಷಯ ನಿಮಗೆ ಗೊತ್ತಾಗುವ ಹಾಗೆ ನನ್ನ ಮಾತುಗಳಿಗೆ ಕಿವಿಗೊಡಿರಿ.
ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು.
ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು.
ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ; ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.
ಆತ್ಮನು ಸಭೆಗಳಿಗೆ ಹೇಳುವ ದನ್ನು ಕಿವಿಯುಳ್ಳವನು ಕೇಳಲಿ.