Home Bibles ಮಾರ್ಕ 4:3 · ಕನ್ನಡ ಬೈಬಲ್
ಮಾರ್ಕ 4:3 · ಕನ್ನಡ ಬೈಬಲ್

ಕೇಳಿರಿ, ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟುಹೋದನು.

Cross references

ದ್ವಿತೀಯೋಪದೇಶಕಾಂಡ 4:1

ಹೀಗಿರುವದರಿಂದ ಈಗ ಇಸ್ರಾಯೇಲೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿ ಅವುಗಳನ್ನು ಮಾಡಿರಿ.

ಕೀರ್ತನೆಗಳು 34:11

ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಕರ್ತನ ಭಯವನ್ನು ನಿಮಗೆ ಕಲಿಸುವೆನು.

ಕೀರ್ತನೆಗಳು 45:10

ಓ ಮಗಳೇ, ಕಿವಿಗೊಟ್ಟು ಕೇಳಿ ಆಲೋಚಿಸು, ನಿನ್ನ ಸ್ವಂತ ಜನರನ್ನು ನಿನ್ನ ತಂದೆಯ ಮನೆಯನ್ನು ಮರೆತುಬಿಡು.

ಸಾಮೇತಿಗಳು 7:24

ಆದುದರಿಂದ ಓ ನನ್ನ ಮಕ್ಕಳಿರಾ, ನನ್ನ ಕಡೆಗೆ ಕಿವಿಗೊಡಿರಿ; ನನ್ನ ಬಾಯಿಯ ಮಾತುಗಳನ್ನು ಆಲಿಸಿರಿ.

ಸಾಮೇತಿಗಳು 8:32

ಆದದರಿಂದ ಓ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.

ಸಭಾಪ್ರಸಂಗಿ 11:6

ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು, ಸಂಜೆ ತನಕ ನಿನ್ನ ಕೈಯನ್ನು ಹಿಂತೆಗೆಯಬೇಡ; ಇದೋ, ಅದೋ ಯಾವದೋ ಕೈಗೂಡಿ ಬರು ವದೋ ಇಲ್ಲವೆ ಎರಡೂ ಒಂದೇ ರೀತಿ ಒಳ್ಳೆಯದಾ ಗುವವೋ ಎಂದು ನಿನಗೆ ತಿಳಿಯದು.

ಯೆಶಾಯ 28:23

ನನ್ನ ಧ್ವನಿಗೆ ಕಿವಿಗೊಟ್ಟು ಕೇಳಿರಿ; ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ.

ಯೆಶಾಯ 46:3

ಓ ಯಾಕೋಬನ ಮನೆತನದವರೇ, ಇಸ್ರಾ ಯೇಲ್‌ ಮನೆತನದಲ್ಲಿ ಉಳಿದಿರುವವರೆಲ್ಲರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ವಹಿಸುತ್ತಿದ್ದಾತನ ಮಾತನ್ನು ಕೇಳಿರಿ--

ಯೆಶಾಯ 46:12

ಕಠಿಣ ಹೃದಯವುಳ್ಳವರೇ, ನೀತಿಗೆ ದೂರವಾದವರೇ, ನನಗೆ ಕಿವಿಗೊಡಿರಿ;ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.

ಯೆಶಾಯ 55:1

ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ.

ಮತ್ತಾಯ 13:3

ಆಗ ಆತನು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದೇನಂದರೆ--ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟನು.

ಮತ್ತಾಯ 13:24

ಆತನು ಮತ್ತೊಂದು ಸಾಮ್ಯವನ್ನು ಹೇಳಿದ್ದೇ ನಂದರೆ--ಪರಲೋಕ ರಾಜ್ಯವು ಒಳ್ಳೇ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆ ಯಾಗಿದೆ.

ಮತ್ತಾಯ 13:26

ಅದು ಮೊಳೆತು ಫಲಕೊಟ್ಟಾಗ ಹಣಜಿ ಸಹ ಕಾಣಿಸಿ ಕೊಂಡಿತು.

ಮಾರ್ಕ 4:9

ಆತನು ಅವರಿಗೆ ಹೇಳಿದ್ದೇನಂದರೆ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.

ಮಾರ್ಕ 4:14

ಬಿತ್ತುವವನು ವಾಕ್ಯವನ್ನು ಬಿತ್ತುತ್ತಾನೆ.

ಮಾರ್ಕ 4:23

ಯಾವನಿಗಾದರೂ ಕೇಳುವದಕ್ಕೆ ಕಿವಿಗಳಿದ್ದರೆ ಅವನು ಕೇಳಲಿ ಅಂದನು.

ಮಾರ್ಕ 4:26

ಆತನು ಹೇಳಿದ್ದೇನಂದರೆ--ಒಬ್ಬ ಮನುಷ್ಯನು ಬೀಜವನ್ನು ಭೂಮಿಯಲ್ಲಿ ಹಾಕಿದಂತೆಯೇ ದೇವರ ರಾಜ್ಯವು ಇದೆ.

ಮಾರ್ಕ 7:14

ಆಮೇಲೆ ಆತನು ಜನರನ್ನೆಲ್ಲಾ ತನ್ನ ಬಳಿಗೆ ಕರೆದು ಅವರಿಗೆ--ನಿಮ್ಮಲ್ಲಿ ಪ್ರತಿಯೊಬ್ಬನು ನಾನು ಹೇಳುವದನ್ನು ಕೇಳಿ ಗ್ರಹಿಸಿರಿ;

ಲೂಕ 8:5

ಬಿತ್ತುವವನು ಬೀಜವನ್ನು ಬಿತ್ತುವದಕ್ಕಾಗಿ ಹೊರಟು ಹೋದನು. ಅವನು ಬಿತ್ತಿದಾಗ ಕೆಲವು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು; ಆಕಾಶದ ಪಕ್ಷಿಗಳು ಅವುಗಳನ್ನು ನುಂಗಿಬಿಟ್ಟವು.

ಯೋಹಾನ 4:35

ನೀವು--ಸುಗ್ಗಿಯು ಬರುವದಕ್ಕೆ ಇನ್ನೂ ನಾಲ್ಕು ತಿಂಗಳುಗಳು ಇವೆಯೆಂದು ಹೇಳುತ್ತೀರಲ್ಲವೋ? ಮತ್ತು--ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ, ಯಾಕಂದರೆ ಅವು ಈಗಾ ಗಲೇ ಬೆಳ್ಳಗಾಗಿ ಕೊಯ್ಲಿಗೆ ಬಂದವೆ ಎಂದು ನಾನು ನಿಮಗೆ ಹೇಳುತ್ತೇನೆ.

ಅಪೋಸ್ತಲರ ಕೃತ್ಯಗಳು 2:14

ಆದರೆ ಪೇತ್ರನು ಹನ್ನೊಂದು ಮಂದಿಯೊಂದಿಗೆ ಎದ್ದು ನಿಂತು ಗಟ್ಟಿಯಾದ ಸ್ವರದಿಂದ ಅವರಿಗೆ-- ಯೂದಾಯದವರೇ, ಯೆರೂಸಲೇಮಿನಲ್ಲಿ ವಾಸ ವಾಗಿರುವ ಎಲ್ಲಾ ಜನರೇ, ಈ ವಿಷಯ ನಿಮಗೆ ಗೊತ್ತಾಗುವ ಹಾಗೆ ನನ್ನ ಮಾತುಗಳಿಗೆ ಕಿವಿಗೊಡಿರಿ.

1 ಕೊರಿಂಥದವರಿಗೆ 3:6

ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು.

ಹೆಬ್ರಿಯರಿಗೆ 2:1

ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು.

ಯಾಕೋಬ 2:5

ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?

ಪ್ರಕಟನೆ 2:7

ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.

ಪ್ರಕಟನೆ 2:11

ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ; ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.

ಪ್ರಕಟನೆ 2:29

ಆತ್ಮನು ಸಭೆಗಳಿಗೆ ಹೇಳುವ ದನ್ನು ಕಿವಿಯುಳ್ಳವನು ಕೇಳಲಿ.

Interlinear

Choose Theme