ಅದೇ ದಿವಸ ಸಾಯಂಕಾಲವಾದಾಗ ಆತನು ಅವರಿಗೆ--ನಾವು ಆಚೇದಡಕ್ಕೆ ಹೋಗೋಣ ಅಂದನು.
Cross references
ಇದಾದಮೇಲೆ ಯೇಸು ತನ್ನ ಸುತ್ತಲೂ ಇದ್ದ ಜನರ ದೊಡ್ಡ ಸಮೂಹಗಳನ್ನು ನೋಡಿ ಆಚೆಕಡೆಗೆ ಹೊರಟುಹೋಗುವಂತೆ ಅಪ್ಪಣೆ ಕೊಟ್ಟನು.
ಆತನು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.
ಕೂಡಲೆ ಯೇಸು ತಾನು ಜನಸಮೂಹಗಳನ್ನು ಕಳುಹಿಸಿ ಬಿಡುವಷ್ಟರೊಳಗಾಗಿ ತನ್ನ ಶಿಷ್ಯರು ದೋಣಿ ಯನ್ನು ಹತ್ತಿ ತನಗಿಂತ ಮುಂಚೆ ಆಚೇ ದಡಕ್ಕೆ ಹೋಗ ಬೇಕೆಂದು ಅವರನ್ನು ಒತ್ತಾಯ ಮಾಡಿದನು.
ಯೇಸು ತಿರಿಗಿ ದೋಣಿಯಲ್ಲಿ ಆಚೇದಡಕ್ಕೆ ಹೋದಾಗ ಬಹಳ ಜನರು ಆತನ ಬಳಿಗೆ ಕೂಡಿಬಂದರು; ಆಗ ಆತನು ಸಮುದ್ರದ ಸವಿಾಪದ ಲ್ಲಿದ್ದನು.
ಆತನು ಜನರನ್ನು ಕಳುಹಿಸುವಷ್ಟರಲ್ಲಿ ತನ್ನ ಶಿಷ್ಯರು ಕೂಡಲೆ ದೋಣಿಯನ್ನು ಹತ್ತಿ ಮುಂದಾಗಿ ಆಚೇ ಕಡೆಯ ಬೇತ್ಸಾಯಿದಕ್ಕೆ ಹೋಗುವಂತೆ ಅವರನ್ನು ಬಲವಂತ ಮಾಡಿದನು.
ಆತನು ಅವರನ್ನು ಬಿಟ್ಟು ತಿರಿಗಿ ದೋಣಿಯನ್ನು ಹತ್ತಿ ಆಚೇದಡಕ್ಕೆ ಹೊರಟು ಹೋದನು.
ಇದಾದ ಮೇಲೆ ಒಂದಾನೊಂದು ದಿವಸ ಆತನು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ ಅವರಿಗೆ--ನಾವು ಕೆರೆಯ ಆಚೇದಡಕ್ಕೆ ಹೋಗೋಣ ಎಂದು ಹೇಳಿದಾಗ ಅವರು ಹೊರಟರು.
ಆಗ ಆತನು ಅವರಿಗೆ--ನಿಮ್ಮ ನಂಬಿಕೆ ಎಲ್ಲಿ ಅಂದನು. ಆಗ ಅವರು ಹೆದರಿದವರಾಗಿ ಆಶ್ಚರ್ಯದಿಂದ ಒಬ್ಬರಿಗೊಬ್ಬರು-- ಈತನು ಎಂಥಾ ಮನುಷ್ಯನು? ಯಾಕಂದರೆ ಈತನು ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವುಗಳು ಆತನಿಗೆ ವಿಧೇಯವಾಗು ತ್ತವಲ್ಲಾ ಎಂದು ಮಾತನಾಡಿಕೊಂಡರು.
ಇವುಗಳಾದ ಮೇಲೆ ಯೇಸು ತಿಬೇರಿ ಯವೆಂಬ ಗಲಿಲಾಯ ಸಮುದ್ರದ ಆಚೆಗೆ ಹೋದನು.
ದೋಣಿಯನ್ನು ಹತ್ತಿ ಸಮುದ್ರಮಾರ್ಗವಾಗಿ ಕಪೆರ್ನೌಮಿಗೆ ಹೋಗುತ್ತಿ ದ್ದರು. ಆಗಲೇ ಕತ್ತಲಾಗಿತ್ತು , ಯೇಸು ಅವರ ಬಳಿಗೆ ಬಂದಿರಲಿಲ್ಲ.
ಅವರು ಆತನನ್ನು ಸಮು ದ್ರದ ಆಚೇಕಡೆಯಲ್ಲಿ ಕಂಡು ಆತನಿಗೆ--ರಬ್ಬಿಯೇ, ನೀನು ಇಲ್ಲಿಗೆ ಯಾವಾಗ ಬಂದಿ ಅಂದರು.