ಮತ್ತು ಆತನು ಅವರಿಗೆ--ಯಾಕೆ ನೀವು ಇಷ್ಟೊಂದು ಭಯಭರಿತರಾಗಿದ್ದೀರಿ? ನಿಮಗೆ ನಂಬಿಕೆ ಇಲ್ಲದಿರುವದು ಹೇಗೆ ಅಂದನು.ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು.
Cross references
ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ಜಜ್ಜಿದ ದಂಟನ್ನು ಮುರಿದುಹಾಕದೆ, ಕಳೆಗುಂದಿದ ದೀಪ ವನ್ನು ನಂದಿಸದೆ, ಸತ್ಯದಿಂದ ನ್ಯಾಯವನ್ನು ಹೊರ ತರುತ್ತಾನೆ.
ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
ಆದದರಿಂದ ಈ ಹೊತ್ತು ಇದ್ದು ನಾಳೆ ಒಲೆಗೆ ಹಾಕಲ್ಪಡುವ ಹೊಲದ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಓ ಅಲ್ಪ ವಿಶ್ವಾಸಿಗಳೇ, ಆತನು ಇನ್ನೂ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸುವನಲ್ಲವೇ?
ಆಗ ಆತನು ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ಯಾಕೆ ಭಯಪಡುತ್ತೀರಿ ಎಂದು ಹೇಳಿ ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು. ಆಗ ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
ತಕ್ಷಣವೇ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು--ಓ ಅಲ್ಪ ವಿಶ್ವಾಸಿಯೇ, ನೀನು ಯಾಕೆ ಸಂದೇಹಪಟ್ಟೆ ಎಂದು ಅವನಿಗೆ ಹೇಳಿದನು.
ಯೇಸು ಅದನ್ನು ತಿಳುಕೊಂಡವನಾಗಿ ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ರೊಟ್ಟಿಯನ್ನು ತಕ್ಕೊಂಡು ಬರಲಿಲ್ಲವೆಂದು ನಿಮ್ಮಲ್ಲಿ ಯಾಕೆ ಅಂದುಕೊಳ್ಳುತ್ತೀರಿ?
ಆಗ ಆತನು ಅವರಿಗೆ--ನಿಮ್ಮ ನಂಬಿಕೆ ಎಲ್ಲಿ ಅಂದನು. ಆಗ ಅವರು ಹೆದರಿದವರಾಗಿ ಆಶ್ಚರ್ಯದಿಂದ ಒಬ್ಬರಿಗೊಬ್ಬರು-- ಈತನು ಎಂಥಾ ಮನುಷ್ಯನು? ಯಾಕಂದರೆ ಈತನು ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವುಗಳು ಆತನಿಗೆ ವಿಧೇಯವಾಗು ತ್ತವಲ್ಲಾ ಎಂದು ಮಾತನಾಡಿಕೊಂಡರು.
ಹೀಗೆ ಅವರು ಹುಟ್ಟು ಹಾಕುತ್ತಾ ಒಂದು ಹರದಾರಿಯಷ್ಟು ದೂರ ಹೋದ ಮೇಲೆ ಯೇಸು ಸಮುದ್ರದ ಮೇಲೆ ನಡೆದು ತಮ್ಮ ದೋಣಿಯ ಕಡೆಗೆ ಸವಿಾಪಿಸುತ್ತಿರು ವದನ್ನು ಅವರು ಕಂಡು ಭಯಪಟ್ಟರು.