ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು.
Cross references
ಸಮುವೇಲನು ಕರ್ತನಿಗೆ ಮೊರೆ ಇಟ್ಟದ್ದರಿಂದ ಆ ದಿವಸದಲ್ಲೇ ಕರ್ತನು ಗುಡುಗನ್ನೂ ಮಳೆಯನ್ನೂ ಕಳುಹಿಸಿದನು. ಆಗ ಜನರೆಲ್ಲರು ಕರ್ತನಿಗೂ ಸಮು ವೇಲನಿಗೂ ಬಹಳವಾಗಿ ಭಯಪಟ್ಟರು.
ಆದರೆ ನೀವು ಕರ್ತನಿಗೆ ಭಯ ಪಟ್ಟು ನಿಮ್ಮ ಪೂರ್ಣ ಹೃದಯದಿಂದ ಸತ್ಯದಲ್ಲಿ ಆತ ನನ್ನು ಸೇವಿಸಿರಿ. ಆತನು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದನೆಂದು ಆಲೋ ಚಿಸಿರಿ.ಆದರೆ ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ ನೀವೂ ನಿಮ್ಮ ಅರಸನೂ ನಾಶವಾಗುವಿರಿ ಅಂದನು.
ಇಲ್ಲಿಯ ವರೆಗೆ ಬಂದು ಮುಂದುವರಿಯ ಕೂಡದು; ಇಲ್ಲಿ ನಿನ್ನ ತೆರೆಗಳ ಅಹಂಕಾರ ನಿಲ್ಲಲಿ ಅಂದೆನು.
ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
ನಿನ್ನ ದೇಶ ಯಾವದು, ನೀನು ಯಾವ ಜನಾಂಗದವನು, ನಮಗೆ ತಿಳಿಸು ಅಂದರು. ಅವನು ಅವರಿಗೆ--ನಾನು ಇಬ್ರಿಯನು; ಸಮುದ್ರವನ್ನೂ ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರ ಲೋಕದ ದೇವರಾದ ಕರ್ತನಿಗೆ ಭಯಪಡುವವ ನಾಗಿದ್ದೇನೆಂದು ಹೇಳಿದನು.
ಆಗ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಆಗ ಸಮುದ್ರವು ತನ್ನ ಉಗ್ರವನ್ನು ನಿಲ್ಲಿಸಿ ಬಿಟ್ಟಿತು.
ನನ್ನ ಜೀವದ ಮತ್ತು ಸಮಾಧಾನದ ನನ್ನ ಒಡಂಬಡಿಕೆಯು ಅವನ ಸಂಗಡ ಇತ್ತು; ಅವುಗಳನ್ನು ಅವನಿಗೆ ಕೊಟ್ಟೆನು; ಅವನು ನನಗೆ ಭಯಪಟ್ಟು ನನ್ನ ಹೆಸರಿಗೆ ಅಂಜಿ ಕೊಂಡನು.
ಆದರೆ ಅವರು ಆಶ್ಚರ್ಯದಿಂದ--ಈತನು ಎಂಥಾ ಮನುಷ್ಯ ನಾಗಿರಬಹುದು! ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ ಅಂದರು.
ಅವರು ದೋಣಿಯೊಳಗೆ ಬಂದಾಗ ಗಾಳಿನಿಂತು ಹೋಯಿತು.
ಆದರೆ ಆ ಸ್ತ್ರೀಯು ತನ್ನಲ್ಲಿ ಆದದ್ದನ್ನು ತಿಳುಕೊಂಡು ಭಯದಿಂದ ನಡುಗುತ್ತಾ ಬಂದು ಆತನ ಮುಂದೆ ಅಡ್ಡಬಿದ್ದು ಸತ್ಯವನ್ನೆಲ್ಲಾ ಆತನಿಗೆ ತಿಳಿಸಿದಳು.
ಜನರು ಅತ್ಯಂತಾಶ್ಚರ್ಯಪಟ್ಟು-- ಆತನು ಎಲ್ಲವುಗಳನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡಿದ್ದಾನೆ ಎಂದು ಅಂದುಕೊಂಡರು.
ಆಗ ಅವರೆ ಲ್ಲರೂ ಬೆರಗಾಗಿ--ಇದೆಂಥ ಮಾತಾಗಿದೆ! ಈತನು ಅಧಿಕಾರದಿಂದಲೂ ಬಲದಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆ ಕೊಡಲು ಅವು ಹೊರಗೆ ಬರುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.
ಆಗ ಆತನು ಅವರಿಗೆ--ನಿಮ್ಮ ನಂಬಿಕೆ ಎಲ್ಲಿ ಅಂದನು. ಆಗ ಅವರು ಹೆದರಿದವರಾಗಿ ಆಶ್ಚರ್ಯದಿಂದ ಒಬ್ಬರಿಗೊಬ್ಬರು-- ಈತನು ಎಂಥಾ ಮನುಷ್ಯನು? ಯಾಕಂದರೆ ಈತನು ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವುಗಳು ಆತನಿಗೆ ವಿಧೇಯವಾಗು ತ್ತವಲ್ಲಾ ಎಂದು ಮಾತನಾಡಿಕೊಂಡರು.
ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ.ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.