ಅವರು ಯೇಸುವಿನ ಬಳಿಗೆ ಬಂದು ಆ ದೆವ್ವಗಳ ದಂಡು ಹಿಡಿದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಚಿತ್ತದಿಂದ ಕೂತು ಕೊಂಡಿರುವದನ್ನು ನೋಡಿ ಭಯಪಟ್ಟರು.
Cross references
ತಮ್ಮಲ್ಲಿ ದೊಡ್ಡ ಸಂಹಾರವಾಗಿ ಜನರನ್ನು ಕರ್ತನು ಸಾಯಿಸಿದ್ದರಿಂದ ಅವರು ದುಃಖಪಟ್ಟು--ಈ ಪರಿಶುದ್ಧ ದೇವರಾದ ಕರ್ತನ ಮುಂದೆ ನಿಲ್ಲತಕ್ಕವನಾರು? ನಮ್ಮ ಬಳಿಯಿಂದ ಆತನು ಹೋಗತಕ್ಕ ಸ್ಥಳ ಯಾವದು ಎಂದು ಹೇಳಿದರು.ಅವರು ಕಿರ್ಯತ್ಯಾರೀಮಿನ ನಿವಾಸಿಗಳಿಗೆ ದೂತ ರನ್ನು ಕಳುಹಿಸಿ--ಫಿಲಿಷ್ಟಿಯರು ಕರ್ತನ ಮಂಜೂಷ ವನ್ನು ತಿರಿಗಿ ಕಳುಹಿಸಿದ್ದಾರೆ; ನೀವು ಇಳಿದು ಬಂದು ಅದನ್ನು ನಿಮ್ಮ ಬಳಿಗೆ ತಕ್ಕೊಂಡು ಹೋಗಿರಿ ಎಂದು ಹೇಳಿದರು.
ಕರ್ತನು ಹೇಳಿದ ಪ್ರಕಾರ ಸಮುವೇಲನು ಮಾಡಿ ಬೇತ್ಲೆಹೇಮಿಗೆ ಬಂದನು. ಆಗ ಊರಿನ ಹಿರಿಯರು ಅವನ ಬರುವಿಕೆಯನ್ನು ಕಂಡು ನಡುಗಿ ಅವನಿಗೆ--ಸಮಾಧಾನವೋ ಅಂದರು.
ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ದೇವರ ಮಂಜೂಷ ವನ್ನು ನನ್ನ ಮನೆಗೆ ತರಿಸುವದು ಹೇಗೆ ಅಂದನು.
ನೀವು ಮೊದಲಿನ ಹಾಗೆ ಮಾಡದೆ ಇದದ್ದರಿಂದ ಕರ್ತನಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದನು. ನ್ಯಾಯದ ಪ್ರಕಾರ ನಾವು ಆತನನ್ನು ಹುಡುಕಲಿಲ್ಲ ಅಂದನು.
ಆತನ ಘನತೆಯು ನಿಮ್ಮನ್ನು ಹೆದರಿಸು ವದಿಲ್ಲವೋ? ಆತನ ಭೀತಿಯು ನಿಮ್ಮ ಮೇಲೆ ಬೀಳುವ ದಿಲ್ಲವೋ?
ಅಲ್ಲಿ ಅವರು ಭಯಭ್ರಾಂತ ರಾದರು; ಯಾಕಂದರೆ ದೇವರು ನೀತಿವಂತರ ಸಂತತಿ ಯಲ್ಲಿ ಇದ್ದಾನೆ.
ಶೂರನ ಕೈಯೊಳಗಿಂದ ಕೊಳ್ಳೆಯನ್ನು ತೆಗೆದು ಕೊಳ್ಳಬಹುದೋ? ಇಲ್ಲವೆ ನ್ಯಾಯವಾಗಿ ಸೆರೆಯವ ರನ್ನು ಬಿಡಿಸಬಹುದೋ? 25ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.
ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
ಮತ್ತು ದೆವ್ವವು ಹೊರಗೆ ಹಾಕಲ್ಪಟ್ಟ ಮೇಲೆ ಮೂಕನು ಮಾತಾಡಿದನು; ಆಗ ಜನಸಮೂಹಗಳವರು ಬೆರ ಗಾಗಿ--ಇಂಥದ್ದು ಎಂದೂ ಇಸ್ರಾಯೇಲಿನಲ್ಲಿ ಕಂಡಿಲ್ಲ ಎಂದು ಹೇಳಿದರು.
ಇಲ್ಲವೆ ಯಾವನಾದರೂ ಮೊದಲು ಬಲವುಳ್ಳ ಮನುಷ್ಯನನ್ನು ಕಟ್ಟಿಹಾಕದ ಹೊರತು ಅವನ ಮನೆ ಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳು ವದಕ್ಕಾದೀತೇ? ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವದಕ್ಕಾಗುವದು.
ಯಾಕಂದರೆ ಅನೇಕ ಸಾರಿ ಅವನನ್ನು ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿ ಗಳನ್ನು ಕಿತ್ತುಹಾಕಿ ಬೇಡಿಗಳನ್ನು ಮುರಿದು ತುಂಡು ಮಾಡುತ್ತಿದ್ದದ್ದರಿಂದ ಯಾವ ಮನುಷ್ಯನೂ ಅವನನ್ನು ಹತೋಟಿಗೆ ತರಲಾರದೆ ಇದ್ದನು.
ಆತನು ಅವನಿಗೆ--ನಿನ್ನ ಹೇಸರೇನು ಎಂದು ಕೇಳಲು ಅವನು ಪ್ರತ್ಯುತ್ತರವಾಗಿ--ನನ್ನ ಹೆಸರು ಲೀಜೆನ್ (ದಂಡು); ಯಾಕಂದರೆ ನಾವು ಅನೇಕರಿದ್ದೇವೆ ಅಂದನು.
ಅದನ್ನು ನೋಡಿದವರು ದೆವ್ವ ಹಿಡಿದಿದ್ದವನಿಗೆ ಆದದ್ದನ್ನೂ ಹಂದಿಗಳ ವಿಷಯವಾಗಿಯೂ ಅವರಿಗೆ ಹೇಳಿದರು.
ಆತನು ದೋಣಿಯೊಳಗೆ ಬಂದಾಗ ಆ ದೆವ್ವ ಹಿಡಿದಿದ್ದವನು ತಾನು ಆತನ ಜೊತೆಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿಕೊಂಡನು.
ಆತನು ದಡಕ್ಕೆ ಸೇರಿದಾಗ ಬಹು ಕಾಲದಿಂದ ದೆವ್ವಗಳು ಹಿಡಿದು ಬಟ್ಟೆ ಧರಿಸಿಕೊಳ್ಳದೆಯೂ ಯಾವ ಮನೆಯಲ್ಲಿ ವಾಸಿ ಸದೆಯೂ ಸಮಾಧಿಗಳಲ್ಲಿ ಇದ್ದ ಒಬ್ಬ ಮನುಷ್ಯನು ಪಟ್ಟಣದೊಳಗಿಂದ ಹೊರಗೆ ಬಂದು ಅಲ್ಲಿ ಆತನನ್ನು ಸಂಧಿಸಿದನು.
ಆಗ ಜನರು ನಡೆದ ಸಂಗತಿ ಏನೆಂದು ನೋಡುವದಕ್ಕಾಗಿ ಹೊರಟು ಹೋಗಿ ಯೇಸುವಿನ ಬಳಿಗೆ ಬಂದು ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿ ಯುಳ್ಳವನಾಗಿ ಯೇಸುವಿನ ಪಾದಗಳ ಬಳಿಯಲ್ಲಿ ಕೂತಿರುವದನ್ನು ಕಂಡು ಭಯಪಟ್ಟರು.
ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು. ಆಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕೂತು ಆತನ ವಾಕ್ಯವನ್ನು ಕೇಳುತ್ತಿದ್ದಳು.
ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು.
ದೇವರು ನಮಗೆ ಕೊಟ್ಟಿರುವ ಆತ್ಮವು ಬಲ ಪ್ರೀತಿ ಸ್ವಸ್ಥಬುದ್ಧಿಯ ಆತ್ಮವೇ ಹೊರತು ಭಯದ ಆತ್ಮವಲ್ಲ.