Home Bibles ಮಾರ್ಕ 5:22 · ಕನ್ನಡ ಬೈಬಲ್
ಮಾರ್ಕ 5:22 · ಕನ್ನಡ ಬೈಬಲ್

ಆಗ ಇಗೋ, ಸಭಾಮಂದಿರದ ಅಧಿಕಾರಿ ಗಳಲ್ಲಿ ಯಾಯಿರನೆಂದು ಹೆಸರಿದ್ದ ಒಬ್ಬನು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು--

Cross references

ಮತ್ತಾಯ 2:11

ಅವರು ಮನೆಯೊಳಕ್ಕೆ ಬಂದಾಗ ಆ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು; ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು.

ಮತ್ತಾಯ 9:18

ಆತನು ಈ ವಿಷಯಗಳನ್ನು ಅವರೊಂದಿಗೆ ಮಾತನಾಡುತ್ತಿದ್ದಾಗ ಇಗೋ, ಒಬ್ಬ ಅಧಿಕಾರಿಯು ಬಂದು ಆತನನ್ನು ಆರಾಧಿಸಿ--ನನ್ನ ಮಗಳು ಇದೀಗಲೇ ಸತ್ತು ಹೋಗಿರುವಳು; ಆದರೆ ನೀನು ಬಂದು ಆಕೆಯ ಮೇಲೆ ನಿನ್ನ ಕೈಯನ್ನಿಡು; ಆಗ ಅವಳು ಬದುಕುವಳು ಎಂದು ಹೇಳಿದನು.

ಮಾರ್ಕ 5:33

ಆದರೆ ಆ ಸ್ತ್ರೀಯು ತನ್ನಲ್ಲಿ ಆದದ್ದನ್ನು ತಿಳುಕೊಂಡು ಭಯದಿಂದ ನಡುಗುತ್ತಾ ಬಂದು ಆತನ ಮುಂದೆ ಅಡ್ಡಬಿದ್ದು ಸತ್ಯವನ್ನೆಲ್ಲಾ ಆತನಿಗೆ ತಿಳಿಸಿದಳು.

ಮಾರ್ಕ 5:35

ಆತನು ಇನ್ನೂ ಮಾತನಾಡುತ್ತಿರುವಾಗ ಸಭಾ ಮಂದಿರದ ಅಧಿಕಾರಿಯ ಮನೆಯಿಂದ ಕೆಲವರು ಅಲ್ಲಿಗೆ ಬಂದು--ನಿನ್ನ ಮಗಳು ಸತ್ತಿದ್ದಾಳೆ; ಬೋಧಕ ನಿಗೆ ಇನ್ನು ನೀನು ತೊಂದರೆಪಡಿಸುವದು ಯಾಕೆ? ಅಂದರು.

ಮಾರ್ಕ 5:38

ಆತನು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದು ಗೊಂದಲವನ್ನೂ ಬಹಳವಾಗಿ ಗೋಳಾಡುತ್ತಾ ಅಳುತ್ತಿರುವವರನ್ನೂ ಕಂಡನು.

ಲೂಕ 5:8

ಸೀಮೋನ್‌ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು.

ಲೂಕ 8:28

ಅವನು ಯೇಸುವನ್ನು ನೋಡಿದಾಗ ಆತನ ಮುಂದೆ ಬಿದ್ದು--ಯೇಸುವೇ, ಮಹೋನ್ನತ ನಾದ ದೇವರಕುಮಾರನೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಸಂಕಟಪಡಿಸಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.

ಲೂಕ 8:41

ಆಗ ಇಗೋ, ಸಭಾಮಂದಿರದ ಅಧಿಕಾರಿಯಾಗಿದ್ದ ಯಾಯಾರನೆಂಬ ಹೆಸರಿನ ಮನುಷ್ಯನು ಬಂದು ಯೇಸುವಿನ ಪಾದಗಳ ಮುಂದೆ ಬಿದ್ದು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು.

ಲೂಕ 13:14

ಯೇಸು ಸಬ್ಬತ್‌ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್‌ ದಿನದಲ್ಲಿ ಬೇಡ ಅಂದನು.

ಅಪೋಸ್ತಲರ ಕೃತ್ಯಗಳು 10:25

ಪೇತ್ರನು ಒಳಗೆ ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕರಿಸಿದನು.

ಅಪೋಸ್ತಲರ ಕೃತ್ಯಗಳು 13:15

ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.

ಅಪೋಸ್ತಲರ ಕೃತ್ಯಗಳು 18:8

ಸಭಾಮಂದಿರದ ಮುಖ್ಯಾಧಿಕಾರಿಯಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಕೊರಿಂಥ ದಲ್ಲಿ ಅನೇಕರು ಕೇಳಿ ನಂಬಿ ಬಾಸ್ತಿಸ್ಮ ಮಾಡಿಸಿಕೊಂಡರು.

ಅಪೋಸ್ತಲರ ಕೃತ್ಯಗಳು 18:17

ಆಗ ಗ್ರೀಕರೆಲ್ಲರೂ ಸಭಾಮಂದಿರದ ಮುಖ್ಯ ಅಧಿಕಾರಿಯಾಗಿದ್ದ ಸೋಸ್ಥೆನ ನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆ ಹೊಡೆದರು. ಗಲ್ಲಿಯೋನನಾದರೋ ಅವುಗಳಲ್ಲಿ ಒಂದಕ್ಕಾದರೂ ಲಕ್ಷ್ಯಕೊಡಲಿಲ್ಲ.

ಪ್ರಕಟನೆ 22:8

ಯೋಹಾನನೆಂಬ ನಾನೇ ಈ ಸಂಗತಿಗಳನ್ನು ಕೇಳಿ ಕಂಡವನು. ನಾನು ಕೇಳಿ ಕಂಡಾಗ ಈ ವಿಷಯಗಳನು ನನಗೆ ತೋರಿಸಿದ ದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.

Interlinear

Choose Theme