ಆಗ ಇಗೋ, ಸಭಾಮಂದಿರದ ಅಧಿಕಾರಿ ಗಳಲ್ಲಿ ಯಾಯಿರನೆಂದು ಹೆಸರಿದ್ದ ಒಬ್ಬನು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು--
Cross references
ಅವರು ಮನೆಯೊಳಕ್ಕೆ ಬಂದಾಗ ಆ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು; ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು.
ಆತನು ಈ ವಿಷಯಗಳನ್ನು ಅವರೊಂದಿಗೆ ಮಾತನಾಡುತ್ತಿದ್ದಾಗ ಇಗೋ, ಒಬ್ಬ ಅಧಿಕಾರಿಯು ಬಂದು ಆತನನ್ನು ಆರಾಧಿಸಿ--ನನ್ನ ಮಗಳು ಇದೀಗಲೇ ಸತ್ತು ಹೋಗಿರುವಳು; ಆದರೆ ನೀನು ಬಂದು ಆಕೆಯ ಮೇಲೆ ನಿನ್ನ ಕೈಯನ್ನಿಡು; ಆಗ ಅವಳು ಬದುಕುವಳು ಎಂದು ಹೇಳಿದನು.
ಆದರೆ ಆ ಸ್ತ್ರೀಯು ತನ್ನಲ್ಲಿ ಆದದ್ದನ್ನು ತಿಳುಕೊಂಡು ಭಯದಿಂದ ನಡುಗುತ್ತಾ ಬಂದು ಆತನ ಮುಂದೆ ಅಡ್ಡಬಿದ್ದು ಸತ್ಯವನ್ನೆಲ್ಲಾ ಆತನಿಗೆ ತಿಳಿಸಿದಳು.
ಆತನು ಇನ್ನೂ ಮಾತನಾಡುತ್ತಿರುವಾಗ ಸಭಾ ಮಂದಿರದ ಅಧಿಕಾರಿಯ ಮನೆಯಿಂದ ಕೆಲವರು ಅಲ್ಲಿಗೆ ಬಂದು--ನಿನ್ನ ಮಗಳು ಸತ್ತಿದ್ದಾಳೆ; ಬೋಧಕ ನಿಗೆ ಇನ್ನು ನೀನು ತೊಂದರೆಪಡಿಸುವದು ಯಾಕೆ? ಅಂದರು.
ಆತನು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದು ಗೊಂದಲವನ್ನೂ ಬಹಳವಾಗಿ ಗೋಳಾಡುತ್ತಾ ಅಳುತ್ತಿರುವವರನ್ನೂ ಕಂಡನು.
ಸೀಮೋನ್ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು.
ಅವನು ಯೇಸುವನ್ನು ನೋಡಿದಾಗ ಆತನ ಮುಂದೆ ಬಿದ್ದು--ಯೇಸುವೇ, ಮಹೋನ್ನತ ನಾದ ದೇವರಕುಮಾರನೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಸಂಕಟಪಡಿಸಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.
ಆಗ ಇಗೋ, ಸಭಾಮಂದಿರದ ಅಧಿಕಾರಿಯಾಗಿದ್ದ ಯಾಯಾರನೆಂಬ ಹೆಸರಿನ ಮನುಷ್ಯನು ಬಂದು ಯೇಸುವಿನ ಪಾದಗಳ ಮುಂದೆ ಬಿದ್ದು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು.
ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್ ದಿನದಲ್ಲಿ ಬೇಡ ಅಂದನು.
ಪೇತ್ರನು ಒಳಗೆ ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕರಿಸಿದನು.
ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.
ಸಭಾಮಂದಿರದ ಮುಖ್ಯಾಧಿಕಾರಿಯಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಕೊರಿಂಥ ದಲ್ಲಿ ಅನೇಕರು ಕೇಳಿ ನಂಬಿ ಬಾಸ್ತಿಸ್ಮ ಮಾಡಿಸಿಕೊಂಡರು.
ಆಗ ಗ್ರೀಕರೆಲ್ಲರೂ ಸಭಾಮಂದಿರದ ಮುಖ್ಯ ಅಧಿಕಾರಿಯಾಗಿದ್ದ ಸೋಸ್ಥೆನ ನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆ ಹೊಡೆದರು. ಗಲ್ಲಿಯೋನನಾದರೋ ಅವುಗಳಲ್ಲಿ ಒಂದಕ್ಕಾದರೂ ಲಕ್ಷ್ಯಕೊಡಲಿಲ್ಲ.
ಯೋಹಾನನೆಂಬ ನಾನೇ ಈ ಸಂಗತಿಗಳನ್ನು ಕೇಳಿ ಕಂಡವನು. ನಾನು ಕೇಳಿ ಕಂಡಾಗ ಈ ವಿಷಯಗಳನು ನನಗೆ ತೋರಿಸಿದ ದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.