ಹಾಗೆ ಹೇಳಿದ್ದನ್ನು ಯೇಸು ಕೇಳಿದ ಕೂಡಲೆ ಆ ಸಭಾಮಂದಿರದ ಅಧಿಕಾರಿಗೆ--ಭಯ ಪಡಬೇಡ, ನಂಬಿಕೆ ಮಾತ್ರ ಇರಲಿ ಅಂದನು.
Cross references
ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.
ಆತನು ಮನೆಯೊಳಕ್ಕೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು; ಆಗ ಯೇಸು ಅವರಿಗೆ--ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ ಎಂದು ಕೇಳಿದಾಗ ಅವರು ಆತನಿಗೆ--ಕರ್ತನೇ, ಹೌದು ಎಂದು ಅಂದರು.
ಯೇಸು ಅವರಿಗೆ--ನಿಮ್ಮ ಅಪನಂಬಿಕೆಯ ದೆಸೆಯಿಂದಲೇ; ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಸಾಸಿವೆ ಕಾಳಷ್ಟು ನಂಬಿಕೆ ನಿಮಗಿರುವದಾದರೆ ನೀವು ಈ ಬೆಟ್ಟಕ್ಕೆ--ಇಲ್ಲಿಂದ ಆ ಸ್ಥಳಕ್ಕೆ ಹೋಗು ಎಂದು ಹೇಳಿದರೆ ಅದು ಹೋಗುವದು; ಮತ್ತು ಯಾವದೂ ನಿಮಗೆ ಅಸಾಧ್ಯವಾಗಿರುವದಿಲ್ಲ.
ಆಗ ಆತನು ಆಕೆಗೆ--ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥ ಮಾಡಿತು; ಸಮಾಧಾನದಿಂದ ಹೋಗು; ನಿನ್ನ ಜಾಡ್ಯದಿಂದ ನೀನು ಸ್ವಸ್ಥಳಾಗು ಅಂದನು.
ಆಗ ಯೇಸು ಅವನಿಗೆ--ನೀನು ನಂಬುವದಾದರೆ ಆಗುವದು; ನಂಬುವವನಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
ಆದರೆ ಯೇಸು ಅದನ್ನು ಕೇಳಿ ಪ್ರತ್ಯುತ್ತರವಾಗಿ ಅವನಿಗೆ--ಭಯಪಡ ಬೇಡ, ನಂಬಿಕೆ ಮಾತ್ರ ಇರಲಿ; ಅವಳು ಸ್ವಸ್ಥಳಾಗುವಳು ಎಂದು ಹೇಳಿದನು.
ಯೇಸು ಅವನಿಗೆ--ನೀವು ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನೋಡದ ಹೊರತು ನಂಬು ವದೇ ಇಲ್ಲ ಅಂದನು.
ಯೇಸು ಆಕೆಗೆ--ನೀನು ನಂಬುವದಾದರೆ ದೇವರ ಮಹಿಮೆಯನ್ನು ನೋಡುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
ಅವನು ತಾನು ಅನೇಕ ಜನಾಂಗಗಳಿಗೆ ತಂದೆಯಾಗಿ ರುವನೆಂಬ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ--ನಿನ್ನ ಸಂತಾನವು ಹೀಗಾಗುವದು ಎಂದು ಹೇಳಲ್ಪಟ್ಟಂತೆ ನಿರೀಕ್ಷಿಸಿ ನಂಬಿದನು.