ಸಬ್ಬತ್ ದಿನ ಬಂದಾಗ ಆತನು ಸಭಾಮಂದಿರದಲ್ಲಿ ಬೋಧಿಸುವದಕ್ಕೆ ಪ್ರಾರಂಭಿ ಸಿದನು; ಇದನ್ನು ಅನೇಕರು ಕೇಳುತ್ತಾ ಆಶ್ಚರ್ಯ ಪಟ್ಟು--ಇವುಗಳು ಈತನಿಗೆ ಎಲ್ಲಿಂದ ಬಂದಿದ್ದಾವು? ಮತ್ತು ಈತನ ಕೈಗಳಿಂದ ಇಂಥ ಮಹತ್ಕಾರ್ಯಗಳು ಸಹ ಆಗುವಂತೆ ಈತನಿಗೆ ಕೊಡಲ್ಪಟ್ಟ ಜ್ಞಾನವು ಎಂಥದ್ದು?
Cross references
ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.
ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ತರುವಾಯ ಜನರು ಆತನ ಬೋಧನೆಗೆ ಆಶ್ಚರ್ಯ ಪಟ್ಟರು.ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
ಆಗ ಅವರು ಕಪೆರ್ನೌಮಿಗೆ ಹೋದರು; ಕೂಡಲೆ ಆತನು ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಗೆ ಪ್ರವೇಶಿಸಿ ಬೋಧಿಸಿದನು.
ಮತ್ತು ಆತನು ಗಲಿಲಾಯದಲ್ಲೆಲ್ಲಾ ಅವರ ಸಭಾಮಂದಿರಗಳಲ್ಲಿ ಸಾರಿ ದೆವ್ವಗಳನ್ನು ಬಿಡಿಸಿದನು.
ಆತನು ಎಲ್ಲರಿಂದ ಮಹಿಮೆಯನ್ನು ಹೊಂದುತ್ತಾ ಅವರ ಸಭಾಮಂದಿರಗಳಲ್ಲಿ ಬೋಧಿಸಿದನು.
ಆತನು ಗಲಿಲಾಯ ಪಟ್ಟಣವಾದ ಕಪೆ ರ್ನೌಮಿಗೆ ಬಂದು ಸಬ್ಬತ್ ದಿನಗಳಲ್ಲಿ ಅವರಿಗೆ ಬೋಧಿಸುತ್ತಿದ್ದನು.
ಇವನು ಯೋಸೇಫನ ಮಗನಾದ ಯೇಸು ಅಲ್ಲವೇ? ಇವನ ತಂದೆ ತಾಯಿ ಗಳನ್ನು ನಾವು ಬಲ್ಲೆವಲ್ಲವೇ? ಹಾಗಾದರೆ--ನಾನು ಪರಲೋಕದಿಂದ ಇಳಿದು ಬಂದೆನು ಎಂದು ಇವನು ಹೇಳುವದು ಹೇಗೆ ಅಂದರು.
ಯೆಹೂ ದ್ಯರು ಆಶ್ಚರ್ಯಪಟ್ಟು--ಏನನ್ನೂ ಕಲಿಯದಿರುವ ಈ ಮನುಷ್ಯನಿಗೆ ಇಂಥ ಜ್ಞಾನವು ಬಂದಿರುವದು ಹೇಗೆ ಅಂದರು.
ಅವರು ಪೇತ್ರ ಯೋಹಾನರ ಧೈರ್ಯವನ್ನು ನೋಡಿ ಇವರು ವಿದ್ಯೆಯಿಲ್ಲದವರೂ ತಿಳುವಳಿಕೆ ಯಿಲ್ಲದವರೂ ಎಂದು ಗ್ರಹಿಸಿ ಆಶ್ಚರ್ಯಪಟ್ಟು ಅವರು ಯೇಸುವಿನೊಂದಿಗೆ ಇದ್ದವರೆಂದು ತಿಳಿದುಕೊಂಡರು.