ಹೀಗಿರಲಾಗಿ ಅನುಕೂಲವಾದ ಒಂದು ದಿನವು ಅಂದರೆ ಹೆರೋದನ ಹುಟ್ಟಿದ ದಿನದಲ್ಲಿ ಅವನು ತನ್ನ ಪ್ರಭುಗಳಿಗೂ ಸೈನ್ಯಾಧಿಪತಿಗಳಿಗೂ ಗಲಿಲಾಯದ ಪ್ರಮುಖರಿಗೂ ಔತಣವನ್ನು ಮಾಡಿಸಿದನು;
Cross references
ತಂದೆಯು ಯಾಕೋಬನಿಗೆ ಕೊಟ್ಟ ಆಶೀರ್ವಾದ ಕ್ಕೋಸ್ಕರ ಏಸಾವನು ಅವನನ್ನು ಹಗೆಮಾಡಿ--ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸವಿಾಪ ವಾಗಿವೆ, ತರುವಾಯ ನಾನು ನನ್ನ ಸಹೋದರ ನಾದ ಯಾಕೋಬನನ್ನು ಕೊಲ್ಲುವೆನು ಎಂದು ಹೃದಯದಲ್ಲಿ ಅಂದುಕೊಂಡನು.
ಮೂರನೆಯ ದಿನದಲ್ಲಿ ಫರೋಹನ ಜನನದ ದಿನವಾಗಿದ್ದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯ ಪಾನದಾಯಕನನ್ನೂ ಮುಖ್ಯ ರೊಟ್ಟಿಗಾರನನ್ನೂ ತನ್ನ ಸೇವಕರ ಮುಂದೆ ನಿಲ್ಲಿಸಿದನು.
ಎರಡು ವರುಷ ಪೂರ್ಣಮುಗಿದ ತರುವಾಯ ಏನಾಯಿತಂದರೆ, ಅಬ್ಷಾಲೋಮನಿಗೆ ಎಫ್ರಾಯಾಮ್ ಬಳಿಯಲ್ಲಿರುವ ಬಾಳ್ಹಾಚೋರಿನಲ್ಲಿ ಕುರಿಗಳ ಉಣ್ಣೆ ಕತ್ತರಿಸುವವರಿದ್ದರು. ಆದದರಿಂದ ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಔತಣಕ್ಕೆ ಕರೆದನು.
ತನ್ನ ಆಳಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಸಮಸ್ತ ಪ್ರಧಾನರಿಗೂ ಸೇವಕ ರಿಗೂ ಔತಣವನ್ನು ಮಾಡಿಸಿದನು. ಪಾರಸಿಯ, ಮೇದ್ಯರ ಬಲವಾದ ಸೈನ್ಯವೂ ಪ್ರಾಂತ್ಯಗಳ ಶ್ರೇಷ್ಠರೂ ಪ್ರಧಾನರೂ ಅವನ ಬಳಿಯಲ್ಲಿದ್ದರು.
ಆಗ ಅರಸನು ತನ್ನ ಸಮಸ್ತ ಪ್ರಧಾನರಿಗೂ ಸೇವಕರಿಗೂ ಎಸ್ತೇರಳ ಔತಣವೆಂದು ದೊಡ್ಡ ಔತಣವನ್ನು ಮಾಡಿಸಿ ಪ್ರಾಂತ್ಯ ಗಳಿಗೆ ಬಿಡುಗಡೆಯನ್ನು ಕೊಟ್ಟು ಅರಸನ ಸ್ಥಿತಿಗೆ ತಕ್ಕಂಥ ಬಹುಮಾನಗಳನ್ನು ಕೊಟ್ಟನು.
ಅರಸನಾದ ಅಹಷ್ವೇರೋಷನ ಹನ್ನೆರಡನೆ ವರುಷದಲ್ಲಿ ನೀಸಾನ್ ಎಂಬ ಮೊದಲನೇ ತಿಂಗಳಲ್ಲಿ ಹಾಮಾನನ ಮುಂದೆ ಪೂರ್ ಎಂಬ ಚೀಟನ್ನು ದಿನ ದಿನಕ್ಕೂ ತಿಂಗಳು ತಿಂಗಳಿಗೂ ಅಡಾರ್ ಎಂಬ ಹನ್ನೆರಡನೆ ತಿಂಗಳ ವರೆಗೆ ಹಾಕಿದರು.
ದುಷ್ಟನು ನೀತಿವಂತನಿಗಾಗಿ ಹೊಂಚುಹಾಕು ವನು, ಅವನ ಮೇಲೆ ತನ್ನ ಹಲ್ಲುಗಳನ್ನು ಕಡಿಯುತ್ತಾನೆ.
ದ್ರಾಕ್ಷಾರಸವನ್ನು ಕುಡಿ ಯುವದು ರಾಜರಿಗೆ ಯೋಗ್ಯವಲ್ಲ; ಓ ಲೆಮೂ ವೇಲನೇ, ಅದು ಅರಸರಿಗೆ ಬೇಡ; ಇಲ್ಲವೆ ಪ್ರಭುಗ ಳಿಗೆ ಕುಡಿಯುವದು ಹಿತವಲ್ಲ;
ಅರಸನಾದ ಬೆಲ್ಯಚ್ಚರನು ತನ್ನ ಪ್ರಭುಗಳಲ್ಲಿ ಸಾವಿರ ಮಂದಿಗೆ ದೊಡ್ಡ ಔತಣವನ್ನು ಮಾಡಿಸಿ, ಆ ಸಾವಿರ ಮಂದಿಯ ಮುಂದೆ ಅವನು ದ್ರಾಕ್ಷಾರಸವನ್ನು ಕುಡಿದನು.
ನಮ್ಮ ಅರಸನ ದಿನದಲ್ಲಿ ಪ್ರಧಾನರು ದ್ರಾಕ್ಷಾರಸದ ಬುದ್ದಲಿಗಳಿಂದ ಅಸ್ವಸ್ಥರಾ ಗುತ್ತಾರೆ, ಅವನು ಪರಿಹಾಸ್ಯಗಾರರ ಸಂಗಡ ತನ್ನ ಕೈಚಾಚುತ್ತಾನೆ.
ಕೈಸರನಾದ ತಿಬೇರಿಯನ ಆಳಿಕೆಯ ಕಾಲದ ಹದಿನೈದನೇ ವರುಷದಲ್ಲಿ ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾ ಯಕ್ಕೆ ಚತುರಾಧಿಪತಿಯೂ ಅವನ ಸಹೋದರನಾದ ಫಿಲಿಪ್ಪನು ಇತುರಾಯ ಮತ್ತು ತ್ರಕೋನೀತಿ ಸೀಮೆಗೆ ಚತುರಾಧಿಪತಿಯೂ ಲುಸನ್ಯನು ಅಬಿಲೇನೆಗೆ ಚತುರಾ ಧಿಪತಿಯೂ
ಯೋಹಾನನ ಸಹೋದರನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು.
ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.
ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.