ಆಗ ಆತನು ಐದು ರೊಟ್ಟಿ ಎರಡು ವಿಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಆ ರೊಟ್ಟಿಗಳನ್ನು ಮುರಿದು, ಅವರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಮತ್ತು ಎರಡು ವಿಾನುಗಳನ್ನು ಆತನು ಅವರೆಲ್ಲರಿಗೂ ಹಂಚಿದನು.
Cross references
ನೀನು ತಿಂದು ತೃಪ್ತಿ ಹೊಂದಿದಾಗ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಉತ್ತಮ ದೇಶದಲ್ಲಿ ಆತನನ್ನು ಸ್ತುತಿಸಬೇಕು.
ನೀವು ಪಟ್ಟಣದೊಳಗೆ ಪ್ರವೇಶಿಸುತ್ತಲೇ ತಿನ್ನುವದಕ್ಕೆ ಗುಡ್ಡದ ಮೇಲೆ ಹೋಗುವದಕ್ಕಿಂತ ಮುಂಚೆ ಅವನನ್ನು ಕಂಡುಕೊಳ್ಳುವಿರಿ. ಅವನು ಬರುವ ವರೆಗೂ ಜನರು ತಿನ್ನುವದಿಲ್ಲ. ಅವನು ಅರ್ಪಣೆಯನ್ನು ಆಶೀರ್ವದಿಸು ತ್ತಾನೆ; ತರುವಾಯ ಕರೆಯಲ್ಪಟ್ಟವರು ತಿನ್ನುತ್ತಾರೆ. ಈಗಲೇ ಹೋಗಿರಿ, ಈ ವೇಳೆಯಲ್ಲಿ ಅವನನ್ನು ಕಂಡು ಕೊಳ್ಳುವಿರಿ ಅಂದರು.
ಜನ ಸಮೂಹವು ಹುಲ್ಲಿನಮೇಲೆ ಕೂತುಕೊಳ್ಳಬೇಕೆಂದು ಆತನು ಅಪ್ಪಣೆಕೊಟ್ಟು ಆ ಐದು ರೊಟ್ಟಿ ಎರಡು ಮಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಮುರಿದು ಆ ರೊಟ್ಟಿಗಳನ್ನು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
ಆತನು ಆ ಏಳು ರೊಟ್ಟಿಗಳನ್ನು ಮತ್ತು ಮಾನುಗಳನ್ನು ತಕ್ಕೊಂಡು ಸ್ತೋತ್ರಮಾಡಿ ಅವುಗಳನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿ ಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ ಮುರಿದು ತನ್ನ ಶಿಷ್ಯರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.
ಮತ್ತು ಆತನು ಪರಲೋಕದ ಕಡೆಗೆ ನೋಡುತ್ತಾ ನಿಟ್ಟುಸಿರುಬಿಟ್ಟು ಅವನಿಗೆ--ಎಪ್ಫಥಾ ಅಂದನು. ಅಂದರೆ ತೆರೆಯಲ್ಪಡಲಿ ಎಂದರ್ಥ.
ಆಗ ಜನರು ನೆಲದ ಮೇಲೆ ಕೂತುಕೊಳ್ಳುವಂತೆ ಆತನು ಅಪ್ಪಣೆ ಕೊಟ್ಟು ಆ ಏಳು ರೊಟ್ಟಿಗಳನ್ನು ತಕ್ಕೊಂಡು ಸ್ತೋತ್ರ ಮಾಡಿ ಮುರಿದು ಜನರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಅವರು ಜನರಿಗೆ ಹಂಚಿದರು.
ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.
ತರುವಾಯ ಆತನು ಐದು ರೊಟ್ಟಿಗಳನ್ನೂ ಎರಡು ವಿಾನುಗಳನ್ನೂ ತಕ್ಕೊಂಡು ಪರಲೋಕದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ ಮುರಿದು ಜನಸಮೂಹಕ್ಕೆ ಹಂಚುವಂತೆ ಶಿಷ್ಯರಿಗೆ ಕೊಟ್ಟನು.
ಇದಾದ ಮೇಲೆ ಆತನು ಅವರೊಂದಿಗೆ ಊಟಕ್ಕೆ ಕೂತುಕೊಂಡಿರಲು ರೊಟ್ಟಿಯನ್ನು ತೆಗೆದು ಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟನು.
ತರುವಾಯ ಯೇಸು ರೊಟ್ಟಿ ಗಳನ್ನು ತೆಗೆದುಕೊಂಡು ಸ್ತೋತ್ರಮಾಡಿ ಶಿಷ್ಯರಿಗೆ ಹಂಚಿದನು; ಅವರು ಕುಳಿತುಕೊಂಡವರಿಗೆ ಹಂಚಿ ದರು; ಅದೇ ರೀತಿಯಲ್ಲಿ ವಿಾನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದರು.
(ಆದಾಗ್ಯೂ ಕರ್ತನು ಸ್ತೋತ್ರ ಮಾಡಿದ ನಂತರ ಅವರು ರೊಟ್ಟಿಯನ್ನು ತಿಂದ ಸ್ಥಳದ ಸವಿಾಪಕ್ಕೆ ತಿಬೇರಿಯದಿಂದ ಬೇರೆ ದೋಣಿಗಳು ಬಂದವು).
ಆಗ ಅವರು ಸತ್ತವನನ್ನು ಇಟ್ಟಿದ್ದ ಸ್ಥಳದಿಂದ ಕಲ್ಲನ್ನು ತೆಗೆದುಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ--ತಂದೆಯೇ, ನೀನು ನನ್ನ ಪ್ರಾರ್ಥನೆಯನ್ನು ಕೇಳಿದ್ದಕ್ಕೆ ನಾನು ನಿನ್ನನ್ನು ಕೊಂಡಾಡುತ್ತೇನೆ.
ಯೇಸು ಈ ಮಾತುಗಳನ್ನು ಹೇಳಿ ಪರಲೋಕದ ಕಡೆಗೆ ಕಣ್ಣುಗಳನ್ನೆತ್ತಿ-- ತಂದೆಯೇ, ಈಗ ಗಳಿಗೆ ಬಂದಿದೆ; ನಿನ್ನ ಮಗನನ್ನು ಮಹಿಮೆಪಡಿಸು; ಆಗ ನಿನ್ನ ಮಗನೂ ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.
ಅವನು ಹಾಗೆ ಹೇಳಿದ ತರುವಾಯ ರೊಟ್ಟಿಯನ್ನು ತೆಗೆದುಕೊಂಡು ಅವರೆಲ್ಲರ ಮುಂದೆ ದೇವರಿಗೆ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವದಕ್ಕೆ ಪ್ರಾರಂಭಿಸಿದನು.
ದಿನವನ್ನು ಗಣ್ಯ ಮಾಡುವವನು ಅದನ್ನು ಕರ್ತನಿಗಾಗಿ ಗಣ್ಯಮಾಡು ತ್ತಾನೆ; ದಿನವನ್ನು ಗಣ್ಯಮಾಡದವನು ಅದನು ಕರ್ತನಿಗಾಗಿ ಗಣ್ಯಮಾಡುವದಿಲ್ಲ; ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರಿಗೆ ಉಪಕಾರ ಸ್ತುತಿ ಹೇಳುತ್ತಾನೆ; ತಿನ್ನದಿರುವವನು ಕರ್ತನಿಗಾಗಿ ತಿನ್ನದೆ ದೇವರಿಗೆ ಸೆ
ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.
ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು.