ಹೊರಗಿನಿಂದ ಮನುಷ್ಯನೊಳಗೆ ಸೇರಿ ಅವನನ್ನು ಹೊಲೆಮಾಡು ವಂಥದ್ದು ಯಾವದೂ ಇಲ್ಲ. ಆದರೆ ಅವನೊಳಗಿಂದ ಹೊರಗೆ ಬರುವಂಥವುಗಳೇ ಮನುಷ್ಯನನ್ನು ಹೊಲೆ ಮಾಡುವವುಗಳಾಗಿವೆ.
Cross references
ಹೊಟ್ಟೆಯಿಂದ ಹರಿದಾಡುವ ಯಾವದನ್ನೂ ನಾಲ್ಕು ಕಾಲಿನ ಮೇಲೆ ನಡೆದಾಡುವ ಯಾವದನ್ನೂ ಇಲ್ಲವೆ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳಲ್ಲಿ ಬಹಳ ಕಾಲುಗಳಿದ್ದ ಯಾವದನ್ನಾದರೂ ನೀವು ತಿನ್ನ ಬಾರದು; ಅವು ಅಶುದ್ಧವಾಗಿವೆ.
ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಜೀವಧಾರೆಗಳು ಅದರೊಳಗಿಂದ ಹೊರಡುವವು.
ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.
ಅದಕ್ಕೆ ಯೇಸು--ನೀವು ಸಹ ಇನ್ನೂ ಗ್ರಹಿಸದೆ ಇದ್ದೀರಾ?
ಆಗ ಆತನು ಅವರಿಗೆ-- ನೀವು ಸಹ ಗ್ರಹಿಕೆ ಇಲ್ಲದವರಾಗಿದ್ದೀರಾ? ಹೊರಗಿ ನಿಂದ ಮನುಷ್ಯನೊಳಗೆ ಸೇರುವಂಥದ್ದು ಯಾವದೂ ಅವನನ್ನು ಹೊಲೆಮಾಡಲಾರದು ಎಂದು ನೀವು ತಿಳಿದುಕೊಳ್ಳುವದಿಲ್ಲವೋ?
ಅದಕ್ಕೆ ಪೇತ್ರನು--ಕರ್ತನೇ, ಹಾಗಲ್ಲ, ನಾನೆಂದೂ ಹೊಲೆಯಾದ ಪದಾರ್ಥವನ್ನಾಗಲೀ ಅಶುದ್ಧ ಪದಾ ರ್ಥವನ್ನಾಗಲೀ ತಿಂದವನಲ್ಲ ಅಂದನು.
ಅವ ರಿಗೆ--ಯೆಹೂದ್ಯನಾಗಿರುವವನು ಅನ್ಯಜನಾಂಗದವ ರಲ್ಲಿ ಒಬ್ಬನ ಕೂಡ ಹೊಕ್ಕು ಬಳಿಕೆ ಮಾಡುವದಾಗಲೀ ಅವನ ಬಳಿಗೆ ಬರುವದಾಗಲೀ ನ್ಯಾಯವಲ್ಲವೆಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾ ದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರ ದೆಂದು ದೇವರು ನನಗೆ ತೋರಿ
ಆದರೆ ನಾನು--ಕರ್ತನೇ, ಹಾಗಲ್ಲ; ಹೊಲೆಯಾದ ದ್ದಾಗಲೀ ಅಶುದ್ಧವಾದದ್ದಾಗಲೀ ಯಾವದೂ ಯಾವ ಸಮಯದಲ್ಲೂ ನನ್ನ ಬಾಯೊಳಗೆ ಸೇರಲಿಲ್ಲ ಎಂದು ಹೇಳಿದೆನು;
ಆದರೆ ಅವರು ವಿಗ್ರಹಗಳ ಮಲಿನತೆಯನ್ನೂ ಜಾರತ್ವವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ರಕ್ತವನ್ನೂ ವಿಸ ರ್ಜಿಸಬೇಕೆಂದು ನಾವು ಅವರಿಗೆ ಬರೆಯುವೆವು.
ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
ಕಟುಕರ ಅಂಗಡಿಯಲ್ಲಿ ಮಾರುವದೇನಿದ್ದರೂ ಮನಸ್ಸಾಕ್ಷಿಯ ನಿಮಿತ್ತ ಯಾವ ಪ್ರಶ್ನೆಯನ್ನೂ ಕೇಳದೆ ತಿನ್ನಿರಿ.
ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.
ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲ ದವರಿಗೂ ಯಾವದೂ ಶುದ್ಧವಲ್ಲ; ಆದರೆ ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಕೂಡ ಮಲಿನವಾಗಿವೆ.ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.
ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.