Home Bibles ಮಾರ್ಕ 8:31 · ಕನ್ನಡ ಬೈಬಲ್
ಮಾರ್ಕ 8:31 · ಕನ್ನಡ ಬೈಬಲ್

ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.

Cross references

1 ಸಮುವೇಲ 8:7

ಆಗ ಕರ್ತನು ಸಮು ವೇಲನಿಗೆ--ಜನರು ನಿನಗೆ ಹೇಳಿದ್ದೆಲ್ಲಾದರಲ್ಲಿ ಅವರ ಮಾತು ಕೇಳು. ಯಾಕಂದರೆ ಅವರು ನಿನ್ನನ್ನು ತೊರೆ ದಿಲ್ಲ; ನಾನು ಅವರನ್ನು ಆಳದ ಹಾಗೆ ನನ್ನನ್ನು ತೊರೆದಿದ್ದಾರೆ.

1 ಸಮುವೇಲ 10:19

ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ಈ ದಿವಸದಲ್ಲಿ ತಿರಸ್ಕರಿಸಿ ಆತನಿಗೆ--ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು ಎಂದು ಹೇಳಿದಿರಿ. ಆದದ ರಿಂದ ಈಗ ಕರ್ತನ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ ನಿಮ್ಮ ಸಹಸ್ರಗಳ ಪ್ರಕಾರವಾ ಗಿಯೂ ಕಾಣಿಸಿಕೊಳ್ಳಿರಿ ಅಂದನು.

ಕೀರ್ತನೆಗಳು 118:22

ಮನೆ ಕಟ್ಟುವವರು ತಳ್ಳಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.

ಯೆಶಾಯ 53:3

ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.

ಹೊಶೇಯ 6:2

ಆತನು ಎರಡು ದಿನಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು; ಮೂರನೆಯ ದಿನದಲ್ಲಿ ಆತನೇ ನಮ್ಮನ್ನು ಎಬ್ಬಿಸುವನು; ನಾವು ಆತನ ದೃಷ್ಟಿಯಲ್ಲಿ ಜೀವಿಸುವೆವು.

ಯೋನ 1:17

ಆದರೆ ಕರ್ತನು ಯೋನನನ್ನು ನುಂಗುವ ಹಾಗೆ ದೊಡ್ಡ ವಿಾನನ್ನು ಸಿದ್ಧಮಾಡಿದ್ದನು; ಯೋನನು ಆ ವಿಾನಿನ ಹೊಟ್ಟೆಯಲ್ಲಿ ಮೂರು ಹಗಲು ಮೂರು ರಾತ್ರಿಯು ಇದ್ದನು.

ಮತ್ತಾಯ 12:40

ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.

ಮತ್ತಾಯ 16:21

ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.

ಮತ್ತಾಯ 17:22

ಅವರು ಗಲಿಲಾಯಲ್ಲಿ ಇನ್ನೂ ವಾಸವಾಗಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು.

ಮತ್ತಾಯ 20:17

ತರುವಾಯ ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ಹನ್ನೆರಡು ಮಂದಿ ಶಿಷ್ಯರನ್ನು ದಾರಿಯಲ್ಲಿ ವಿಂಗಡವಾಗಿ ಕರೆದು ಅವರಿಗೆ--

ಮತ್ತಾಯ 21:42

ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?

ಮಾರ್ಕ 9:31

ಯಾಕಂದರೆ ಆತನು ತನ್ನ ಶಿಷ್ಯರಿಗೆ ಬೋಧಿಸುತ್ತಾ-- ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಆತನು ಕೊಲ್ಲಲ್ಪಟ್ಟ ತರುವಾಯ ಮೂರನೆಯ ದಿನದಲ್ಲಿ ಏಳುವನು ಅಂದನು.

ಮಾರ್ಕ 10:33

ಇಗೋ, ನಾವು ಯೆರೂಸಲೇ ಮಿಗೆ ಹೋಗುತ್ತೇವೆ; ಮತ್ತು ಮನುಷ್ಯಕುಮಾರನು ಪ್ರಧಾನಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡು ವನು; ಅವರು ಆತನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳಿಗೆ ಒಪ್ಪಿಸುವರು.

ಮಾರ್ಕ 12:10

ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.

ಲೂಕ 9:22

ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.

ಲೂಕ 17:25

ಆದರೆ ಆತನು ಮೊದಲು ಅನೇಕ ಶ್ರಮೆಗಳನ್ನು ಅನುಭವಿಸಿ ಈ ಸಂತತಿಯವರಿಂದ ತಿರಸ್ಕರಿಸಲ್ಪಡುವದು ಅಗತ್ಯವಾ ಗಿದೆ.

ಲೂಕ 18:31

ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.

ಲೂಕ 24:6

ಆತನು ಇಲ್ಲಿಲ್ಲ, ಎದ್ದಿದ್ದಾನೆ; ಆತನು ಇನ್ನೂ ಗಲಿಲಾಯ ದಲ್ಲಿದ್ದಾಗಲೇ--

ಲೂಕ 24:26

ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ

ಲೂಕ 24:44

ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.

ಯೋಹಾನ 2:19

ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.

ಯೋಹಾನ 12:48

ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದಿರುವವನಿಗೆ ತೀರ್ಪು ಮಾಡುವಂಥದು ಒಂದು ಇದೆ; ಅದು ನಾನು ಹೇಳಿದ ಮಾತೇ; ಅದು ಕಡೇ ದಿನದಲ್ಲಿ ಅವನಿಗೆ ತೀರ್ಪು ಮಾಡುವದು.

ಅಪೋಸ್ತಲರ ಕೃತ್ಯಗಳು 3:13

ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.

ಅಪೋಸ್ತಲರ ಕೃತ್ಯಗಳು 7:35

ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು.

ಅಪೋಸ್ತಲರ ಕೃತ್ಯಗಳು 7:51

ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.

1 ಕೊರಿಂಥದವರಿಗೆ 15:4

ಹೂಣಲ್ಪಟ್ಟನು; ಬರಹದ ಪ್ರಕಾರವೇ ಆತನು ಮೂರನೆಯ ದಿನದಲ್ಲಿ ತಿರಿಗಿ ಎದ್ದುಬಂದನು.

Interlinear

Choose Theme