ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.
Cross references
ಆಗ ಕರ್ತನು ಸಮು ವೇಲನಿಗೆ--ಜನರು ನಿನಗೆ ಹೇಳಿದ್ದೆಲ್ಲಾದರಲ್ಲಿ ಅವರ ಮಾತು ಕೇಳು. ಯಾಕಂದರೆ ಅವರು ನಿನ್ನನ್ನು ತೊರೆ ದಿಲ್ಲ; ನಾನು ಅವರನ್ನು ಆಳದ ಹಾಗೆ ನನ್ನನ್ನು ತೊರೆದಿದ್ದಾರೆ.
ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ಈ ದಿವಸದಲ್ಲಿ ತಿರಸ್ಕರಿಸಿ ಆತನಿಗೆ--ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು ಎಂದು ಹೇಳಿದಿರಿ. ಆದದ ರಿಂದ ಈಗ ಕರ್ತನ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ ನಿಮ್ಮ ಸಹಸ್ರಗಳ ಪ್ರಕಾರವಾ ಗಿಯೂ ಕಾಣಿಸಿಕೊಳ್ಳಿರಿ ಅಂದನು.
ಮನೆ ಕಟ್ಟುವವರು ತಳ್ಳಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
ಆತನು ಎರಡು ದಿನಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು; ಮೂರನೆಯ ದಿನದಲ್ಲಿ ಆತನೇ ನಮ್ಮನ್ನು ಎಬ್ಬಿಸುವನು; ನಾವು ಆತನ ದೃಷ್ಟಿಯಲ್ಲಿ ಜೀವಿಸುವೆವು.
ಆದರೆ ಕರ್ತನು ಯೋನನನ್ನು ನುಂಗುವ ಹಾಗೆ ದೊಡ್ಡ ವಿಾನನ್ನು ಸಿದ್ಧಮಾಡಿದ್ದನು; ಯೋನನು ಆ ವಿಾನಿನ ಹೊಟ್ಟೆಯಲ್ಲಿ ಮೂರು ಹಗಲು ಮೂರು ರಾತ್ರಿಯು ಇದ್ದನು.
ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.
ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
ಅವರು ಗಲಿಲಾಯಲ್ಲಿ ಇನ್ನೂ ವಾಸವಾಗಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು.
ತರುವಾಯ ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ಹನ್ನೆರಡು ಮಂದಿ ಶಿಷ್ಯರನ್ನು ದಾರಿಯಲ್ಲಿ ವಿಂಗಡವಾಗಿ ಕರೆದು ಅವರಿಗೆ--
ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?
ಯಾಕಂದರೆ ಆತನು ತನ್ನ ಶಿಷ್ಯರಿಗೆ ಬೋಧಿಸುತ್ತಾ-- ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಆತನು ಕೊಲ್ಲಲ್ಪಟ್ಟ ತರುವಾಯ ಮೂರನೆಯ ದಿನದಲ್ಲಿ ಏಳುವನು ಅಂದನು.
ಇಗೋ, ನಾವು ಯೆರೂಸಲೇ ಮಿಗೆ ಹೋಗುತ್ತೇವೆ; ಮತ್ತು ಮನುಷ್ಯಕುಮಾರನು ಪ್ರಧಾನಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡು ವನು; ಅವರು ಆತನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳಿಗೆ ಒಪ್ಪಿಸುವರು.
ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.
ಆದರೆ ಆತನು ಮೊದಲು ಅನೇಕ ಶ್ರಮೆಗಳನ್ನು ಅನುಭವಿಸಿ ಈ ಸಂತತಿಯವರಿಂದ ತಿರಸ್ಕರಿಸಲ್ಪಡುವದು ಅಗತ್ಯವಾ ಗಿದೆ.
ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.
ಆತನು ಇಲ್ಲಿಲ್ಲ, ಎದ್ದಿದ್ದಾನೆ; ಆತನು ಇನ್ನೂ ಗಲಿಲಾಯ ದಲ್ಲಿದ್ದಾಗಲೇ--
ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ
ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.
ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದಿರುವವನಿಗೆ ತೀರ್ಪು ಮಾಡುವಂಥದು ಒಂದು ಇದೆ; ಅದು ನಾನು ಹೇಳಿದ ಮಾತೇ; ಅದು ಕಡೇ ದಿನದಲ್ಲಿ ಅವನಿಗೆ ತೀರ್ಪು ಮಾಡುವದು.
ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.
ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು.
ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
ಹೂಣಲ್ಪಟ್ಟನು; ಬರಹದ ಪ್ರಕಾರವೇ ಆತನು ಮೂರನೆಯ ದಿನದಲ್ಲಿ ತಿರಿಗಿ ಎದ್ದುಬಂದನು.