ಆದರೆ ಆತನು ತಿರುಗಿಕೊಂಡು ತನ್ನ ಶಿಷ್ಯರ ಕಡೆಗೆ ನೋಡಿ ಪೇತ್ರನನ್ನು ಗದರಿಸಿ--ಸೈತಾನನೇ ನನ್ನ ಹಿಂದೆ ಹೋಗು; ಯಾಕಂದರೆ ನೀನು ಯೋಚಿಸುವಂಥದ್ದು ದೇವರವುಗಳಲ್ಲ, ಆದರೆ ಮನುಷ್ಯರವುಗಳೇ ಎಂದು ಹೇಳಿದನು.
Cross references
ಸರ್ಪವು ಸ್ತ್ರೀಗೆ--ನೀವು ಖಂಡಿತವಾಗಿ ಸಾಯುವದಿಲ್ಲ;
ನಿನ್ನ ಹೃದಯ ದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ; ಹೇಗಾ ದರೂ ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.
ಆದರೆ ದಾವೀದನು--ಚೆರೂಯಳ ಮಕ್ಕಳೇ, ಈಹೊತ್ತು ನೀವು ನನಗೆ ಶತ್ರುಗಳಾಗಿರುವ ಹಾಗೆ ನಿಮ್ಮೊಂದಿಗೆ ನನಗೆ ಏನು? ಈಹೊತ್ತು ಇಸ್ರಾಯೇಲಿನಲ್ಲಿ ಯಾವನಾದರೂ ಕೊಲೆಯಾಗಬಾರದು; ಯಾಕಂದರೆ ಈಹೊತ್ತು ನಾನು ಇಸ್ರಾಯೇಲಿನ ಮೇಲೆ ಅರಸನಾಗಿದ್ದೇನೆಂದು ನಾನು ತಿಳಿಯುತ್ತೇನಲ್ಲಾ ಅಂದನು.
ಆದರೆ ಅವನು ಅವಳಿಗೆ--ಮೂರ್ಖ ಹೆಂಗಸರಲ್ಲಿ ಒಬ್ಬಳು ಮಾತನಾಡುವ ಪ್ರಕಾರ ನೀನೂ ಮಾತನಾಡುವಿಯಾ? ದೇವರ ಕೈಯಿಂದ ಒಳ್ಳೇದನ್ನು ಹೊಂದುತ್ತೇವಲ್ಲಾ? ಕೆಟ್ಟದ್ದನ್ನು ಹೊಂದುವದು ಬೇಡವೋ ಅಂದನು. ಇವೆಲ್ಲವುಗಳಲ್ಲಿ ಯೋಬನು ತನ್ನ ತುಟಿಗಳಿಂದ ಪಾಪಮಾಡಲಿಲ್ಲ.
ನೀತಿವಂತನು ನನ್ನನ್ನು ಹೊಡೆಯಲಿ; ಅದು ಕರುಣೆಯೇ; ಅವನು ನನ್ನನ್ನು ಗದರಿಸಲಿ; ಅದು ನನ್ನ ತಲೆಗೆ ಶ್ರೇಷ್ಠ ಎಣ್ಣೆಯೇ. ಅದನ್ನು ನನ್ನ ತಲೆ ಬೇಡವೆನ್ನದಿರಲಿ; ಆದರೆ ಇನ್ನೂ ಅವರ ಕೇಡುಗಳಲ್ಲಿ ನನ್ನ ಪ್ರಾರ್ಥನೆ ಇರುವದು.
ಪರಿಹಾಸ್ಯಮಾಡುವವನು ನಿನ್ನನ್ನು ಹಗೆಮಾಡದಂತೆ ಅವನನ್ನು ಗದರಿಸಬೇಡ. ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು.
ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
ಆದಕಾರಣ--ನಾವು ಏನು ಊಟಮಾಡಬೇಕು? ಇಲ್ಲವೆ ಏನು ಕುಡಿಯಬೇಕು? ಇಲ್ಲವೆ ಯಾವದನ್ನು ಧರಿಸಿಕೊಳ್ಳಬೇಕು ಎಂದು ಹೇಳುತ್ತಾ ಚಿಂತೆಮಾಡ ಬೇಡಿರಿ.
ಆದರೆ ಆತನು ಆಕೆಗೆ ಒಂದು ಮಾತೂ ಉತ್ತರ ಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು--ಆಕೆಯನ್ನು ಕಳುಹಿಸಿಬಿಡು, ಯಾಕಂದರೆ ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ ಎಂದು ಆತನನ್ನು ಬೇಡಿಕೊಂಡರು.
ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.
ತನ್ನ ಸುತ್ತಲೂ ಕೂತಿದ್ದವರನ್ನು ನೋಡಿ--ಇಗೋ, ನನ್ನ ತಾಯಿ ಮತ್ತು ನನ್ನ ಸಹೋದರರು!ಯಾಕಂದರೆ ಯಾವನು ದೇವರ ಚಿತ್ತದಂತೆ ಮಾಡುವನೋ ಅವನೇ ನನ್ನ ಸಹೋದರನೂ ನನ್ನ ಸಹೋದರಿಯೂ ನನ್ನ ತಾಯಿಯೂ ಆಗಿದ್ದಾರೆ ಅಂದನು.
ಯೇಸು ಅವನಿಗೆ ಪ್ರತ್ಯುತ್ತರವಾಗಿ--ಸೈತಾನನೇ, ನನ್ನ ಹಿಂದೆ ಹೋಗು; ಯಾಕಂದರೆ--ನೀನು ನಿನ್ನ ದೇವರಾದ ಕರ್ತನನ್ನು ಆರಾಧಿಸಿ ಆತನೊಬ್ಬನನ್ನೇ ಸೇವಿಸತಕ್ಕದ್ದು ಎಂದು ಬರೆದದೆ ಅಂದನು.
ಆದರೆ ಆತನು ತಿರುಗಿಕೊಂಡು ಅವರನ್ನು ಗದರಿಸಿ--ನೀವು ಯಾವ ತರವಾದ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು.
ಆಗ ಕರ್ತನು ತಿರುಗಿಕೊಂಡು ಪೇತ್ರನ ಕಡೆಗೆ ನೋಡಿದನು; ಆಗ ಪೇತ್ರನು--ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ಕರ್ತನು ಹೇಳಿದ್ದ ಮಾತನ್ನು ನೆನಪು ಮಾಡಿಕೊಂಡನು.
ಶರೀರವನ್ನು ಅನುಸರಿಸುವವರು ಅದಕ್ಕೆ ಸಂಬಂಧ ಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ; ಆತ್ಮನನ್ನನುಸರಿ ಸುವವರಾದರೋ ಆತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.
ಕರ್ತನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವದಕ್ಕಾಗಿ ಅವನ ಶರೀರವು ನಾಶವಾಗ ಬೇಕೆಂದು ನಮ್ಮ ಕರ್ತನಾದ ಯೇಸುವಿನ ಹೆಸರಿನಲ್ಲಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಬೇಕೆಂಬದೇ.
ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
ಪಾಪಮಾಡುವವರನ್ನು ಎಲ್ಲರ ಮುಂದೆಯೇ ಗದರಿಸು; ಇದರಿಂದ ಮಿಕ್ಕಾದವರಿಗೂ ಭಯವುಂಟಾಗುವದು.
ಈ ಸಾಕ್ಷಿಯು ನಿಜವೇ; ಆದದರಿಂದ ಅವರು ನಂಬಿಕೆಯಲ್ಲಿ ಸ್ವಸ್ಥ ಚಿತ್ತರಾಗಿರುವಂತೆ ಅವ ರನ್ನು ಕಠಿಣವಾಗಿ ಖಂಡಿಸು.
ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು.
ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ.
ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ.
ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.