ಆತನು ಜನರನ್ನು ತನ್ನ ಶಿಷ್ಯರ ಕೂಡ ತನ್ನ ಬಳಿಗೆ ಕರೆದು ಅವರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿ ಸಲಿ.
Cross references
ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು.
ಆದರೆ ನನ್ನ ಆಜ್ಞೆಗಳನ್ನು ಕೈಕೊಂಡು ನನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿ ತನ್ನ ಸಂಪೂರ್ಣವಾದ ಹೃದಯದಿಂದ ನನ್ನನ್ನು ಹಿಂಬಾಲಿಸಿದ ನನ್ನ ಸೇವಕನಾದ ದಾವೀದನ ಹಾಗೆ ನೀನು ಇರದೆ ನಿನಗೆ ಮುಂಚೆ ಇದ್ದವರೆಲ್ಲರಿಗಿಂತ ಕೆಟ್ಟದ್ದನ್ನು ಮಾಡಿದಿ.
ಆದದರಿಂದ ನಿನ್ನ ಬಲಗಣ್ಣು ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.
ಇಕ್ಕಟ್ಟಾದ ದ್ವಾರದೊಳಗೆ ನೀವು ಪ್ರವೇಶಿಸಿರಿ; ಯಾಕಂದರೆ ನಾಶನಕ್ಕೆ ನಡಿಸುವ ದ್ವಾರವು ಅಗಲವೂ ಮಾರ್ಗವು ವಿಶಾಲವೂ ಆಗಿದೆ. ಅದರೊಳಗೆ ಪ್ರವೇಶಿಸುವವರು ಬಹು ಜನ.
ತನ್ನ ಶಿಲುಬೆ ಯನ್ನು ತೆಗೆದುಕೊಳ್ಳದೆ ನನ್ನನ್ನು ಹಿಂಬಾಲಿಸುವವನು ನನಗೆ ಯೋಗ್ಯನಲ್ಲ.
ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
ಅವರು ಹೊರಗೆ ಬರುತ್ತಿರುವಾಗ ಕುರೇನ್ಯನಾದ ಸೀಮೋನನೆಂಬ ಮನುಷ್ಯನನ್ನು ಕಂಡು ಆತನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು.
ಆಮೇಲೆ ಆತನು ಜನರನ್ನೆಲ್ಲಾ ತನ್ನ ಬಳಿಗೆ ಕರೆದು ಅವರಿಗೆ--ನಿಮ್ಮಲ್ಲಿ ಪ್ರತಿಯೊಬ್ಬನು ನಾನು ಹೇಳುವದನ್ನು ಕೇಳಿ ಗ್ರಹಿಸಿರಿ;
ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು;
ಆಗ ಯೇಸು ಅವನನ್ನು ದೃಷ್ಟಿಸಿ ನೋಡುತ್ತಾ ಅವನನ್ನು ಪ್ರೀತಿಸಿ ಅವನಿಗೆ--ನಿನಗೆ ಒಂದು ಕಡಿಮೆ ಇದೆ; ನೀನು ಹೊರಟುಹೋಗಿ ನಿನಗಿರುವದನ್ನೆಲ್ಲಾ ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ಮತ್ತು ನೀನು ಬಂದು ಶಿಲುಬೆಯನ್ನು ತಕ್ಕೊಂಡು ನನ್ನನ್ನು ಹಿಂಬಾಲಿಸು ಅಂದ
ಆತನು ಅವರೆಲ್ಲರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;
ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ.
ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು.
ಅದರಂತೆಯೇ ನಿಮ್ಮಲ್ಲಿ ಯಾವನಾ ದರೂ ತನಗಿರುವವುಗಳನ್ನೆಲ್ಲಾ ಬಿಟ್ಟುಬಿಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
ಆಗ ಯೇಸು ಇವುಗಳನ್ನು ಕೇಳಿ ಅವನಿಗೆ--ಆದಾಗ್ಯೂ ನಿನಗೆ ಒಂದು ಕೊರತೆ ಇದೆ; ನಿನಗೆ ಇರುವದೆಲ್ಲವನ್ನು ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತು ಇರುವದು; ಬಂದು ನನ್ನನ್ನು ಹಿಂಬಾ ಲಿಸು ಅಂದನು.
ಅಮೇಲೆ ಜನರೆಲ್ಲರೂ ಕೇಳುತ್ತಿದ್ದಾಗ ಆತನು ತನ್ನ ಶಿಷ್ಯರಿಗೆ--
ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ.
ಸೀಮೋನ ಪೇತ್ರನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ? ಅನ್ನಲು ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಹೋಗುವಲ್ಲಿಗೆ ನೀನು ಈಗ ಬರಲಾರಿ; ತರುವಾಯ ನೀನು ನನ್ನನ್ನು ಹಿಂಬಾಲಿಸುವಿ ಅಂದನು.
ಆತನು ತನ್ನ ಶಿಲುಬೆಯನ್ನು ಹೊತ್ತುಕೊಂಡು ಕಪಾಲವೆಂದು ಕರೆಯಲ್ಪಟ್ಟ ಸ್ಥಳಕ್ಕೆ ಹೋದನು. ಅದು ಇಬ್ರಿಯ ಭಾಷೆಯಲ್ಲಿ ಗೊಲ್ಗೊಥಾ (ಬುರುಡೆಗಳ ಸ್ಥಳ) ಎಂದು ಕರೆಯಲ್ಪಡುತ್ತದೆ.
ಅವನು ಎಂಥ ಮರಣ ದಿಂದ ದೇವರನ್ನು ಮಹಿಮೆಪಡಿಸಬೇಕಾಗಿದೆ ಎಂದು ಸೂಚಿಸಿ ಆತನು ಇದನ್ನು ಹೇಳಿದನು. ಆತನು ಇದನ್ನು ಹೇಳಿದ ಮೇಲೆ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು.
ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
ಪಾಪದ ಶರೀರವು ನಾಶ ವಾಗಿ ನಾವು ಇನ್ನೂ ಪಾಪಕ್ಕೆ ದಾಸರಾಗಿರದಂತೆ ನಮ್ಮ ಹಳೇ ಮನುಷ್ಯನು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟ ನೆಂದು ತಿಳಿದಿದ್ದೇವೆ.
ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
ಆದದರಿಂದ ಬಲವುಳ್ಳವರಾದ ನಾವು ನಮ್ಮನ್ನೇ ಸಂತೋಷಪಡಿಸಿಕೊಳ್ಳದೆ ದುರ್ಬಲರ ಬಲಹೀನತೆಗಳನ್ನು ಸಹಿಸಿಕೊಳ್ಳತಕ್ಕದ್ದು.
ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು.
ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ.
ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ.
ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮ ವಿಷಯವಾಗಿ ನನಗಿರುವ ಸಂತೋಷದ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ.
ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
ಕ್ರಿಸ್ತನವರು ತಮ್ಮ ಶರೀರವನ್ನು ಅದರ ಇಚ್ಛೆ ದುರಾಶೆ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.
ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ.
ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.
ಹೀಗೆ ಆತನನ್ನೂ ಆತನ ಪುನರುತ್ಥಾನ ದಲ್ಲಿರುವ ಶಕ್ತಿಯನ್ನೂ ಆತನ ಬಾಧೆಗಳಲ್ಲಿ ಪಾಲುಗಾರ ನಾಗುವದನ್ನೂ ತಿಳಿದುಕೊಂಡು ಆತನ ಮರಣಕ್ಕೆ ಸರೂಪನಾಗುವೆನು.
ನಾನು ಈಗ ನಿಮಗೋಸ್ಕರ ಅನುಭವಿ ಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟ ಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸು ತ್ತೇನೆ.
ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.
ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ ಇತರರ ಕೆಲಸದಲ್ಲಿ ಮಾತ್ರ ತಲೆಹಾಕಿ ಅಕ್ರಮವಾಗಿ ನಡೆಯುತ್ತಾರೆಂದು ಕೇಳಿದ್ದೇವೆ.
ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ.
ಆದದರಿಂದ ನಾವು ಆತನ ನಿಮಿತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ ಪಾಳೆಯದ ಆಚೆ ಆತನ ಬಳಿಗೆ ಹೊರಟು ಹೋಗೋಣ.
ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ.
ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.