ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು.
Cross references
ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು.
ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟು ಬಂದಿತು; ಸಹಸ್ರ ಸಹಸ್ರ ವಾಗಿ ಆತನಿಗೆ ಸೇವೆಮಾಡಿದರು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ಕೂತು ಕೊಂಡರು. ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.
ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು.
ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗು ವಿರಿ; ಬೆಟ್ಟಗಳ ತಗ್ಗು ಆಚೆಲಿಗೆ ಮುಟ್ಟುವದು. ಹೌದು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ ನೀವು ಭೂಕಂಪಕ್ಕೆ ಓಡಿಹೋದ ಹಾಗೆ ಓಡಿಹೋಗು ವಿರಿ; ನನ್ನ ದೇವರಾದ ಕರ್ತನು ತನ್ನ ಪರಿಶುದ್ಧರೆ ಲ್ಲರ ಸಂಗಡ ಬರುವನು.
ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು.
ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ಒಪ್ಪಿಕೊಳ್ಳುವೆನು;
ಆತನು ಪ್ರತ್ಯುತ್ತರವಾಗಿ ಅವರಿಗೆ--ವ್ಯಭಿಚಾರಿಣಿ ಯಾದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡು ಕುತ್ತದೆ; ಪ್ರವಾದಿಯಾದ ಯೋನನಲ್ಲಿ ಆದ ಸೂಚಕ ಕಾರ್ಯವೇ ಹೊರತು ಅದಕ್ಕೆ ಇನ್ಯಾವ ಸೂಚಕಕಾರ್ಯ ವೂ ಕೊಡಲ್ಪಡುವದಿಲ್ಲ.
ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು;
ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.
ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು.
ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಅದಕ್ಕೆ ಯೇಸು--ನಾನೇ, ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಪಾರ್ಶ್ವದಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳಲ್ಲಿ ಬರುವದನ್ನೂ ನೀವು ನೋಡುವಿರಿ ಅಂದನು.
ಯಾವನಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವದಾದರೆ ಮನುಷ್ಯಕುಮಾರನು ತನ್ನ ಮತ್ತು ತನ್ನ ತಂದೆಯ ಪ್ರಭಾವದೊಡನೆಯೂ ಪರಿಶುದ್ಧದೂತರೊಂದಿಗೂ ಬರುವಾಗ ಅವನ ವಿಷಯದಲ್ಲಿ ಆತನು ನಾಚಿಕೊಳ್ಳು ವನು.
ಇದಲ್ಲದೆ ನಾನೂ ನಿಮಗೆ ಹೇಳುವದೇನಂದರೆ--ಯಾವನಾದರೂ ಮನು ಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ಮನುಷ್ಯ ಕುಮಾರನು ಸಹ ದೇವದೂತರ ಮುಂದೆ ಅವನನ್ನು ಒಪ್ಪಿಕೊಳ್ಳುವನು.
ಆದರೆ ನಾನು ನಿಮಗೆ ಹೇಳು ವದೇನಂದರೆ--ಇದ್ದ ಪ್ರತಿಯೊಬ್ಬನಿಗೆ ಕೊಡಲ್ಪಡು ವದು ಮತ್ತು ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ಅವನಿಂದ ತೆಗೆಯಲ್ಪಡುವದು.
ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
ಆತನು ಅವನಿಗೆ--ನಿನಗೆ ನಿಜನಿಜವಾಗಿ ಹೇಳುತ್ತೇನೆ. ಇಂದಿನಿಂದ ಪರಲೋಕವು ತೆರೆದಿರುವದನ್ನೂ ದೇವದೂತರು ಮನುಷ್ಯಕುಮಾರನ ಮೇಲೆ ಏರುವದನ್ನೂ ಇಳಿಯುವದನ್ನೂ ನೀವು ನೋಡುವಿರಿ ಅಂದನು.
ಆತನು ಮನುಷ್ಯಕುಮಾರ ನಾಗಿರುವದರಿಂದ ನ್ಯಾಯತೀರಿಸುವ ಅಧಿಕಾರವನ್ನು ಸಹ ಆತನಿಗೆ ಕೊಟ್ಟಿದ್ದಾನೆ.
ಜನರು ಆತ ನಿಗೆ--ಕ್ರಿಸ್ತನು ಸದಾಕಾಲವೂ ಇರುತ್ತಾನೆಂದು ನಾವು ನ್ಯಾಯಪ್ರಮಾಣದಲ್ಲಿ ಕೇಳಿದ್ದೇವೆ; ಹಾಗಾದರೆ ಮನುಷ್ಯಕುಮಾರನು ಎತ್ತಲ್ಪಡಬೇಕೆಂದು ನೀನು ಹೇಳುವದು ಹೇಗೆ? ಈ ಮನುಷ್ಯಕುಮಾರನು ಯಾರು ಎಂದು ಕೇಳಿದರು.
ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ.
ಹೀಗೆ ಮಕೆ ದೋನ್ಯದಲ್ಲಿಯೂ ಅಕಾಯದಲ್ಲಿಯೂ ನಂಬುವವ ರೆಲ್ಲರಿಗೆ ನೀವು ಮಾದರಿಯಾದಿರಿ;
ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು.
ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ.
ನಾವು ಬಾಧೆಪಡುವವರಾಗಿದ್ದರೆ ಆತನೊಂದಿಗೆ ನಾವು ಸಹ ಆಳುವೆವು; ಆತನನ್ನು ಅಲ್ಲಗಳೆದರೆ ಆತನು ಸಹ ನಮ್ಮನ್ನು ಅಲ್ಲಗಳೆಯುವನು.
ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.
ಐಗುಪ್ತದಲ್ಲಿನ ಐಶ್ವರ್ಯಗಳಿಗಿಂತಲೂ ಕ್ರಿಸ್ತನ ವಿಷಯವಾದ ನಿಂದೆಯು ಅಧಿಕ ಐಶ್ವರ್ಯ ವೆಂದೆಣಿಸಿಕೊಂಡನು; ಯಾಕಂದರೆ ಪ್ರತಿಫಲದ ಬಹು ಮಾನವನ್ನು ಅವನು ಗೌರವಿಸಿದನು.
ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
ಆದದರಿಂದ ನಾವು ಆತನ ನಿಮಿತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ ಪಾಳೆಯದ ಆಚೆ ಆತನ ಬಳಿಗೆ ಹೊರಟು ಹೋಗೋಣ.
ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.
ಯಾವನು ಮಗನನ್ನು ಅಲ್ಲಗಳೆ ಯುವನೋ ಅವನು ತಂದೆಗೆ ಸೇರಿದವನಲ್ಲ; ಯಾವನು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಗೂ ಸೇರಿದವನಾಗಿದ್ದಾನೆ.
ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ--ಇಗೋ, ಕರ್ತನು ತನ್ನ ಹತ್ತು ಸಾವಿರ ಪರಿಶುದ್ಧರನ್ನು ಕೂಡಿಕೊಂಡು